KJP ಅಧ್ಯಕ್ಷರಾಗಿ ಯಡಿಯೂರಪ್ಪಗೆ ನೈತಿಕ ಜಯ
ಬೆಂಗಳೂರು, ಫೆ.7: ಇತ್ತ ನಾನು ಕಟ್ಟಿಬೆಳೆಸಿದ ಹುತ್ತದೊಳಕ್ಕೆ ನುಸುಳಿದ ಯಡಿಯೂರಪ್ಪ ನನ್ನನ್ನೇ ಪಕ್ಷದಿಂದ ಹೊರಹಾಕಿದ್ದೂ ಅಲ್ಲದೆ ಜೀವಬೆದರಿಕೆ ಒಡ್ಡುತ್ತಿದ್ದಾರೆ. ನನ್ನನ್ನು ರಕ್ಷಿಸಿ ಎಂದು ಅತ್ಯಪರೂಪದ ಪ್ರಕರಣವೊಂದರಲ್ಲಿ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನಕುಮಾರ್ ನೆರೆ ರಾಜ್ಯದ ಮುಖ್ಯಮಂತ್ರಿಯೊಬ್ಬರ ಮೊರೆಹೋದ ಸಂದರ್ಭದಲ್ಲೇ ಅವರಿಗೆ ಚುನಾವಣೆ ಆಯೋಗದಲ್ಲಿ ತೀವ್ರ ಹಿನ್ನಡೆಯುಂಟಾಗಿದೆ.
ಯಡಿಯೂರಪ್ಪಗೆ ಕೆಜೆಪಿ ಅಧ್ಯಕ್ಷ ಸ್ಥಾನ ಅಬಾಧಿತ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ ಜನತಾ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲು ತನ್ನದೇನು ಅಭ್ಯಂತರವಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗವು ಸ್ಪಷ್ಟಪಡಿಸಿದೆ.

ಇದರಿಂದ ಇಂದಿನಿಂದ ಕಾವೇರಿ ನೀರಿಗಾಗಿ ನಾಲ್ಕು ಹೆಜ್ಜೆ ಹಾಕಲು ನಿರ್ಧರಿಸಿರುವ ಯಡಿಯೂರಪ್ಪಗೆ ಹೊಸ ಹುರುಪು ಬಂದಂತಾಗಿದೆ. ಆದರೆ ರಾಜಕೀಯ ಚಿತಾವಣೆ ಮೇರೆಗೆ ಏಕಾಏಕಿ ಯಡಿಯೂರಪ್ಪಗೆ ಟಾಂಗ್ ನೀಡಲು ಮುಂದಾಗಿದ್ದ ಕೆಜೆಪಿ ಸಂಸ್ಥಾಪಕ ಪದ್ಮನಾಭಗೆ ರಾಜಕೀಯವಾಗಿ ತೀವ್ರ ಹಿನ್ನಡೆಯುಂಟಾಗಿದೆ.
ಇದೇ ವೇಳೆ, ಆಯೋಗದ ಈ ನಿರ್ಧಾರದಿಂದಾಗಿ ಕೆಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಎದ್ದಿದ್ದ ವಿವಾದಕ್ಕೆ ಮಂಗಳ ಹಾಡಲಾಗಿದೆ. ಇದರೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಯಡಿಯೂರಪ್ಪ ಅಧಿಪತ್ಯದಲ್ಲಿ ಕೆಜೆಪಿ ಪೂರ್ಣಪ್ರಮಾಣದ ಹೋರಾಟ ನಡೆಸಬಹುದಾಗಿದೆ.
'ತಮ್ಮನ್ನು ಸಂಸ್ಥಾಪಕ ಅಧ್ಯಕ್ಷ ಎಂದು ಘೋಷಿಸಿಕೊಂಡು ಪದ್ಮನಾಭ ಪ್ರಸನ್ನಕುಮಾರ್ ಇತ್ತೀಚೆಗೆ ಚುನಾವಣೆ ಆಯೋಗಕ್ಕೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಆಯೋಗವು ತಳ್ಳಿಹಾಕಿದೆ. ಯಡಿಯೂರಪ್ಪ ನೇತೃತ್ವದ ಕೆಜೆಪಿ ಸಲ್ಲಿಸಿದ್ದ ದಾಖಲೆ ಪರಿಶೀಲಿಸಿದ ಆಯೋಗವು, ಯಡಿಯೂರಪ್ಪ ಅವರು ಕೆಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಕ್ರಿಯೆಯು ತನಗೆ ಒಪ್ಪಿತವಾಗಿದೆ ಎಂದು ತಿಳಿಸಿರುವುದಾಗಿ' ಕೆಜೆಪಿ ವಕ್ತಾರ ರಾಜೇಂದ್ರ ಗೋಖಲೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ತಿಂಗಳು 29ರಂದು ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್ ಅವರನ್ನು KJP ಅಧ್ಯಕ್ಷ ಯಡಿಯೂರಪ್ಪ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತುಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications