ದೆಹಲಿ ಸಿಎಂ ಶೀಲಾಗೆ ಮತ್ತೊಂದು 'ಆಘಾತ'

ಆರೋಪಿ ತಾರಿಕ್ ಷೇಕ್ (28) ಮ್ಯಾನೇಜ್ಮೆಂಟ್ ಪದವೀಧರ. ಈತ ತನ್ನ ವಿದೇಶಿ (ವಿದೇಶ ಯಾವುದು ಎಂಬುದನ್ನು ಬಹಿರಂಗಪಡಿಸಿಲ್ಲ) ಸ್ನೇಹಿತೆಯ ಜತೆ ಪಾರ್ಟಿಗೆ ಹೋಗಿದ್ದಾಗ ದಕ್ಷಿಣ ದೆಹಲಿಯ ಹೌಸ್ ಖಾಸ್ ಪ್ರದೇಶದಲ್ಲಿ ಈ ಕುಕೃತ್ಯವೆಸಗಿದ್ದಾನೆ.
ಆರೋಪಿ ತಾರಿಕನನ್ನು ಪೊಲೀಸರು ಬಂಧಿಸಿದ್ದು, ಯುವತಿಯ ರಾಯಭಾರ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಯುವತಿ ಗುರ್ ಗಾಂವ್ ಖಾಸಗಿ ಸಂಸ್ಥೆಯಲ್ಲಿ ತರಬೇತಿಯಲ್ಲಿರುವ ಅಧಿಕಾರಿ. ಇವರಿಬ್ಬರೂ 6 ತಿಂಗಳ ಹಿಂದೆ ಸ್ನೇಹಿತರಾಗಿದ್ದಾರೆ. ಆ ಸಲುಗೆಯಲ್ಲೇ ಸೋಮವಾರ ಸಂಜೆ ಮಾಳವಿಯಾ ನಗರದಲ್ಲಿ ಪಾರ್ಟಿಯೊಂದಕ್ಕೆ ಹೋಗಿದ್ದಾರೆ.
ಪಾರ್ಟಿ ನಂತರ ಆರೋಪಿ ತಾರಿಕ್, ಯುವತಿಯನ್ನು ತನ್ನ ಸ್ನೇಹಿತನ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಗೆ ಕುಡಿಯುಲು ಮದ್ಯ ನೀಡಿದ್ದಾನೆ. ಅದಾದನಂತರ, ತನ್ನದೇ ಕಾರಿನಲ್ಲಿ ಆಕೆಯನ್ನು ಮನೆಗೆ ಬಿಟ್ಟುಬರುವುದಾಗಿ ಪುಸಲಾಯಿಸಿದ್ದಾನೆ. ಆದರೆ ಸೀದಾ ತನ್ನ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಮತ್ತಷ್ಟು ಮದ್ಯ ಕುಡಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಅದಾದನಂತರ ಘಟನೆಯನ್ನು ಬಹಿರಂಗಪಡಿಸಿದರೆ ಅಥವಾ ಪೊಲೀಸರಿಗೆ ದೂರು ನೀಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಧಿತ ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾಳೆ.
ಬೆಳಗ್ಗೆಯ ವೇಳೆಗೆ ಯುವತಿ ಅವನ ಮನೆಯಿಂದ ಹೊರಬಿದ್ದು, ಸೀದಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಂಗಳವಾರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications