ರಾಜೇಶ್ ಎಕ್ಸ್ ಪೋರ್ಟ್ಸ್ ತೆಕ್ಕೆಗೆ 432 ಕೋಟಿ ಡೀಲ್

ಬೆಂಗಳೂರು ಮೂಲದ ರಾಜೇಶ್ ಎಕ್ಸ್ ಪೋಟ್ಸ್ ಸಂಸ್ಥೆಯ ಶುಭ್ ಜುವೆಲ್ಲರ್ಸ್ ಗೆ ಈಗ ಅರೇಬಿಯಾದಿಂದ ಭರ್ಜರಿ ಡೀಲ್ ಒದಗಿ ಬಂದಿದೆ. ಯುಎಇಯ ಅಲ್ ಮಲೆಕ್ ಜ್ಯುವೆಲ್ಲರಿ ಸಂಸ್ಥೆಯಿಂದ ಸುಮಾರು 432 ಕೋಟಿ ರು ಒಪ್ಪಂದಕ್ಕೆ ರಾಜೇಶ್ ಎಕ್ಸ್ ಪೋರ್ಟ್ಸ್ ಸಹಿ ಹಾಕಿದೆ. ಚಿನ್ನ ಮತ್ತು ವಜ್ರದ ಆಭರಣ ರಫ್ತು ಮಾಡಲು ರಾಜೇಶ್ ಎಕ್ಸ್ ಪೋರ್ಟ್ ಸಿದ್ಧತೆ ನಡೆಸಿದೆ.
ಮಾ.31ರೊಳಗೆ ಈ ಭಾರಿ ಮೊತ್ತ ಡೀಲ್ ಗೆ ಸಂಬಂಧಿಸಿದ ಸರಕು ರಫ್ತು ಮಾಡಬೇಕಿದೆ. ಬೆಂಗಳೂರಿನ ತಯಾರಿಕಾ ಘಟಕ ಸುಸಜ್ಜಿತವಾಗಿದ್ದು, ನುರಿತ ವಿನ್ಯಾಸಗಾರರನ್ನು ಹೊಂದಿದೆ. ಹೀಗಾಗಿ ಸಮಯಕ್ಕೆ ಸರಿಯಾಗಿ ಆಭರಣಗಳನ್ನು ತಲುಪಿಸುವ ನಿರೀಕ್ಷೆಯಿದೆ ಎಂದು ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುಖ್ಯಸ್ಥ ರಾಜೇಶ್ ಮೆಹ್ತಾ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಡಾ. ವಿಷ್ಣುವರ್ಧನ್ ಹಾಗೂ ಜಯಪ್ರದಾ ಅವರನ್ನು ರಾಯಭಾರಿಯನ್ನಾಗಿಸಿಕೊಂಡು ಸಂಸ್ಥೆ ಅಧಿಕ ಲಾಭ ಪಡೆದಿದೆ. ಇದಕ್ಕೆ ನಾವು ಆಭಾರಿಗಳಾಗಿದ್ದೇವೆ ಎಂದು ಸಂಸ್ಥೆ ಚೇರ್ ಮನ್ ರಾಜೇಶ್ ಮೆಹ್ತಾ ಹೇಳಿದ್ದಾರೆ.
ಕರ್ನಾಟಕದಲ್ಲಿ ಸುಮಾರು 40 ಕ್ಕೂ ಅಧಿಕ ಶುಭ್ ಜುವೆಲ್ಲರಿ ಶೋ ರೂಮ್ ಗಳನ್ನು ಆರಂಭಿಸಲಿದೆ. ಮುಂದಿನ ಎರಡು ತ್ರೈಮಾಸಿಕದಲ್ಲೇ ಮಳಿಗೆಗಳ ಸಂಖ್ಯೆ ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ ಸಂಸ್ಥೆ ಉತ್ತಮ ಪ್ರಗತಿ ಕಂಡಿದೆ ಎಂದು ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುಖ್ಯಸ್ಥ ರಾಜೇಶ್ ಮೆಹ್ತಾ ಹೇಳಿದ್ದಾರೆ.
ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗ ಸುಮಾರು 2000ಕ್ಕೂ ಅಧಿಕ ಮದುವೆ ಸಂಬಂಧಿಸಿದ ಆಭರಣಗಳ ವಿನ್ಯಾಸವನ್ನು ರೂಪಿಸುತ್ತಿದೆ.
ಬುಧವಾರ (ಫೆ.6) ಬಿಎಸ್ ಇಯಲ್ಲಿ ಕಂಪನಿ ಷೇರುಗಳು ಮಧ್ಯಾಹ್ನ 3.20 ಗಂಟೆ ವೇಳೆಗೆ 128.05 ರು ದರದಂತೆ ಶೇ 2.66 ರ ಇಳಿಕೆ ಕಂಡಿದೆ. ಇದೇ ವೇಳೆ ಎನ್ ಎಸ್ ಇನಲ್ಲಿ 128.15 ರು.ನಂತೆ ಶೇ 2.66 ರಷ್ಟು ಇಳಿಮುಖವಾಗಿದೆ.
ರಾಜೇಶ್ ಎಕ್ಸ್ ಪೋರ್ಟ್ ದಾಖಲೆ: ಕಳೆದ ತ್ರೈಮಾಸಿಕದಲ್ಲಿ ರಾಜೇಶ್ ಎಕ್ಸ್ ಪೋರ್ಟ್ಸ್ ಆದಾಯ ಶೇ 5.15 ರಷ್ಟು ಏರಿಕೆಯಾಗಿದ್ದು ಒಟ್ಟಾರೆ 4,967.1 ಕೋಟಿ ಗಳಿಸಿದೆ. ಈ ತ್ರೈಮಾಸಿಕದಲ್ಲಿ Earnings Per Share (EPS) 3.33ರು ಗೆ ಏರಿಕೆಯಾಗಿದೆ. ಕಳೆದ ತ್ರೈಮಾಸಿಕದಲ್ಲಿ 3.22 ರು. ನಷ್ಟಿತ್ತು.
ಶುಭ್ ಜ್ಯುವೆಲ್ಲರಿಸ್, ಕಳೆದ ವರ್ಷಾಂತ್ಯದ ಹಬ್ಬದ ಸಂದರ್ಭದಲ್ಲಿ ಸುಮಾರು ಶೇ 232 ರಷ್ಟು ಆದಾಯ ಗಳಿಸಿ ಭರ್ಜರಿ ವ್ಯಾಪಾರ ನಡೆಸಿತ್ತು. ಡಿ.31, 2011ಕ್ಕೆ ಕೊನೆಗೊಂಡ 3ನೇ ತ್ರೈಮಾಸಿಕದಲ್ಲಿ ಶೇ.51ರಷ್ಟು ಅಥವಾ 114.7ಕೋಟಿ ರು ಲಾಭ ಗಳಿಸಿತ್ತು.
ನಂತರದ ತ್ರೈಮಾಸಿಕದಲ್ಲಿ 107.07 ರಷ್ಟು ನಿವ್ವಳ ಲಾಭ, ಆದಾಯದಲ್ಲಿ ಶೇ 17 ರಷ್ಟು ಆದಾಯ ಹೆಚ್ಚಳ 6,745.47 ಕೋಟಿ ರು ಆದಾಯ ಗಳಿಸಿತ್ತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications