ಅತ್ಯಾಚಾರ: ಕೊನೆಗೂ ಸತ್ಯ ಒಪ್ಪಿಕೊಂಡ ಶೀಲಾ

ಆದರೆ ಮೊನ್ನೆ ರಾಜಧಾನಿಯಲ್ಲಿ ಯುವತಿಯ ಬಾಯಿಗೆ ಕಬ್ಬಿಣದ ರಾಡ್ ನುಗ್ಗಿಸಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ನಡೆದ ಮೇಲೆ ಶೀಲಾ ಮೇಡಂ ನಿಜಕ್ಕೂ ಧರಾಶಾಯಿಯಾಗಿದ್ದಾರೆ. ನಮ್ಮ ದಿಲ್ಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದು ತಮಗೆ ವೇದ್ಯವಾಗುತ್ತಿದೆ ಎಂದು ಶೀಲಾ ದೀಕ್ಷಿತ್ ತಲೆಯ ಮೇಲೆ ಕೈಹೊತ್ತುಕೊಂಡು ಹೇಳಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶೀಲಾ ದೀಕ್ಷಿತ್, 19 ವರ್ಷ ವಯಸ್ಸಿನ ಯುವತಿಯ ಮೇಲೆ ಮಂಗಳವಾರ ನಡೆದ ಅತ್ಯಾಚಾರ ಯತ್ನದ ಘಟನೆಯನ್ನು ಪ್ರಸ್ತಾಪಿಸುತ್ತಾ ದಿಲ್ಲಿ ತಮಗೆ ಸುರಕ್ಷಿತವಲ್ಲವೆಂಬ ಭಾವನೆ ಮಹಿಳೆಯರಲ್ಲಿ ಉಂಟಾಗಿದೆ. ಅವರಲ್ಲಿ ಭಯ ಅಧಿಕವಾಗುತ್ತಿದೆ. ಲಜಪತ್ ನಗರದಲ್ಲಿ ನಿನ್ನೆ ನಡೆದ ಅತ್ಯಾಚಾರ ಯತ್ನದ ಘಟನೆಯನ್ನು ಕೇಳಿ ನನಗೆ ದಿಗ್ಭ್ರಮೆಯಾಗಿದೆ. ನಮಗೆ ಇದೊಂದು ದೊಡ್ಡ ಹಿನ್ನಡೆ' ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಆದರೆ ಇದರಿಂದ ಧೃತಿಗೆಡುವುದಿಲ್ಲ. ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಶೀಲಾ ದೀಕ್ಷಿತ್ ಭರವಸೆ ನೀಡಿದರು.
ಇದೇ ವೇಳೆ, ದಿಲ್ಲಿಯಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ಹಿನ್ನೆಲೆಯಲ್ಲಿ ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ಶೀಲಾ ದೀಕ್ಷಿತ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 'ದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲವೆಂಬುದು ಈಗ ಸ್ಪಷ್ಟವಾಗಿದೆ. ದೆಹಲಿ ಮುಖ್ಯಮಂತ್ರಿ ಸತ್ಯವನ್ನೇ ಹೇಳಿದ್ದಾರೆ. ಅದರೆ ಇಷ್ಟೇ ಸಾಲದು. ಇದರಲ್ಲಿ ಅವರ ಹೊಣೆಗಾರಿಕೆ ಏನು ಎಂಬುದು ತಿಳಿಯಬೇಕಾಗಿದೆ' ಎಂದು ಕಿವಿಮಾತು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications