ಬೆಂಗಳೂರಿಗೆ ಅಂಟಿಕೊಂಡಂತೆ ಇನ್ನೂ 8 ಪಟ್ಟಣ ನಿರ್ಮಾಣ
ಬೆಂಗಳೂರು, ಫೆ.1: ಈ ಸುದ್ದಿಯನ್ನು ಕೇಳಿ ಆಯಾ ಭಾಗಗಳಲ್ಲಿ ಭೂಮಿಯ ಬೆಲೆ ಇಂದಿನಿಂದಲೇ ಗಗನಕ್ಕೆ ನೆಗೆಯುವುದು ನಿಶ್ಚಿತ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೃತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ಹಲವಾರು ಚುನಾವಣಾ-ಪ್ರೇರಿತ ನಿರ್ಧಾರಗಳಲ್ಲಿ ಇದೂ ಒಂದು. ಏನಪಾ ಅಂದರೆ 2,100 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ಸುತ್ತಮುತ್ತ 8 ಕ್ಲಸ್ಟರ್ ಟೌನ್ ಗಳು ತಲೆ ಎತ್ತಲಿವೆ.

ಈ ಯೋಜನೆಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನಿಂದ (ಎಡಿಬಿ) 1,400 ಕೋಟಿ ಸಾಲ ಪಡೆಯಲಾಗುತ್ತದೆ. ಉಳಿದ 700 ಕೋಟಿಯನ್ನು ರಾಜ್ಯ ಸರ್ಕಾರ (KUIDFC) ಭರಿಸಲಿದೆ ಎಂದು ಕಾನೂನು ಸಚಿವ ಸುರೇಶ ಕುಮಾರ್ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಆ ಎಂಟು ಟೌನ್ ಗಳು ಎಲ್ಲೆಲ್ಲಿ ಅಂದಿರಾ? Bangalore Metropolitan Region Development Authority (BMRDA) ವ್ಯಾಪ್ತಿಗೆ ಬರುವ ಈ ಟೌನ್ ಗಳು ಎಲ್ಲೆಲ್ಲಿ ನಿರ್ಮಾಣವಾಗಲಿವೆಯೆಂದರೆ...
1 ರಾಮನಗರ-ಚನ್ನಪಟ್ಟಣ
2 ಕನಕಪುರ
3 ನೆಲಮಂಗಲ-ದಾಬಸ್ಪೇಟೆ
4 ದೊಡ್ಡಬಳ್ಳಾಪುರ
5 ಆನೇಕಲ್-ಜಿಗಣಿ
6 ದೇವನಹಳ್ಳಿ-ವಿಜಯಪುರ
7 ಹೊಸಕೋಟೆ
8 ಮಾಗಡಿ
ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ (2006ರಲ್ಲಿ) ಬಿಡದಿ, ರಾಮನಗರ, ಸಾತನೂರು, ಸೋಲೂರು ಮತ್ತು ನಂದಗುಡಿ ಭಾಗಗಳಲ್ಲಿ ಇಂತಹುದೇ ಕ್ಲಸ್ಟರ್ ಪಟ್ಟಣಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಿದ್ದರು. ಆದರೆ ಅವರು ಮುಖ್ಯಮಂತ್ರಿ ಪದವಯಿಂದ ಇಳಿಯುತ್ತಿದ್ದಂತೆ ಮತ್ತು ಆಯಾ ಭಾಗಗಳಲ್ಲಿ ರೈತರ ತೀವ್ರ ವಿರೋಧದಿಂದಾಗಿ ಅದು ಕೈಗೂಡಲಿಲ್ಲ.
2011ರ ಜನಗಣತಿ ಪ್ರಕಾರ ಬಿಎಂಆರ್ಡಿಎಲ್ ವ್ಯಾಪ್ತಿಯಲ್ಲಿ ನಗರದ ಜನಸಂಖ್ಯೆ 1.1 ಕೋಟಿ. 2030ರ ವೇಳೆಗೆ ಇದು 1.8 ಕೋಟಿಗೆ ವೃದ್ಧಿಯಾಗುವ ಅಂದಾಜಿದೆ. ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ 2030ರ ವೇಳೆಗೆ ಈ ಎಲ್ಲ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ, ಮಳೆ ನೀರು ಚರಂಡಿ, ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಸಮಗ್ರ ಮೂಲಸೌಕರ್ಯ ಒದಗಿಸಲಿದೆ.
ಇದರ ಜತೆಗೆ ಸಂಚಾರ ಸಾರಿಗೆ ನೀಡುವಲ್ಲಿಯೂ ಆಲೋಚಿಸಲಾಗಿದೆ. ಇದಲ್ಲದೆ, ಎರಡು ಹಳಿಗಳ ರೈಲು ಲಿಂಕ್ ಸೇವೆಯನ್ನೂ ನೀಡಲಾಗುತ್ತದೆ. ಈ ಬಗ್ಗೆ ಯೋಜನೆ ಸಿದ್ಧವಾಗುತ್ತಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನೊಂದಿಗೆ ಚರ್ಚೆ ಆರಂಭವಾಗಿದ್ದು, ಎಲ್ಲವೂ ಪೂರ್ಣಗೊಂಡ ಮೇಲೆ ಯೋಜನೆ ಆರಂಭವಾಗುತ್ತದೆ. ಇದರ ಜತೆಗೆ, ತುಮಕೂರು ಹಾಗೂ ಕೋಲಾರವನ್ನೂ ಸಮಗ್ರ ಅಭಿವೃದ್ಧಿ ಮಾಡಲು ಆಸಕ್ತಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications