Get Updates
Get notified of breaking news, exclusive insights, and must-see stories!

'ಟಿಪ್ಪು ಬೇಡ್ವೇ ಬೇಡ, ಕಿಟ್ಟೆಲ್ ಹೆಸರು ಇಡಿ'

Name Srirangapatna University for Minorities after Kittel social activist TJ Abraham
ಮಂಗಳೂರು, ಫೆ. 16: ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ವಿಶ್ವವಿದ್ಯಾಲಯಕ್ಕೆ ಕನ್ನಡದ ಬಗ್ಗೆ ವಿಶೇಷ ಒಲವನ್ನು ಹೊಂದಿದ್ದ ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ ಅವರ ಹೆಸರನ್ನಿಡಬೇಕು ಎಂದು ಕೆಥೋಲಿಕ್ ಕ್ರೈಸ್ತ ಪರ ಸಂಘಟನೆಗಳ ಒತ್ತಾಯಕ್ಕೆ ಮತ್ತಷ್ಟು ಬಲ ಬಂದಿದೆ.

ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿವಿಗೆ ಟಿಪ್ಪು ಸುಲ್ತಾನ್ ಹೆಸರಿಡುವುದೆಂದರೆ ಕ್ರೈಸ್ತರಿಗೆ ಗಾಯದ ಮೇಲೆ ಬರೆ ಎಳೆದಂತೇ ಸರಿ ಎಂದು ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ವ್ಯಾಖ್ಯಾನಿಸಿದ್ದಾರೆ

'ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತರ ಕೊಡುಗೆ ಅಪಾರ. ಕ್ರೈಸ್ತರನ್ನು ವಿರೋಧಿಸುವವರೂ ಇದನ್ನು ಒಪ್ಪುತ್ತಾರೆ. ಆದರೆ, ಅಲ್ಪಸಂಖ್ಯಾತರ ವಿವಿ ಸ್ಥಾಪನೆ ವಿಷಯ ಬಂದಾಗ ಕೇಂದ್ರ ಸರಕಾರ ಸೌಜನ್ಯಕ್ಕಾದರೂ ಕ್ರೈಸ್ತರನ್ನು ಪರಿಗಣಿಸದಿರುವುದು ಖಂಡನೀಯ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಕೇಂದ್ರ ಸರಕಾರ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ವಿವಿ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಟಿಪ್ಪು ಸುಲ್ತಾನ್ ಹೆಸರಿಡುವುದು ಸರಿಯಲ್ಲ' ಎಂದು ಮತ್ತೊಮ್ಮೆ ಅವರು ಪ್ರತಿಪಾದಿಸಿದ್ದಾರೆ.

'ದೇಶದಲ್ಲಿ ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರಷ್ಟೇನಾ? ಬರೀ ಮತ ಬ್ಯಾಂಕ್ ರಾಜಕಾರಣ ಇವರದು. ಅದೇ ಟಿಪ್ಪು ಬದಲು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನಿಡಲು ಕೇಂದ್ರ ಸರಕಾರ ಸಮಾಲೋಚಿಸಿದ್ದರೆ ನಾವೇ ಅಲ್ಲ, ಹಿಂದೂಗಳೂ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ' ಎಂದು ಅಭಿಪ್ರಾಯಪಟ್ಟಿದ್ದಾರೆ.

'ಶ್ರೀರಂಗಪಟ್ಟಣ ಕ್ರೈಸ್ತರಿಗೆ ಅವಮಾನದ ಸ್ಥಳ. ಟಿಪ್ಪು ಸುಲ್ತಾನ್ ತನ್ನ ಆಳ್ವಿಕೆ ಅವಧಿಯಲ್ಲಿ ಕರಾವಳಿ ಪ್ರದೇಶದಲ್ಲಿದ್ದ ಕ್ರೈಸ್ತರನ್ನು ಸೆರೆ ಹಿಡಿದು ಶ್ರೀರಂಗಪಟ್ಟಣಕ್ಕೆ ಕರೆ ತರುತ್ತಿದ್ದ. ಬಳಿಕ ಅವರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಎಂದು ಸ್ವತಃ ಟಿಪ್ಪುವಿನ ಪುತ್ರ ಗುಲಾಂ ಮೊಹಮ್ಮದ್ ತನ್ನ ಕೃತಿಯಲ್ಲಿ ಬಹಿರಂಗಪಡಿಸಿದ್ದಾನೆ. ಹಾಗಾಗಿ ಶ್ರೀರಂಗಪಟ್ಟಣ ಕ್ರೈಸರಿಗೆ ನೋವು ತರುವ ಸ್ಥಳ. ಕ್ರೈಸ್ತರನ್ನು ಅವಮಾನಿಸಿ, ಮತಾಂತರಗೊಳಿಸಿದ ಸ್ಥಳದಲ್ಲಿ ಸ್ಥಾಪನೆಯಾಗುವ ವಿವಿಗೆ ಟಿಪ್ಪು ಸುಲ್ತಾನ್ ಹೆಸರಿಡಲು ಅವಕಾಶ ನೀಡುವುದಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಟಿಪ್ಪು ಸುಲ್ತಾನ್ ಮಹಾನ್ ಹೋರಾಟಗಾರನಿರಬಹುದು. ಆದರೆ, ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ತಾನು ಜಯಿಸಿದ ಪ್ರದೇಶಗಳ ಹೆಸರನ್ನೂ ಬದಲಾಯಿಸಿದ್ದ. ಮೈಸೂರಿಗೆ ನಜರಾಬಾದ್ ಎಂಬ ಹೆಸರಿಟ್ಟಿದ್ದ. ಹಾಗೆಯೇ, ಹಲವು ಪ್ರದೇಶಗಳ ಹೆಸರು ಬದಲಿಸಿದ್ದ' ಎಂದು ಅವರು ಹೇಳಿದ್ದಾರೆ.

'ಕನ್ನಡಕ್ಕೆ ಪ್ರಥಮ ಇಂಗ್ಲಿಷ್- ಕನ್ನಡ ನಿಘಂಟು ನೀಡಿದ ಗೌರವಾನ್ವಿತ ಫರ್ಡಿನ್ಯಾಂಡ್ ಕಿಟ್ಟೆಲ್ ಅವರು ಭಾಷೆಗೆ ನೀಡಿದ ಕೊಡುಗೆ ಪ್ರಶ್ನಾತೀತ. ಹಾಗಾಗಿ ಉದ್ದೇಶಿತ ವಿವಿಗೆ ಕಿಟ್ಟೆಲ್ ಅವರ ಹೆಸರಿಡಬೇಕು. ಈ ಕುರಿತು ಶನಿವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು' ಎಂದು ಅವರು ತಿಳಿಸಿದ್ದಾರೆ.

'ವಿವಿಗೆ ಟಿಪ್ಪು ಸುಲ್ತಾನ್ ಹೆಸರಿಡುವ ಪ್ರಸ್ತಾವದ ಹಿಂದೆ ರಾಜಕೀಯ ದುರುದ್ದೇಶವಿದೆ. ವೋಟ್‌ ಬ್ಯಾಂಕ್ ಉದ್ದೇಶದಿಂದ ಕೇಂದ್ರ ಈ ಪ್ರಯತ್ನಕ್ಕೆ ಮುಂದಾಗಿದ್ದು, ಇದಕ್ಕೆ ಆಸ್ಪದ ನೀಡುವುದಿಲ್ಲ' ಎಂದು ಎಚ್ಚರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+