ಸದ್ಯ ತಡವಾಗಿಯಾದರೂ ಗಲ್ಲಿಗೇರಿಸಿದರು: ಮೋದಿ

ಇನ್ನು ಸಂಸತ್ ಮೇಲೆ ದಾಳಿ ನಡೆಸಿದ್ದು ಇದೇ ಅಫ್ಜಲ್ ಗುರು ಎಂದು ಕೋರ್ಟಿನಲ್ಲಿ ಸಾಬೀತಾಗುತ್ತಿದ್ದಂತೆ ಯಾವಾಗ ಅವನಿಗೆ ಗಲ್ಲು ಎಂದು ಕೇಳುತ್ತಿದ್ದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಇಂದು ಅಫ್ಜಜಲಿಗೆ ಮರಣದಂಡನೆ ವಿಧಿಸಿರುವುದನ್ನು ಸ್ವಾಗತಿಸಿದ್ದಾರೆ.
'ವಿಳಂಬವೇ ಆದರೂ ಕೊನೆಗೂ ಗಲ್ಲಿಗೇರಿಸಿದರಲ್ಲಾ ಎಂಬ ಸಮಾಧಾನವಿದೆ' ಎಂದು - Der aaye durast aaye (Better late than never) - ಈಗ್ಗೆ ಕೆಲವೇ ಕ್ಷಣಗಳ ಹಿಂದೆ ಮೋದಿ ಟ್ವೀಟ್ ಮಾಡಿದ್ದಾರೆ. ಬಹುತೇಕ ಮಂದಿಯ ಮನದಾಳದ ಮಾತೂ ಇದೇ ಆಗಿದೆ.
ತಿಹಾರ್ ಜೈಲಿನಲ್ಲೇ ಅಂತ್ಯಸಂಸ್ಕಾರ: ಗಲ್ಲಿಗೆ ಕೊರಳೊಡ್ಡಿದ ಅಫ್ಜಲ್ ಗುರುನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ. ತಿಹಾರಿ ಜೈಲಿನ ಆವರಣದಲ್ಲೇ ಧಪನ್ ಮಾಡಲು ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮಧ್ಯೆ, ಅಫ್ಜಲ್ ಗುರುನ ಸೋದರಿಯರು ಅಂತ್ಯ ಸಂಸ್ಕಾರ ನಾವೇ ಮಾಡುತ್ತೇವೆ. ಶವವನ್ನು ನಮಗೆ ಒಪ್ಪಿಸಿ ಎಂದಿದ್ದಾರೆ.
ಆದರೆ ಭದ್ರತೆಯ ಕಾರಣ ಗಲ್ಲಿಗೇರಿಸಿದ ವ್ಯಕ್ತಿಯ ಶವ ಸಂಸ್ಕಾರವನ್ನು ಜೈಲಿನಲ್ಲೇ ಮಾಡುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
2001ರಲ್ಲಿ ದಾಳಿ ನಡೆಸಿದ್ದ ಎಲ್ಲ 5 ಉಗ್ರರನ್ನು ಪ್ರತಿದಾಳಿಯಲ್ಲಿ ಸಾಯಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಅಫ್ಜಲ್ ಗುರುನನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications