ದೇವೇಗೌಡ ನಿಜಕ್ಕೂ ಮುತ್ಸದ್ದಿ: ಸಿಎಂ ಶೆಟ್ಟರ್

'ಎಚ್ಡಿ ದೇವೇಗೌಡ ಅವರು ಕಾವೇರಿ ನದಿ ವಿಚಾರದಲ್ಲಿ ಮೊದಲಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ತಮ್ಮ ಅಪಾರ ಅನುಭವವನ್ನು ಆಗಾಗ್ಗೆ ರಾಜ್ಯ ಸರಕಾರಕ್ಕೆ ನೀಡುತ್ತಾ ಬಂದಿದ್ದಾರೆ. ಮೊನ್ನೆಯೂ ಅಷ್ಟೇ ಖುದ್ದಾಗಿ ತಾವೇ ಬಂದು ಉಪಯುಕ್ತ ಸಲಹೆ ನೀಡಿದ್ದಾರೆ. ಅವರೊಬ್ಬ Statesman' ಎಂದು ಸಿಎಂ ಶೆಟ್ಟರ್ ಕೆಳಮನೆಯಲ್ಲಿ ಹೇಳಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಕಾವೇರಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್ ಅವರು, ದೇವೇಗೌಡ ಅವರು ಒಬ್ಬ ಅನುಭವಿ ನಾಯಕರು. ಅವರು ಪ್ರಧಾನಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಿನ್ನೆ ತಮ್ಮನ್ನು ಭೇಟಿ ಮಾಡಿದ ಗೌಡರು, ಕಾವೇರಿ ವಿಚಾರವಾಗಿ ಕೆಲವು ಪ್ರಮುಖ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿಲ್ಲ. ನೀರಾವರಿ ಹಾಗೂ ರಸ್ತೆ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರ ಎಂದು ಹೇಳಿದರು.
ಬಾಯಿಗೆ ಕಪ್ಪು ಬಟ್ಟೆ: ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಖಂಡಿಸಿ ದೇವೇಗೌಡರು ಇಂದು ಬೆಳಗ್ಗೆ ಬನ್ನಪ್ಪ ಪಾರ್ಕ್ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ 11.30ಕ್ಕೆ ಪಾದಯಾತ್ರೆ ಆರಂಭಿಸಿದರು. ಈ ವೇಳೆ, ಮಧುಗಿರಿ ಶಾಸಕಿ ಅನಿತಾ ಕುಮಾರಸ್ವಾಮಿ, ಸಂಸದ ಚಲುವರಾಯಸ್ವಾಮಿ ಸೇರಿದಂತೆ ಅನೇಕರು ಗೌಡರ ಜತೆ ಹೆಜ್ಜೆ ಹಾಕಿದರು.
ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾದಯಾತ್ರೆಯಲ್ಲಿ ಹೆಜ್ಜೆಹಾಕಿದ ದೇವೇಗೌಡರಿಗೆ ಸಾವಿರಾರು ಮಂದಿ ಸಾಥ್ ನೀಡಿದರು. ಪಾದಯಾತ್ರೆಯಲ್ಲಿ ಭಾವಗಿಸಿರುವ ಮಹಿಳೆಯರು ಖಾಲಿ ಬಿಂದಿಗೆಗಳನ್ನು ತಲೆಯೆ ಮೇಲೆ ಹೊತ್ತು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮೌನವಾಗಿ ಪ್ರತಿಭಟಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications