ವೀರಪ್ಪನ್ ಸಹಚರರ ನೇಣಿಗೆ ಕುಣಿಕೆ ಸಿದ್ಧ?

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂದಿಯಾಗಿರುವ ಜ್ಞಾನಪ್ರಕಾಶ್, ಸೈಮನ್, ಮೀಸೈಕಾರನ್ ಮಾದಯ್ಯ ಮತ್ತು ಬಿಲವೇಂದ್ರನ್ ಅವರನ್ನು ಶನಿವಾರ ರಾತ್ರಿಯೇ ಪ್ರತ್ಯೇಕ ಖಾನೆಗೆ ವರ್ಗಾವಣೆ ಮಾಡಲಾಗಿದ್ದು, ಜೈಲಿನ ವೈದ್ಯರು ಅವರ ಆರೋಗ್ಯವನ್ನು ತಪಾಸಣೆ ಮಾಡಿ ಎಲ್ಲರೂ ಆರೋಗ್ಯದಿಂದಿದ್ದಾರೆ ಎಂದು ಪ್ರಮಾಣಪತ್ರ ನೀಡಿದ್ದಾರೆ.
ಅಲ್ಲದೆ, ಶನಿವಾರ ರಾತ್ರಿಯೇ ಎಲ್ಲರಿಗೂ ಸ್ನಾನ ಮಾಡಿ ಶುಚಿಯಾಗಲು ಹೇಳಲಾಗಿದ್ದು, ಎಲ್ಲರಿಗೂ ಸಿಹಿ ತಿನಿಸಲಾಗಿದೆ ಮತ್ತು ಅವರು ಆರೋಗ್ಯದಿಂದಿರುವಂತೆ ನಿಗಾವಹಿಸಲಾಗಿದೆ. ಗಲ್ಲಿಗೇರಿಸುವುದು ಖಚಿತವಾಗುತ್ತಿದ್ದಂತೆ ನಡೆಸಲಾಗುವ ಎಲ್ಲ ರೀತಿರಿವಾಜುಗಳನ್ನು ಈ ಹಂತಕರ ವಿಷಯದಲ್ಲಿಯೂ ಪಾಲಿಸಲಾಗಿದ್ದು, ಯಾವುದೇ ಕ್ಷಣ ಅವರು ಗಲ್ಲಿಗೇರಿಸಬಹುದಾಗಿದೆ.
ಸುಪ್ರೀಂನಿಂದ ಅರ್ಜಿ ವಜಾ : ರಾಷ್ಟ್ರಪತಿ ಅವರು ಈ ಎಲ್ಲರ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆಂದು ವಕೀಲ ಕಾಲಿನ್ ಗೋನ್ಸಾಲ್ವೆನ್ಸ್ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಅವರು ಶನಿವಾರ ತಳ್ಳಿಹಾಕಿದ್ದಾರೆ.
ಯಾವ ಆಧಾರದ ಮೇಲೆ ಕಾಡುಗಳ್ಳ ವೀರಪ್ಪನ್ ಸಹಚರರನ್ನು ಪ್ರತಿನಿಧಿಸಿ ಕ್ಷಮಾದಾನ ಅರ್ಜಿ ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತಿದ್ದೀರೆಂದು ನ್ಯಾಯಮೂರ್ತಿಗಳು ವಕೀಲರನ್ನು ಕೇಳಿದರು. ಯಾವುದೇ ಕ್ಷಣದಲ್ಲಿ ಅವರನ್ನು ಗಲ್ಲಿಗೇರಿಸಬಹುದು ಎಂದು ವಕೀಲರು ಮಂಡಿಸಿದ ವಾದಕ್ಕೆ, ಇದರ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ನ್ಯಾಯಮೂರ್ತಿಗಳು ವಾದವನ್ನು ತಿರಸ್ಕರಿಸಿದರು.
ಮೈಸೂರಿನ ಟಾಡಾ ನ್ಯಾಯಾಲಯ ವೀರಪ್ಪನ್ ಬಂಟರಿಗೆ ಜೀವಾವಧಿ ಶಿಕ್ಷೆ ವಿಧಿಸಿ 2001ರಲ್ಲಿ ತೀರ್ಪು ನೀಡಿತ್ತು. ಈ ಶಿಕ್ಷೆಯನ್ನು ತಳ್ಳಿಹಾಕಿ, ಈ ಹಂತಕರು ಮರಣದಂಡನೆ ಅರ್ಹರು ಎಂದು ಸುಪ್ರೀಂಕೋರ್ಟ್ 2004ರಲ್ಲಿ ಆದೇಶ ಹೊರಡಿಸಿತ್ತು. 2004ರಿಂದೀಚಿನವರೆಗೆ ಅವರ ಕ್ಷಮಾದಾನ ಅರ್ಜಿ ರಾಷ್ಟ್ರಪತಿಯವರ ಟೇಬಲ್ ಮೇಲಿತ್ತು. ಈ ಅರ್ಜಿಯನ್ನು ಪರಿಶೀಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇದೇ ಫೆ.13ರಂದು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.
ವೀರಪ್ಪನ್ ಸಹೋದರ ಜ್ಞಾನಪ್ರಕಾಶ್ ಸೇರಿದಂತೆ ನಾಲ್ವರನ್ನು ಗಲ್ಲಿಗೇರಿಸಬಾರದು, ಅವರ ಶಿಕ್ಷೆಯನ್ನು ಮರಣದಂಡನೆಗೆ ಇಳಿಸಬೇಕು ಎಂದು ವೀರಪ್ಪನ್ ಹೆಂಡತಿ ಮುತ್ತುಲಕ್ಷ್ಮೀ ಮತ್ತು ಮಗಳು ಪ್ರಭಾ ಖಾಸಗಿ ಟಿವಿ ಚಾನಲ್ ಮುಖಾಂತರ ಮನವಿ ಮಾಡಿಕೊಂಡಿದ್ದಾರೆ. [ಗಲ್ಲಿಗೇರಿಕೆ ಎಂಬ ಡೆಡ್ಲಿ ಪ್ರೊಸೀಜರ್]
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications