ಹೋದಲ್ಲೆಲ್ಲ ನೀರು ಬಿಡುವ ಮಾತನ್ನಾಡುವ ಕುಮಾರಸ್ವಾಮಿ

ದಕ್ಷಿಣ ಕನ್ನಡದ ನೇತ್ರಾವತಿ ನದಿ ನೀರನ್ನು ಬಯಲುಸೀಮೆಗೆ ಹರಿಸಿಯೇ ಸಿದ್ಧ. ಮುಂದಿನ ಜೂನ್ ವೇಳೆಗೆ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದೇ ಆದರೆ ಕೇವಲ 48 ಗಂಟೆಯಲ್ಲಿ ನೇತ್ರಾವತಿ ನೀರನ್ನು ಹರಿಸಿಬಿಡುವುದಾಗಿ ಇತ್ತೀಚೆಗೆ ಒಂದೇ ಸಮನೆ ಹೇಳುತ್ತಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಇದೀಗ ಚಾಮರಾಜನಗರ ಜಿಲ್ಲೆ ನಂಜನಗೂಡಿನ ನುಗು ಏತ ನೀರಾವರಿ ಯೋಜನೆ ಜಾರಿಗೊಳಿಸುವುದಾಗಿ ಭರಪೂರ ಭರವಸೆ ನೀಡಿದ್ದಾರೆ.
ತಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ... ಕಬಿನಿ ಭಾಗದ ಸಾವಿರಾರು ರೈತರ ಕನಸಾದ ಬೀರಾಲು ನುಗು ಏತ ನೀರಾವರಿ ಯೋಜನೆಯನ್ನು 20,000 ಎಕರೆ ಕೃಷಿ ನೀರಾವರಿಗಾಗಿ ಅನುಷ್ಠಾನಕ್ಕೆ ತರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಾಜಾ ಆಗಿ ಹೇಳಿದ್ದಾರೆ.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ನಿನ್ನೆ ಶುಕ್ರವಾರ ಮಾತನಾಡಿದ ಕುಮಾರಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮಾಜಿ ಸಚಿವ ಎಂ ಮಹದೇವ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ನುಗು ಏತ ನೀರಾವರಿ ಜಾರಿ ಮಾಡುತ್ತೇವೆ ಎಂದು ವಾಗ್ದಾನ ನೀಡಿದ್ದರು. ಆದರೆ ಬಿಜೆಪಿ ಸರಕಾರದ ಅಧಿಕಾರ ಇನ್ನೇನು ಕೊನೆಗೊಳ್ಳುತ್ತಿದೆ. ಆದರೂ ಈ ಯೋಜನೆ ಜಾರಿಯಾಗಿಲ್ಲ ಎಂದು ಕಿಡಿಕಾರಿದರು.
ಕಾವೇರಿ ವಿಚಾರದಲ್ಲಿ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕದ ಜನತೆ ದಂಗೆ ಏಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications