ಪಕ್ಷೇತರರ 'ಕೈ' ಹಾದಿ ಅಷ್ಟೊಂದು ಸುಗಮವಲ್ಲ

ಮುಖ್ಯವಾಗಿ ಪಕ್ಷೇತರ ಶಾಸಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅಪಾರ ಸಂಖ್ಯೆಯಲ್ಲಿದ್ದು, ಅವರೆಲ್ಲ ಈ ಪಕ್ಷೇತರ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವುದರ ವಿರುದ್ಧ ಸಿಡಿದೆದ್ದಿದ್ದಾರೆ. ಮೊದಲಿನಿಂದಲೂ ನಾವು ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೇವೆ. ಇವರಿಂದ ರಾಜ್ಯದ ಜನತೆಗೆ ಕಳೆದೈದು ವರ್ಷಗಳಲ್ಲಿ ಆಗಿರುವ ಅನ್ಯಾಯ ಸಾಕಷ್ಟಿದೆ. ಈಗ ಅವರಿಗೆ ಟಿಕೆಟ್ ನೀಡಿದರೆ ನಮಗೂ ಅನ್ಯಾವಾಗುವುದಿಲ್ಲವೇ?' ಎಂದು ಅವರು ಪಟ್ಟು ಹಿಡಿದಿದ್ದಾರೆ.
ಇನ್ನು ಕೆಲವು ಕ್ಷೇತ್ರಗಳಲ್ಲಿ ಕೇವಲ ತಮ್ಮ ನಾಯಕರ ಮನವೊಲಿಸಿದರೆ ಸಾಲದು, ದೇವಾನುದೇವತೆಗಳ ಅನುಗ್ರಹವೂ ಬೇಕಾದೀತು ಎಂದು ಸಿಕ್ಕಸಿಕ್ಕ ದೇವಸ್ಥಾನಗಳಲ್ಲಿ ಪೂಜಾಕೈಂಕರ್ಯ ನಡೆಸಿದ್ದಾರೆ.
ಈ ಬಗ್ಗೆ ಚರ್ಚಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಆಮಂತ್ರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಫೆ. 15 ಮತ್ತು 16ರಂದು ಈ ಸಭೆ ನಡೆಸಲಿದ್ದಾರೆ.
ಪಾವಗಡದ ಪಕ್ಷೇತರ ಶಾಸಕ ವೆಂಕಟರಮಣಪ್ಪ ಅವರೀಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಇಲ್ಲವಾದಲ್ಲಿ ತಮ್ಮ ಪುತ್ರ ಬ್ಯಾಡನೂರು ಜಿಪಂ ಸದಸ್ಯ ಹೆಚ್ ವಿ ವೆಂಕಟೇಶ್ ಅವರಿಗಾದರೂ ಟಿಕೆಟ್ ಸಿಗಲಿ ಎಂಬ ಆಕಾಂಕ್ಷೆ ಹೊತ್ತಿದ್ದಾರೆ. ಆದರೆ ಇವರಿಗೆ ಟಿಕೆಟ್ ಕೈತಪ್ಪಲಿ ಎಂದು ಸ್ಥಳೀಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ನಡೆದಿದ್ದಾರೆ.
ಮೂರು ಬಾರಿ ವಿಧಾನಸಭಾ ಸದಸ್ಯರಾಗಿಯೂ ಶಾಸಕ ವೆಂಕಟರಮಣಪ್ಪ, ಇದುವರೆಗೆ ಜನಹಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದ ಕಾರಣ ಪಾವಗಡ, ರಾಜ್ಯದ ಅತಿ ಹಿಂದುಳಿದ ತಾಲೂಕಾಗಿ ಉಳಿದೆ ಎಂಬುದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾದ ಡಾ. ಡಿ ಪರಮೇಶ್ ನಾಯ್ಕ, ಕೋರ್ಟ್ ನರಸಪ್ಪ, ಡಾ. ಸೇವಾ ನಾಯ್ಕ ಅವರುಗಳ ಆರೋಪ.
ಪಾವಗಡ ತಾಲೂಕಿನ ಶನೇಶ್ವರ ದೇವಸ್ಥಾನ, ನಾಗಲಮಡಿಕೆಯ ಸುಬ್ರಮಣ್ಯೇಶ್ವರ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ ಮತ್ತಿತರೆ ದೇವಸ್ಥಾನಗಳಲ್ಲಿ ಕಾಂಗ್ರೆಸ್ ನಾಯಕರು ಪೂಜೆ ಸಲ್ಲಿಸಿ, ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications