ಪ್ರದರ್ಶನಕ್ಕಿದ್ದ ನಗ್ನ ವರ್ಣಚಿತ್ರಗಳಿಗೆ ಗೇಟ್ ಪಾಸ್

ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ಹಿಂದೂ ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸಲಾಗಿದ್ದು, ಹಿಂದೂ ಭಾವನೆಗಳಿಗೆ ಆ ಚಿತ್ರಗಳು ಧಕ್ಕೆ ತಂದಿವೆ ಎಂದು ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಆ ಚಿತ್ರಗಳನ್ನು ಚಿತ್ರಕಲಾ ಪ್ರದರ್ಶನದಿಂದ ತೆಗೆಸಿದ್ದಾರೆ.
ದೆಹಲಿಯ ಅನಿರುದ್ಧ್ ಸಾಯಿನಾಥ ಕೃಷ್ಣಮಣಿ ಎಂಬ ಕಲಾವಿದ ಬರೆದಿರುವ ಒಂದು ಚಿತ್ರದಲ್ಲಿ ನಗ್ನವಾಗಿರುವ ಶಿವ ಮತ್ತು ಮೇಲುಡುಪು ಧರಿಸದಿರುವ ಪಾರ್ವತಿ ಒಬ್ಬರನ್ನೊಬ್ಬರು ತುಟಿತುಟಿಗೆ ಚುಂಬಿಸುತ್ತಿದ್ದಾರೆ. ಮತ್ತೊಂದು ಚಿತ್ರದಲ್ಲಿ ಕಾಳಿ ದೇವಿಯನ್ನು ನಗ್ನವಾಗಿ ಚಿತ್ರಿಸಲಾಗಿದೆ. ಖಜುರಾಹೋ ಶಿಲ್ಪಕಲೆಗಳಿಂದ ಪ್ರೇರೇಪಿತರಾಗಿ ಈ ಚಿತ್ರಗಳನ್ನು ಬರೆದಿರುವುದಾಗಿ ಅನಿರುದ್ಧ್ ಹೇಳಿದ್ದಾರೆ.
ಈ ಚಿತ್ರಗಳ ಪ್ರದರ್ಶನ ಮುಂದುವರಿದರೆ ಹಿಂದೂಗಳ ಭಾವನೆ ಕೆರಳಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರಿಂದ ಅನಿರುದ್ಧ್ ಚಿತ್ರಿಸಿರುವ ಈ ಚಿತ್ರಗಳನ್ನು ಪ್ರದರ್ಶನದಿಂದ ತೆಗೆಯಲಾಗಿದೆ ಎಂದು ಚಿತ್ರಕಲಾ ಪರಿಷತ್ತಿನ ಮುಖ್ಯ ಆಡಳಿತಾಧಿಕಾರಿ ಶ್ರೀಧರ್ ಅವರು ಹೇಳಿದ್ದಾರೆ.
ಯುವ ಉದಯೋನ್ಮುಖ ಕಲಾವಿದರಿಗೆ ಅವರ ಕಲೆಯನ್ನು ಪ್ರದರ್ಶಿಸಲು ಚಿತ್ರಕಲಾ ಪರಿಷತ್ ಅವಕಾಶ ಮಾಡಿಕೊಡುತ್ತದೆ. ಈ ಬಾರಿ 40ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನಕ್ಕಿದ್ದವು. ಈ ಪ್ರದರ್ಶನವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಉದ್ಘಾಟಿಸಿದ್ದರು.
ಈ ಅಶ್ಲೀಲ ಚಿತ್ರಗಳನ್ನು ತೆಗೆಯದಿದ್ದರೆ ಚಿತ್ರಕಲಾ ಪರಿಷತ್ತಿನ ಎದುರುಗಡೆ ಪ್ರತಿಭಟನೆ ನಡೆಸುವುದಾಗಿ ಹಲವರು ಕರೆ ಮಾಡಿ ಹೇಳಿದ್ದರು. ಇದು ಕಲಾವಿದನ ಮೂಲಭೂತ ಸ್ವಾತಂತ್ರ್ಯ ಎಂದು ಹೇಳುವ ಕೆಲ ಕಲಾವಿದರು, ಇಂಥ ಚಿತ್ರಗಳನ್ನು ಪ್ರತಿಭಟಿಸುತ್ತಿರುವುದು ಸಾಂಸ್ಕೃತಿಕ ಭಯೋತ್ಪಾದನೆ ಎಂದು ಬಣ್ಣಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಹಿಂದೂ ದೇವತೆಗಳಾದ ಸರಸ್ವತಿ, ಭಾರತಮಾತೆ ಮುಂತಾದ ದೇವತೆಗಳನ್ನು ನಗ್ನವಾಗಿ ಚಿತ್ರೀಕರಿಸಿದ್ದಕ್ಕೆ, ಚಿತ್ರನಟಿ ಮಾಧುರಿ ಸೌಂದರ್ಯಕ್ಕೆ ಫಿದಾ ಆಗಿದ್ದ ಖ್ಯಾತ ಕಲಾವಿದ ಮಕ್ಬೂಲ್ ಫಿದಾ ಹುಸೇನ್ ಅವರನ್ನು ಬಹಿಷ್ಕರಿಸಲಾಗಿತ್ತು. ಅವರ ವಿರುದ್ಧ ಕೇಸ್ ದಾಖಲಾಗಿ, ಬಂಧಿಸಲು ವಾರಂಟ್ ಕೂಡ ನೀಡಲಾಗಿತ್ತು. ಅವರು 2006ರಲ್ಲಿ ಭಾರತ ಬಿಟ್ಟು ವಿದೇಶದಲ್ಲಿ ನೆಲೆಸಿ ಅಲ್ಲೇ ಅಸುನೀಗಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications