ಹೇಮಶ್ರೀ ಕೊಲೆ ಪ್ರಕರಣ, ಸುರೇಂದ್ರಗೆ ಜಾಮೀನಿಲ್ಲ

ಪ್ರಕರಣದಲ್ಲಿ ಜಾಮೀನಿಗಾಗಿ ಆರೋಪಿ ಸಲ್ಲಿಸಿದ ಅರ್ಜಿಯನ್ನು ಸೋಮವಾರ(ಫೆ.4) ಬೆಂಗಳೂರಿನ 9ನೇ ತ್ವರಿಗತಿಯ ನ್ಯಾಯಾಲಯ ಕೈಗೆತ್ತಿಕೊಂಡು, ಆರೋಪಿ ಸುರೇಂದ್ರ ಬಾಬು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಹೇಮಶ್ರೀ ಪತಿಯಾಗಿರುವ ಸುರೇಂದ್ರ ಬಾಬು, 2012ರಲ್ಲಿ ಹೇಮಶ್ರೀಯನ್ನು ಕಾರಿನಲ್ಲಿ ಹೈದರಾಬಾದ್ಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಬಲವಂತವಾಗಿ ತೋಟದ ಮನೆಯಲ್ಲಿ ಆಕೆ ಮೇಲೆ ಕ್ಲೋರೋ ಫಾರಂ ಪ್ರಯೋಗಿಸಿ ಆತ್ಯಾಚಾರವೆಸಗಲು ಪ್ರಯತ್ನಿಸಿದ್ದ.
ಕ್ಲೋರೋಫಾರಂ ಪ್ರಮಾಣ ಹೆಚ್ಚಾದ ಕಾರಣ ಹೇಮಶ್ರೀ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು. ಹೇಮಶ್ರೀಗೆ ಕ್ಲೋರೋಫಾರಂ ನೀಡಿದ್ದು ತಾನೇ ಎಂದು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಸುರೇಂದ್ರ ಬಾಬು ಅವರನ್ನು ಬಂಧಿಸಿದ್ದರು. ಸದ್ಯ ಸುರೇಂದ್ರ ಬಾಬು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜೈಲಿನಿಂದ ಹೊರ ಬರಲು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಅ.7ರ ಭಾನುವಾರ ಮುಂಜಾನೆ ಹೇಮಶ್ರೀಯನ್ನು ಅವರ ಮನೆಯಿಂದ ಕರೆದುಕೊಂಡು ನನ್ನ ಕಾರಿನಲ್ಲೆ ಕರೆದುಕೊಂಡು ಹೋದೆ. ಈ ವೇಳೆಗಾಗಲೇ ಆಕೆಗೆ ಕ್ಲೋರೋಫಾರ್ಮ್ ವಾಸನೆ ತೋರಿಸಿ ಪ್ರಜ್ಞೆ ತಪ್ಪುವಂತೆ ಮಾಡಿದೆ.
ನಂತರ ದಾರಿ ಮಧ್ಯೆ ಮೂರ್ನಾಲ್ಕು ಸಾರಿ ಹೇಮಶ್ರೀಗೆ ಎಚ್ಚರವಾದಾಗಲೂ ಅದೇ ರೀತಿ ಕ್ಲೋರೋಫಾಮ್ ನೀಡಿದೆ. ಹೀಗೆ ಹಲವು ಬಾರಿ ಕ್ಲೋರೋಫಾಮ್ ನೀಡಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ ಎಂದು ಸುರೇಂದ್ರ ಬಾಬು ತಪ್ಪೊಪ್ಪಿಗೆ ನೀಡಿದ್ದ.
ಸುರೇಂದ್ರ ಹೇಳಿಕೆ: ಹೇಮಶ್ರೀ ಸಾಯಿಸುವ ಉದ್ದೇಶ ನನಗಿರಲಿಲ್ಲ. ಸಾಯಿಸುವ ಉದ್ದೇಶ ಇದ್ದಿದ್ದರೆ ಇಲ್ಲಿ ತನಕ ಕಾಯಬೇಕಾಗಿಲ್ಲ. ಮದುವೆಯಾದಾಗಿನಿಂದ ಇಲ್ಲಿಯವರೆಗೂ ಆಕೆ ಮೈ ಮುಟ್ಟಲು ಬಿಟ್ಟಿರಲಿಲ್ಲ.
ಆಂಧ್ರಪ್ರದೇಶದ ಅನಂತಪುರಕ್ಕೆ ತೆರಳಿ ಸ್ನೇಹಿತ ಮುರಳಿಗೆ ದೂರವಾಣಿ ಕರೆ ಮಾಡಿ ನಾನು ನನ್ನ ಹೆಂಡ್ತಿ ಬಂದಿದ್ದೇವೆ. ಮೂರ್ನಾಲ್ಕು ದಿನ ನಿಮ್ಮ ಫಾರ್ಮ್ ಹೌಸ್ನಲ್ಲಿ ಉಳಿದುಕೊಳ್ಳುವುದಾಗಿ ಕೇಳಿ ಕೊಂಡೆ.
ಆದರೆ, ಮುರಳಿ ಊರಿನಲ್ಲಿ ಇಲ್ಲದ ಕಾರಣ ತನ್ನ ಕೆಲಸಗಾರರನ್ನು ಕಳುಹಿಸಿ ಅನಂತಪುರದ ಬಸ್ ನಿಲ್ದಾಣದಿಂದ ಫಾರ್ಮ್ ಹೌಸ್ಗೆ ಕರೆದುಕೊಂಡು ಹೋದರು. ಅಲ್ಲಿ, ನನ್ನ ಹೆಂಡ್ತಿಗೆ ವಾಂತಿ ಆಗಿ ಸುಸ್ತಾಗಿದ್ದಾಳೆ ಎಂದು ಹೇಳಿ ಅವರ ಸಹಾಯದಿಂದ ಹೇಮಶ್ರೀಯನ್ನು ಒಳಗೆ ಎತ್ತಿಕೊಂಡು ಹೋದೆ.
ಮತ್ತೆ ಬೆಳಗ್ಗೆ ಅಲ್ಲಿದ್ದ ಆಳುಗಳಿಗೆ ಕರೆದು ತಿಂಡಿ ತರುವಂತೆ ಕಿಟಕಿಯಿಂದಲೇ 100 ರು. ಕೊಟ್ಟು ಕಳುಹಿಸಿದೆ. ಈ ವೇಳೆಗಾಗಲೇ ಫಾರ್ಮ್ಹೌಸ್ನ ಆಳುಗಳು ರಾತ್ರಿ ಹೇಮಶ್ರೀಯನ್ನು ಎತ್ತಿಕೊಂಡು ರೂಂಗೆ ಬಿಟ್ಟ ವಿಚಾರ ಮುರಳಿಗೆ ತಿಳಿಸಿದ್ದರು. ಮತ್ತೆ ಬೆಳಗ್ಗೆ ಕಿಟಕಿಯಿಂದ ಹಣ ಪಡೆದ ಆಳು ಅನುಮಾನಗೊಂಡು ಹೇಮಶ್ರೀ ಇನ್ನೂ ಎಚ್ಚರಗೊಂಡಿಲ್ಲ.
ಇಲ್ಲಿ ಏನೋ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮುರಳಿಗೆ ತಿಳಿಸಿದ್ದ. ಕೆಲವೇ ಗಂಟೆಗಳಲ್ಲಿ ಮುರಳಿ ನನಗೆ ಕರೆ ಮಾಡಿ ಏನಾಗಿದೆ ನಿನ್ನ ಹೆಂಡ್ತಿಗೆ ಮೊದಲು ಫಾರ್ಮ್ ಹೌಸ್ ಬಿಟ್ಟು ಹೋಗು ಎಂದು ಸೂಚನೆ ನೀಡಿದ. ಆದರೆ, ಆ ವೇಳೆಗಾಗಲೇ ಕಾರು ಚಾಲಕ ಸತೀಶ್ನನ್ನು ಮನೆಗೆ ಕಳುಹಿಸಿದ್ದ ಕಾರಣ ಕಾರು ನನ್ನ ಬಳಿ ಇರಲಿಲ್ಲ.
ಇದನ್ನು ತಿಳಿದ ಮುರಳಿ ಆತನೇ ಟ್ಯಾಕ್ಸಿ ಮಾಡಿ ಬೆಂಗಳೂರಿಗೆ ಕಳುಹಿಸಿದ. ಅಲ್ಲಿಂದ ನಾನು ನೇರ ಬಂದು ಖಾಸಗಿ ಆಸ್ಪತ್ರೆಗೆ ಹೇಮಶ್ರೀಯನ್ನು ದಾಖಲಿಸಿದೆ. ಮುಂದಿನದ್ದು ನಿಮಗೆ ತಿಳಿದಿದೆ ಎಂದು ಸುರೇಂದ್ರಬಾಬು ಹೇಳಿಕೆ ನೀಡಿದ್ದಾನೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications