ಕಾವೇರಿ ತಣ್ಣಿಗಾಗಿ '40 ಜಯ' ತಂದುಕೊಡಿ ಸಾಕು
ಚೆನ್ನೈ, ಫೆ.16: ಕೇಂದ್ರ ಸರಕಾರವನ್ನು ತನ್ನ ಆಣತಿಗೆ ತಕ್ಕಂತೆ ಕುಣಿಸುತ್ತಾ ಕಾವೇರಿ ನ್ಯಾಯ ಮಂಡಳಿ ಐತೀರ್ಪು ಅಧಿಸೂಚನೆಯನ್ನು ಕರ್ನಾಟಕಕ್ಕೆ ಮರಣಶಾಸನವಾಗಿಸಲು ಪಣತೊಟ್ಟಿರುವ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅದನ್ನೇ ನೆಪವಾಗಿಸಿಕೊಂಡು 40 ಸಂಸದ್ ಸ್ಥಾನಗಳನ್ನು ತನಗೆ ದಕ್ಕಿಸಿಕೊಡಲೇಬೇಕು ಎಂದು ತಮ್ಮ ಪಕ್ಷದ ಕಟ್ಟಾಳುಗಳಿಗೆ ಕಟ್ಟಾಜ್ಞೆ ಜಾರಿ ಮಾಡಿದ್ದಾರೆ.
ಇತ್ತೀಚೆಗೆ 66 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಕರ್ನಾಟಕದಿಂದ ಪಡೆಯಲು ತಾನು ಸಾಕಷ್ಟು ಕಷ್ಟಪಟ್ಟಿರುವುದಾಗಿ ಹೇಳಿಕೊಂಡಿರುವ 'ತಮಿಳ್ ಸೆಲ್ವಿ' ಜಯಲಲಿತಾ, ಕೇಂದ್ರದ ಮೇಲೆ ಒತ್ತಡ ಹೇರುವಂತಾಗಬೇಕಿದ್ದರೆ, ಮುಂದಿನ ಲೋಸಸಭೆ ಚುನಾವಣೆಯಲ್ಲಿ ಅಷ್ಟೂ ಸ್ಥಾನಗಳಲ್ಲಿ (ಅಂದರೆ ಈಗಿರುವುದಕ್ಕಿಂತ ನಾಲ್ಕು ಪಟ್ಟು ಹೆಚ್ಚು- ತಮಿಳುನಾಡಿನಿಂದ 39 ಮತ್ತು ಪಕ್ಕದ ಪಾಂಡಿಚೆರಿಯಿಂದ 1 ಸೀಟು) ತಮ್ಮ ಎಐಎಡಿಎಂಕೆಗೆ 'ಜಯ' ತಂದುಕೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸಂದರ್ಭ: ಶುಕ್ರವಾರ ನಡೆದ ಎಐಎಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯ ಅದ್ದೂರಿ ಸಮಾವೇಶ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ. ತಮ್ಮ 65ನೇ ಹುಟ್ಟುಹಬ್ಬಕ್ಕೆ ಮುನ್ನ ತಮಿಳ್ ಸೆಲ್ವಿ ಜಯಾ ಈ ಕಾರ್ಯಕ್ರಮ ಆಯೋಜಿಸಿದ್ದರು. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ 1948ರ ಫೆಬ್ರವರಿ 24ರಂದು ಜಯಾ ಜನನ.
'ನೋಡಿ, ಕರ್ನಾಟಕ ಒಂದು ಹನಿ ನೀರನ್ನೂ ಬಿಡಲು ಸಿದ್ಧವಿರಲಿಲ್ಲ. ಕೇಂದ್ರವಂತೂ ಕಣ್ಮುಚ್ಚಿ ಕುಳಿತಿತ್ತು. ಬಳಿಕ ನಾವು ನಮ್ಮ ಬವಣೆಗಳೊಂದಿಗೆ ಸುಪ್ರೀಂ ಕೋರ್ಟಿನ ಮೊರೆ ಹೊಕ್ಕೆವು. ನೀರು ಬಿಡುವುದಿಲ್ಲವೆಂದು ಪಟ್ಟು ಹಿಡಿದು ಕೂತಿದ್ದ ಕರ್ನಾಟಕದಿಂದ 66 ಟಿಎಂಸಿ ಅಡಿ ನೀರು ತರಿಸಿಕೊಳ್ಳುವಲ್ಲಿ ಯಶಸ್ವಿಯಾದೆವು' ಎಂದಿದ್ದಾರೆ.
ಇದು ಇಷ್ಟಕ್ಕೇ ಮುಗಿದಿಲ್ಲ. ಕಾವೇರಿ ನ್ಯಾಯ ಮಂಡಳಿಯ ಅಂತಿಮ ತೀರ್ಪನ್ನು ಗೆಜೆಟಿಯರ್ನಲ್ಲಿ ಪ್ರಕಟಿಸಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮೀನ ಮೇಷ ಎಣಿಸುತ್ತಿದೆ. ಕಾಂಗ್ರೆಸ್ ಮೇಲೆ ಒತ್ತಡ ಹೇರಿ ನಮ್ಮ ಕೆಲಸ ಮಾಡಿಸಿಕೊಳ್ಳಬೇಕು ಅಂದರೆ ಗರಿಷ್ಠ ಸೀಟುಗಳೊಂದಿಗೆ ನಾವು ಹೋರಾಡಬೇಕಾಗುತ್ತದೆ.
ಅದಕ್ಕೇ ಹೇಳಿದ್ದು, 40 ಸೀಟು ತನ್ನಿ' ಎಂದು ಜಯಾ ಫರ್ಮಾನು ಹೊರಡಿಸಿದ್ದಾರೆ. ಇದನ್ನು ಶ್ರದ್ಧೆಯಿಂದ ಕೇಳಿಸಿಕೊಂಡ ಕಾರ್ಯಕರ್ತರು ಮೇಡಂ ಜಯಾಗೆ ಜಯ ತಂದುಕೊಡುವುದು ಗ್ಯಾರಂಟಿ ಎಂದು ಅವರ ಮುಂದೆ ಫುಲ್ ಡೈವ್ ಹೊಡೆದು (ಒಮ್ಮೆ ಮೇಲಿನ ಚಿತ್ರ ನೋಡಿ) ಹೇಳಿದ್ದಾರೆ.
ಅಂತಾರಾಜ್ಯ ಜಲ ವಿವಾದ ವಿಷಯದಲ್ಲಿ ಬಿಜೆಪಿ- ಕಾಂಗ್ರೆಸ್ ಎಂಬ ಎರಡೂ ರಾಷ್ಟ್ರೀಯ ಪಕ್ಷಗಳು ಕರ್ನಾಟಕವನ್ನೇ ಬೆಂಬಲಿಸುತ್ತಿವೆ (ಇದು ಎಷ್ಟರ ಮಟ್ಟಿಗೆ ನಿಜ ಎಂಬುದು ಕರ್ನಾಟಕದ ಮಂದಿಗೆ ಹನಿ ಹನಿಯೂ ಗೊತ್ತು) ಎಂದಿರುವ ಜಯಲಲಿತಾ, 'ನಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಮೊದಲು ನಮ್ಮ ಪಕ್ಷಕ್ಕೆ ಜಯವ ತಂದಿಡಿ' ಎಂದಿದ್ದಾರೆ.
ಹಿಂದಿನ ಡಿಎಂಕೆ ಸರಕಾರವನ್ನೂ ತರಾಟೆಗೆ ತೆಗೆದುಕೊಂಡ ಜಯಾ, ಸ್ವಾರ್ಥ ಲಾಲಸೆಯಲ್ಲಿ ಡಿಎಂಕೆಯು ಅಂತಿಮ ಅಧಿಸೂಚನೆ ಪ್ರಕಟಿಸುವ ಬಗ್ಗೆ ಪ್ರಯತ್ನಗಳನ್ನು ಮಾಡಲೇ ಇಲ್ಲ. 2011ರಲ್ಲಿ ಮುಖ್ಯಮಂತ್ರಿಯಾದ ಬಳಿಕ ನಾನು ಈ ಬಗ್ಗೆ ಹೆಜ್ಜೆ ಮುಂದಿಟ್ಟೆ, ಸುಪ್ರೀಂ ಕೋರ್ಟಿನ ಮೊರೆ ಹೋದೆ.
ಹೀಗಾಗಿ ಮುಂದಿನ ವಾರದಲ್ಲಿ (ಫೆ. 20ರೊಳಗೆ) ಅಂತಿಮ ಅಧಿಸೂಚನೆ ಪ್ರಕಟಿಸುವಂತೆ ಅದು ಕೇಂದ್ರಕ್ಕೆ ಸೂಚಿಸುವಂತಾಯಿತು ಎಂದು ಜಯಲಲಿತಾ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications