ಬೆಂಗಳೂರು : ವೈದ್ಯನ ನಿರ್ಲಕ್ಷ್ಯದಿಂದ ಮಗು ಸಾವು

ಮೂರು ವರ್ಷದ ಗಂಡು ಮಗು ಶಿರೀಶ್ ಮೃತಪಟ್ಟ ದುರ್ದೈವಿ. ಎಚ್ಎಸ್ಆರ್ ಬಡಾವಣೆಯಲ್ಲಿ ಅಣ್ಣಯ್ಯ ದಂತ ಚಿಕಿತ್ಸಾಲಯ ನಡೆಸುತ್ತಿರುವ ಡಾ. ರವಿರಾಜ್ ಹೊಡೆತ ತಿಂದಿರುವ ವೈದ್ಯ. ಹೆಚ್ಚಿನ ಚಿಕಿತ್ಸೆಗೆಂದು ತರುವಾಗಲೆ ಮಗು ಮೃತಪಟ್ಟಿದೆ ಎಂದು ಗಾರ್ಡನ್ ಸಿಟಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಶಿರೀಶ್ನ ಪಾಲಕರಾದ ಲೋಕೇಶ್ ಮತ್ತು ಆಶಾ ಎಂಬುವವರು ಹಲ್ಲಿನ ಚಿಕಿತ್ಸೆಗೆಂದು ಎಚ್ಎಸ್ಆರ್ ಲೇಔಟಿನಲ್ಲಿರುವ ಅಣ್ಣಯ್ಯ ಕ್ಲಿನಿಕ್ಕೆಗೆ ಕರೆದುಕೊಂಡು ಹೋಗಿದ್ದರು. ಮಗು ಹಟಮಾಡುತ್ತಿದ್ದರಿಂದ ಡಾ. ರವಿರಾಜ್ ಅನಸ್ತೀಶಿಯಾ ನೀಡಿದ್ದಾರೆ. ಅನಸ್ತೀಶಿಯಾ ಪ್ರಮಾಣ ಹೆಚ್ಚಾಗಿದ್ದರಿಂದ ಮಗುವಿನ ಆರೋಗ್ಯ ಏರುಪೇರಾಗಿದೆ. ಹೆದರಿದ ಡಾ.ರವಿರಾಜ್ ಮಗುವನ್ನು ಗಾರ್ಡನ್ ಸಿಟಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗ ಮಗು ಮೃತಪಟ್ಟಿದೆ.
ಶಿರೀಶ್ನ ತಾಯಿ ಹೇಳುವುದೇನೆಂದರೆ, ಮಗುವಿಗೆ ಅಧಿಕ ಪ್ರಮಾಣದಲ್ಲಿ ಅನಸ್ತೀಶಿಯಾ ನೀಡಿದ್ದರಿಂದಲೇ ಮಗು ಮೃತಪಟ್ಟಿದೆ. ಸುಮಾರ್ ಒಂದೂವರೆ ಗಂಟೆಗಳ ಕಾಲ ಮಗುವಿನ ಆರೋಗ್ಯದ ಸ್ಥಿತಿಯನ್ನು ತಮಗೆ ತಿಳಿಸದೆ ಕಡೆಗಳಿಗೆಯಲ್ಲಿ ಮಗುವನ್ನು ಗಾರ್ಡನ್ ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತೆಂದು ಅವರು ಆರೋಪಿಸುತ್ತಾರೆ.
ವೈದ್ಯರು ಹೇಳುವುದೇನೆಂದರೆ, ಅನಸ್ತೀಶಿಯಾ ನೀಡಿದ ಕೂಡಲೆ ಮಗು ವಾಂತಿ ಮಾಡಿಕೊಂಡಿದೆ. ಆದರೆ, ವಾಂತಿಯನ್ನು ಮಗು ನುಂಗಿದ್ದರಿಂದ ಉಸಿರುಗಟ್ಟಿ ಒದ್ದಾಡಲು ಪ್ರಾರಂಭಿಸಿದೆ. ಕ್ಲಿನಿಕ್ಕಿನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಲಕರಣಗಳು ಇಲ್ಲದ್ದರಿಂದ ಗಾರ್ಡನ್ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮಗು ಅಸುನೀಗಿದೆ.
ಮಗು ಶಿರೀಶ್ ಸತ್ತಿರುವುದು ತಿಳಿಯುತ್ತಿದ್ದಂತೆ ಅಣ್ಣಯ್ಯ ಆಸ್ಪತ್ರೆಗೆ ನುಗ್ಗಿದ ಸಂಬಂಧಿಕರು ವೈದ್ಯನ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಮಗುವನ್ನು ಕಿಮ್ಸ್ ಆಸ್ಪತ್ರೆಗೆ ಪೋಸ್ಟ್ ಮಾರ್ಟಂಗೆ ಕರೆದೊಯ್ಯಲಾಗಿದ್ದು, ಗುರುವಾರ ವರದಿ ಬರುವ ನಿರೀಕ್ಷೆಯಿದೆ. ಮಡಿವಾಳ ಪೊಲೀಸರು ಡಾ.ರವಿರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications