ಈಶ್ವರಪ್ಪ ಮಹಾನ್ ಪೆದ್ದ, ನಿಮ್ ಮನೆ ಹಾಳಾಗ್ ಹೋಗ..!

ಉಳ್ಳಾಲದಿಂದ ಮಲ್ಪೆವರೆಗೆ ಆಯೋಜಿಸಲಾಗಿರುವ 'ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ' ಪಾದಯಾತ್ರೆಯ ಮೂರನೇ ದಿನವಾದ ಗುರುವಾರ (ಜ 31) ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಈಶ್ವರಪ್ಪನವರಿಗೆ ತಾಕತ್ತಿನ ಬಗ್ಗೆ ಮಾತನಾಡುವುದು ಶೋಭೆ ತರುವುದಿಲ್ಲ.
ಅವರಿಗೆ ಮತ್ತು ಅವರ ಪಕ್ಷಕ್ಕೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಜನತಾ ನ್ಯಾಯಾಲಯಕ್ಕೆ ಬಂದು ನ್ಯಾಯ ಕೇಳಲಿ ಎಂದು ಸವಾಲೆಸಿದಿದ್ದಾರೆ.
ಜಗದೀಶ್ ಶೆಟ್ಟರ್ ಸರಕಾರ ಕೋಮಾದಲ್ಲಿದೆ. ಯಾವ ಪುರುಷಾರ್ಥಕ್ಕಾಗಿ ಬಜೆಟ್ ಮಂಡಿಸುತ್ತಾರೋ ದೇವರೇ ಬಲ್ಲ. ಜನರಿಗೆ ಕುಡಿಯಲು ನೀರಿಲ್ಲ, ದನಕರುಗಳಿಗೆ ಮೇವಿಲ್ಲ.
ಬೊಕ್ಕಸದಲ್ಲಿ ದುಡ್ಡಿಲ್ಲ, ನಿಮ್ ಮನೆ ಹಾಳಾಗಿ ಹೋಗ ಬಜೆಟ್ ಮಂಡಿಸ್ತಾರಂತೆ.. ಬಜೆಟ್ ಎಂದು ಸಿದ್ದು ಕಿಡಿಕಾರಿದ್ದಾರೆ.
ಕರಾವಳಿ ಭಾಗದಲ್ಲಿ ಕೋಮು, ಸೌಹಾರ್ದತೆಯನ್ನು ಕದಡಿದ ಹೆಸರು ಬಿಜೆಪಿಗೆ ಸಲ್ಲುತ್ತದೆ. ಕೋಮು ಸೌಹಾರ್ದತೆಯನ್ನು ಈ ಭಾಗದಲ್ಲಿ ಮತ್ತೆ ಸ್ಥಾಪಿಸುವುದು ನಮ್ಮ ಉದ್ದೇಶ.
ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಇದನ್ನು ಯಶಸ್ವಿ ಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗ ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ಮತ ನೀಡಿ ತಪ್ಪು ಮಾಡಿದೆವು ಎಂದು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಪರಮೇಶ್ವರ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕೇಂದ್ರದ ಮಾಜಿ ಸಚಿವರಾದ ಇಬ್ರಾಹಿಂ, ಜನಾರ್ದನ ಪೂಜಾರಿ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗೋಪಾಲ ಭಂಡಾರಿ, ಯು.ಟಿ.ಖಾದರ್, ಮಾಜಿ ಸಚಿವ ವಸಂತ ಸಾಲ್ಯಾನ್ ಮುಂತಾದವರು ಪಾದಯಾತ್ರೆಯಲ್ಲಿ ಕಾಲು ಸವೆಸಿದರು.
ಪಾದಯಾತ್ರೆ ಇಂದು ಸಂಪನ್ನ
ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ ಶುಕ್ರವಾರ (ಫೆ 1) ಸಂಪನ್ನಗೊಳ್ಳಲಿದೆ. ಉಡುಪಿ ನಗರದ ವಿವಿಧ ರಸ್ತೆಗಳಲ್ಲಿ ಪಾದಯಾತ್ರೆ ಸಾಗಲಿದ್ದು ಮಧ್ಯಾಹ್ನ ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಸಾರ್ವಜನಿಕ ಸಭೆಯ ಮೂಲಕ ಪಾದಯಾತ್ರೆಗೆ ತೆರೆ ಬೀಳಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications