ದುರಂತ: ಗೀತಿಕಾ ಹಾದಿ ಹಿಡಿದ ತಾಯಿ ಅನುರಾಧ

ಗೀತಿಕಾ ಆತ್ಮಹತ್ಯಾ ಪ್ರಕರಣದ ಪ್ರಮುಖ ಆರೋಪಿ ಹರ್ಯಾಣದ ಮಾಜಿ ಸಚಿವ ಗೋಪಾಲ್ ಕಾಂಡ ಅವರ ವಿರುದ್ಧ ಹಾಕಿರುವ ಕೇಸುಗಳನ್ನು ಹಿಂಪಡೆಯುವಂತೆ ಗೀತಿಕಾ ಅವರ ಕುಟುಂಬದ ಮೇಲೆ ಭಾರಿ ಒತ್ತಡ ಹೇರಲಾಗಿತ್ತು. ಕಾಂಡ ಅವರ ಕಡೆಯವರ ಒತ್ತಡ ತಾಳಲಾರದೆ ಗೀತಿಕಾ ಅವರ ತಾಯಿ ಸಾವಿಗೆ ಶರಣಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಾಜಿ ಸಚಿವ ಗೋಪಾಲ್ ಕಾಂಡಾ ವಿರುದ್ದ ಹೆಚ್ಚುವರಿ ಚಾರ್ಚ್ ಶೀಟ್ ಸಲ್ಲಿಸಿದ್ದರು. ಗೀತಿಕಾ ಶರ್ಮಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುರುದ್ದೇಶದಿಂದಲೇ ಆಕೆಯನ್ನು ಎಮಿರೈಟ್ಸ್ ಏರ್ ಲೈನ್ಸ್ ಕೆಲಸ ಬಿಡಿಸಿ ತನ್ನ ಕಂಪನಿಗೆ ಸೆಳೆಯಲು ಯತ್ನಿಸಿದ್ದ ಎಂಬುದರ ಬಗ್ಗೆ ಪೊಲೀಸರು ಸಾಕ್ಷಿ ಕಲೆ ಹಾಕಿದ್ದಾರೆ.
ಗೋಪಾಲ್ ಕಾಂಡಾ ಅವರ ಇಂಗಿತದಂತೆ ಅವರ ಬಲಗೈ ಬಂಟ ಚನ್ ಶಿವರೂಪ್ ಸಿಂಗ್ ಅವರು ಆಕೆ ವೃತ್ತಿ ಜೀವನಕ್ಕೆ ಮಾರಕವಾಗಿದ್ದರು. ಎಮಿರೈಟ್ಸ್ ನಿಂದ ಆಕೆಯನ್ನು ಕರೆಸಿಕೊಂಡು ಅನುಭವಿಸಲು ಕಾಂಡಾ ರೂಪಿಸಿದ್ದ ಯೋಜನೆಗೆ ಶಿವರೂಪ್ ಸಿಂಗ್ ಸಹಕರಿಸಿದ್ದರು. ಆದರೆ,ಕಾಂಡಾ ಬುದ್ಧಿ ಬಗ್ಗೆ ಅರಿವಿದ್ದ ಗೀತಿಕಾ ಮತ್ತೊಮ್ಮೆ ಎಂಡಿಎಲ್ ಆರ್ ಏರ್ ಲೈನ್ಸ್ ಸೇರಲು ನಿರಾಕರಿಸಿದ್ದರು ಎಂದು ಪೊಲೀಸರು ತಮ್ಮ ಚಾರ್ಚ್ ಶೀಟ್ ನಲ್ಲಿ ಉಲ್ಲೇಖಿಸಿದ್ದು, ಹೆಚ್ಚುವರಿ ಮುಖ್ಯ ಮೆಟ್ರೊ ಪಾಲಿಟನ್ ಮ್ಯಾಜಿಸ್ಟ್ರೇಟ್ ಡಿಕೆ ಜಾಂಗಲ ಅವರಿಗೆ ಸಲ್ಲಿಸಿದ್ದಾರೆ.
23 ವರ್ಷ ವಯಸ್ಸಿನ ಗೀತಿಕಾ ಅವರು ದೆಹಲಿಯ ವಾಯುವ್ಯ ಭಾಗದಲ್ಲಿರುವ ಅಶೋಕ್ ವಿಹಾರ್ ನ ಅಪಾರ್ಟ್ಮೆಂಟ್ ನಲ್ಲಿ ಆಗಸ್ಟ್ 5,2012ರಂದು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಗೀತಿಕಾ ಅವರ ಸೂಸೈಡ್ ನೋಟ್ ನಲ್ಲಿ ಗೋಪಾಲ್ ಕಾಂಡಾ, ಕಾಂಡಾ ಬಂಟ ಅರುಣ್ ಚಡ್ಡಾ ಅವರ ಮೇಲೆ ಆರೋಪ ಎಲ್ಲಾ ರೀತಿಯ ಕಿರುಕುಳ ಹೊರೆಸಲಾಗಿತ್ತು.
ಪ್ರಕರಣ ಕುತ್ತಿಗೆಗೆ ಬಂದ ಮೇಲೆ ಹರ್ಯಾಣದ ಸಚಿವ ಸ್ಥಾನಕ್ಕೆ ಗೋಪಾಲ್ ಕಾಂಡಾ ರಾಜೀನಾಮೆ ನೀಡಿದ್ದರು. ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ಆರೋಪಿ ಎಚ್ ಆರ್ ವಿಭಾದ ಚನ್ ಶಿವರೂಪ್ ಸಿಂಗ್ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿಯಲ್ಲಿದೆ.
ಇದಕ್ಕೂ ಮುನ್ನ ಗೋಪಾಲ್ ಕಾಂಡ ಮಹಾನ್ ಕಾಮುಕ, ಆಮೀರ್ ಖಾನ್ ಸಿನಿಮಾದಲ್ಲಿ ಚಾನ್ಸ್ ಕೊಡಿಸುತ್ತೀನಿ ಎಂದು ಹೇಳಿ ಹಾಲಿ ನಟಿಯೊಬ್ಬಳಿಗೆ ಮೋಸ ಮಾಡಿಬಿಟ್ಟಿದ್ದ ಎಂಬ ವಿಷಯವನ್ನು ಬಾಲಿವುಡ್ ನಟಿ ನೂಪುರ್ ಮೆಹ್ತಾ ಬಿಚ್ಚಿಟ್ಟಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications