ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ : ಶಾಸಕ

ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಅವರು, ನನ್ನನು ಮುಗಿಸಲು ಹುನ್ನಾರ ನಡೆಸಲಾಗಿದೆ. ನನ್ನ ಕೊಲೆಗೆ 25 ಲಕ್ಷ ರುಪಾಯಿ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದರು.
ಈ ಬಗ್ಗೆ ತಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಈ ಸಂಬಂಧ 18 ಜನರನ್ನು ಬಂಧಿಸಿದ್ದಾರೆ. ಆದರೆ ಆರೋಪಿಗಳು ಜೈಲಿನಿಂದಲೇ ನನ್ನ ಕೊಲೆಗೆ ಸ್ಕೆಚ್ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ತಮ್ಮ ಕೊಲೆಗೆ ಸಂಚು ನಡೆಸುತ್ತಿರುವವರ ಬಗ್ಗೆ ಮಾಹಿತಿ ನೀಡಿ ಎಂದು ಕೃಷ್ಣಪ್ಪ ಸರ್ಕಾರವನ್ನು ಆಗ್ರಹಿಸಿದರು.
ಕೃಷ್ಣಪ್ಪ ಅವರ ಆರೋಪಕ್ಕೆ ಉತ್ತರಿಸಿದ ಡಿಸಿಎಂ ಆರ್. ಅಶೋಕ್ ಅವರು ಈ ಬಗ್ಗೆ ತಾವು ಪೊಲೀಸರಿಂದ ಮಾಹಿತಿ ಪಡೆಯುತಿದ್ದು, ನಾಳೆ ಚರ್ಚೆ ಮಾಡಲಾಗುವುದು ಎಂದು ಉತ್ತರಿಸಿದರು.
ಈ ಹಿಂದೆಯೂ ಪರಿಷತ್ ಸದಸ್ಯ ಕೃಷ್ಣಪ್ಪ ಅವರು ತಮ್ಮ "ಕೊಲೆ ಸಂಚು' ಕುರಿತು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಜೈಲಿನಲ್ಲಿದ್ದ ಆರೋಪಿಗಳು ಅಲ್ಲಿಂದಲೇ ಕೊಲೆ ಸ್ಕೆಚ್ ಹಾಕಿದ್ದು, ಒರಿಸ್ಸಾ ಮೂಲದ ಸುಪಾರಿ ಕಿಲ್ಲರ್ಸ್ ಸಂಪರ್ಕ ಸಾಧಿಸಿದ್ದಾರೆ, ಕೊಲೆಗೆ 25 ಲಕ್ಷ ರು ಸುಪಾರಿ ನೀಡಲಾಗಿದೆ. ಎರಡನೇ ಕಂತಿನಲ್ಲಿ 10 ಲಕ್ಷ ರು ನೀಡಲು ಡೀಲ್ ಮಾಡಲಾಗಿದೆ ಎಂಬ ಮಾಹಿತಿಯನ್ನು ಕೃಷ್ಣಪ್ಪ ಹೊರ ಹಾಕಿದರು.
ನನ್ನನ್ನು ಕೊಲ್ಲಲ್ಲು ಯಾರು? ಯಾವ ಕಾರಣಕ್ಕೆ ಸಂಚು ರೂಪಿಸಿದ್ದಾರೆ? ಪ್ರಕರಣದ ತನಿಖೆ ಎಲ್ಲಿವರೆಗೂ ಬಂತು? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಕೃಷ್ಣಪ್ಪ ಹೇಳಿದರು. ಒಂದು ಹಂತದಲ್ಲಿ ಬೆತ್ತನಗೆರೆ ಶಂಕರನ ಸಹಚರರು ಕೃಷ್ಣಪ್ಪ ಅವರ ಮೇಲೆ ಕೊಲೆ ಸ್ಕೆಚ್ ಹಾಕಿರುವ ಬಗ್ಗೆ ಕೇಳಿ ಬಂದಿತ್ತು. ನಂತರ ನೆಲಮಂಗಲದ ಮಾದನಾಯಕನ ಹಳ್ಳಿಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications