ರಾಜೀನಾಮೆ ಪ್ರಕಟಿಸಿದ ಪೋಪ್, ಅಮೆನ್

ಪೋಪ್ ಹುದ್ದೆ ತ್ಯಜಿಸುವ ಬಗ್ಗೆ ಸ್ವತಃ ಪೋಪ್ ಬೆನೆಡಿಕ್ಟ್ ಅವರು ಘೋಷಣಾ ಪತ್ರ ಹೊರಡಿಸಿದ್ದಾರೆ. ಅನಾರೋಗ್ಯದ ಕಾರಣ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ಪೋಪ್ ಹೇಳಿದ್ದಾರೆ.
ಹೊಸ ಪೋಪ್ ಹುಡುಕಾಟದಲ್ಲಿ ತೊಡಗಿರುವ ವ್ಯಾಟಿಕನ್ ಸಿಟಿ, ಆದಷ್ಟು ಬೇಗ ಹೊಸ ಪೋಪ್ ಆಯ್ಕೆ ಮಾಡಲಾಗುವುದು ಎಂದಿದೆ. ಬವಾರಿಯಾ ಮೂಲದ ಕಾರ್ಡಿನಲ್ ಜೋಸೆಫ್ ಅಲೋಸಿಯಸ್ ರಾಜ್ನಿಗರ್ ಅವರು 2005, ಏಪ್ರಿಲ್ 19 ರಂದು ಪೋಪ್ ಹುದ್ದೆಗೇರಿದ್ದರು.
ಪೋಪ್ ನೀಡಿರುವ ಪ್ರಕಟನೆಯ ಪೂರ್ಣ ಪಾಠ ಇಲ್ಲಿದೆ ಹಾಗೂ ಆಡಿಯೋ ರೇಡಿಯೋ ವ್ಯಾಟಿಕನ್ ನಲ್ಲಿ ಲಭ್ಯವಿದೆ.. ಆಸಕ್ತರು ಕೇಳಿ
ಪೋಪ್ ವಿವಾದಗಳ ಹಿನ್ನೋಟ: ಕೃತಕ ಗರ್ಭಧಾರಣೆಗೆ ಪೋಪ್ ರೆಡ್ ಸಿಗ್ನಲ್: ಕೃತಕ ಗರ್ಭಧಾರಣೆ ಮೂಲಕ ಹಣ ಮಾಡುವ ಪ್ರವೃತ್ತಿಯನ್ನು ಕೈ ಬಿಡಬೇಕು. ಇದರಿಂದ ಸಿಗುವ ಸುಲಭದ ಗಳಿಕೆ ಪಾಪದ ಸಾಲಿಗೆ ಸೇರುತ್ತದೆ ಎಂದು ಪೋಪ್ ಹೇಳಿದ್ದರು.
ರೋಮ್ ನ ಚರ್ಚ್ ನ ಸಿಬ್ಬಂದಿಗಳು ವೀರ್ಯದಾನ ಮಾಡುವುದನ್ನು ನಿಷೇಧಿಸಲಾಗಿತ್ತು. ಆದರೆ, ಬಂಜೆತನ ಹೋಗಲಾಡಿಸಲು ನಡೆಯುತ್ತಿರುವ ಸಂಶೋಧನೆಗೆ ವ್ಯಾಟಿಕಾನ್ ಚರ್ಚ್ ಬೆಂಬಲ ವ್ಯಕ್ತಪಡಿಸಿದ್ದು ವಿರೋಧಾಭಾಸವಾಗಿತ್ತು.
ಕ್ರೈಸ್ತರ ಪರಮ ಗುರು ಪೋಪ್ ಬೆನೆಡಿಕ್ಟ್ XVI ಹಾಗೂ ಈಜಿಪ್ಟಿನ ಇಮಾಮ್ ತುಟಿಗೆ ತುಟಿ ಒತ್ತಿರುವ ಚಿತ್ರವನ್ನು ಬೆನೆಟ್ಟನ್ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು.
ಎಚ್ಐವಿ(ಏಡ್ಸ್) ಹರಡುವಿಕೆಯನ್ನು ತಡೆಯಲು ಬಯಸುವ ಪುರುಷ ವ್ಯಭಿಚಾರಿಗಳು ಕೆಲವೊಂದು ಸಂದರ್ಭಗಳಲ್ಲಿ ಕಾಂಡೊಮ್ ಬಳಸುವುದು ಸಮರ್ಥನೀಯ. ಸೋಂಕು ಹರಡುವಿಕೆ ಅಪಾಯವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಹೆಚ್ಚಾಗಿದೆ ಎಂದು ಪೋಪ್ ತಮ್ಮ ಪುಸ್ತಕದಲ್ಲಿ ಹೇಳಿದ್ದರು.
2009ರಲ್ಲಿ ಆಫ್ರಿಕಾ ಭೇಟಿ ವೇಳೆ, ಏಡ್ಸ್ ಸಮಸ್ಯೆಗೆ ಕಾಂಡೊಮ್ ಪರಿಹಾರವಲ್ಲ. ಆದರೆ ಅದು ಪ್ರತಿಕೂಲ ಸ್ಥಿತಿಯನ್ನು ಹೆಚ್ಚಿಸುತ್ತದೆ ಎಂಬ ಬೆನೆಡಿಕ್ಟ್ ಹೇಳಿಕೆಗೆ ಯೂರೋಪಿಯನ್ ದೇಶಗಳು ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಸಂಘಟನೆಗಳು ಹಾಗೂ ವಿಜ್ಞಾನಿಗಳಿಂದ ತೀವ್ರ ವಿರೋಧ ವ್ಯಕ್ತಗೊಂಡಿತ್ತು.
ಅಮೆರಿಕದ ಕ್ಯಾಥೊಲಿಕ್ ಮಹಿಳಾ ಪಾದ್ರಿಯೊಬ್ಬರು ಬರೆದಿರುವ ಈ ಪುಸ್ತಕವು ಹಸ್ತಮೈಥುನ, ಸಲಿಂಗಕಾಮ ಮತ್ತು ವಿಚ್ಛೇಧನದಂತಹ ವಿಷಯದ ಬಗ್ಗೆ ಪೋಪ್ ಕಿಡಿಕಾರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications