ನಮಕ್ ಹರಾಮ್ ಅಫ್ಜಲ್ ಗುರು ನಿರ್ನಾಮ
ನವದೆಹಲಿ, ಫೆ.9: ಮುಂಬೈ ದಾಳಿಕೋರ ಕಸಬ್ ನನ್ನು ಸದ್ದಿಲ್ಲದೆ ಗಲ್ಲುಗೇರಿಸಿದಂತೆ ಸಂಸತ್ ಮೇಲಿನ ದಾಳಿಯ ರೂವಾರಿ 43 ವರ್ಷದ ಅಫ್ಜಲ್ ಗುರುನನ್ನು ಸಹ ಇಂದು ಬೆಳಗ್ಗೆ 8 ಗಂಟೆಯಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತಾಜಾ ವರದಿಗಳ ಪ್ರಕಾರ ಕೇಂದ್ರ ಗೃಹ ಕಾರ್ಯದರ್ಶಿ ಆರ್ ಕೆ ಸಿಂಗ್ ಅವರು ಅಫ್ಜಲ್ ಗುರುನನ್ನು ಇಂದು ಬೆಳಗ್ಗೆ ನೇಣಿಗೆ ಹಾಕಿರುವುದನ್ನು ಖಚಿತಪಡಿಸಿದ್ದಾರೆ. ಇದನ್ನು ಕೇಳಿ ಜನ ಸಂಭ್ರಮಿಸತೊಡಗಿದ್ದಾರೆ.

2001 ಡಿಸೆಂಬರ್ 13ರಂದು ಅಧಿವೇಶನ ನಡೆಯುತ್ತಿದ್ದಾಗಲೇ 5 ಮಂದಿ ಉಗ್ರರು ಸಂಸತ್ತಿನ ಮೇಲೆ ದಾಳಿ ನಡೆಸಿ, 12 ಮಂದಿಯ ಸಾವಿಗೆ ಕಾರಣವಾಗಿದ್ದ ಜೈಷೆ ಮೊಹಮದ್ ಉಗ್ರ ಸಂಘಟನೆಯ ಭಯೋತ್ಪಾದಕನೇ ಈ ಅಫ್ಜಲ್ ಗುರು. ವೈದ್ಯ ಪದವಿ ಪಡೆದಿದ್ದ ಅಫ್ಜಲ್ ಗುರು, ಐಎಎಸ್ ಪರೀಕ್ಷೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿದ್ದ. ಆದರೆ ಭಯೋತ್ಪಾದನೆಯ ಜಾಲದಲ್ಲಿ ಸಿಕ್ಕಿಬಿದ್ದ.
ಕೇಂದ್ರ ಗೃಹ ಸಚಿವಾಲಯದಿಂದಾಗಲಿ ಅಥವಾ ತಿಹಾರ್ ಜೈಲಿನ ಅಧಿಕಾರಿಗಳಾಗಲಿ ಅಫ್ಜಲ್ ಗುರುನನ್ನು ಗಲ್ಲಿಗೆ ಏರಿಸಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವುದನ್ನುತಡಮಾಡಿತಾದರೂ ಇದೀಗ ಖಚಿತಪಡಿಸಿದೆ. ಕಸಬ್ ವಿಷಯದಲ್ಲೂ ಸರಕಾರ ಇಂತಹುದೇ ನಿರ್ಧಾರ ತೆಗೆದುಕೊಂಡಿತ್ತು ಎಂಬುದು ಗಮನಾರ್ಹ.
ಜನವರಿ 26ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಫ್ಜಲ್ ಗುರು ಕೋರಿದ್ದ ಗಲ್ಲು ರದ್ದು ಕೋರಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.
2004ರಲ್ಲಿ ಸುದೀರ್ಘ ವಿಚಾರಣೆಯ ನಂತರ ಸುಪ್ರೀಂಕೋರ್ಟ್ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಕಾಯಂ ಮಾಡಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications