75ರ ಹರೆಯ 'ಕಾಮ'ಪೂಜಾರಿ ಬಂಧನ

ಪುಟ್ಟ ಬಾಲಕಿಯರನ್ನು ಲೈಂಗಿಕ ಶೋಷಣೆಗೆ ಒಳಪಡಿಸುತ್ತಿದ್ದ ಈ ಪೂಜಾರಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಪೊಲೀಸರಿ ಕ್ರಮ ಜರುಗಿಸಿರಲಿಲ್ಲ. ಗಿಟ್ಟಿಖಾದನ್ ಪೊಲೀಸ್ ಠಾಣೆ ಮೇಲೆ ಮುಗಿ ಬಿದ್ದ ಸಾರ್ವಜನಿಕರು, ಮಹಿಳಾ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಬೆಚ್ಚಿದ ಆರಕ್ಷಕರು ಕೊನೆಗೂ ಆರೋಪಿ ಬಾಬುಲಾಲ್ ದ್ವಿವೇದಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ 5 ಹಾಗೂ 7 ವರ್ಷದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಲ್ಲದೆ ಕಳೆದ ವಾರ ಬಾಲಕಿಯನ್ನು ಲೈಂಗಿಕವಾಗಿ ಕಾಡುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಾರ್ವಜನಿಕರಿಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದಿದ್ದ. 75 ವರ್ಷದ ವ್ಯಕ್ತಿಯನ್ನು ಹೊಡೆದು ಸಾಯಿಸಲು ಮನಸ್ಸು ಬಾರದ ಕಾರಣ, ಪೊಲೀಸರಿಗೆ ಒಪ್ಪಿಸಲಾಗಿತ್ತು. ಆದರೆ, ಪೊಲೀಸರ ಕೈ ಬಿಸಿ ಮಾಡಿ ಹೇಗೊ ಹೊರ ಬಂದಿದ್ದ.
ಆದರೆ, ನಾಲ್ಕು ದಿನ ನಂತರ ಮತ್ತೊಮ್ಮೆ ಇದೇ ರೀತಿ ಕೃತ್ಯ ಎಸಗಿದ ಆರೋಪ ದ್ವಿವೇದಿ ಕೇಳಿ ಬಂದಿತ್ತು. ವಿದ್ಯಾರ್ಥಿಯೊಬ್ಬಳು ತನಗಾದ ಲೈಂಗಿಕ ಹಲ್ಲೆಯನ್ನು ತನ್ನ ಟೀಚರ್ ಗೆ ವಿವರಿಸಿದ್ದಾಳೆ. ನಂತರ ವಿದ್ಯಾರ್ಥಿಯ ಪೋಷಕರನ್ನು ಕರೆಸಿಕೊಂಡು ವಿಷಯ ತಿಳಿಸಲಾಗಿದೆ.
ನಂತರ ಸಂತ್ರಸ್ತರ ಗುಂಪು ದೇಗುಲದ ಟ್ರಸ್ಟಿಗಳಿಗೆ ದೂರು ನೀಡಿದ್ದಾರೆ. ಆದರೆ, ಟ್ರಸ್ಟ್ ನವರು ನಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆದರೆ, ಸಾರ್ವಜನಿಕರ ಬೆಂಬಲ ಪಡೆದ ಸಂತ್ರಸ್ತರು ಗಿಟ್ಟಿಖಾದನ್ ಪೊಲೀಸ್ ಠಾಣೆಯನ್ನು ಮುತ್ತಿಗೆ ಹಾಕಿದ್ದಾರೆ.
ಪ್ರಸಾದ ನೀಡುತ್ತೇನೆ ಬಾ ಎಂದು 7 ವರ್ಷ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ದೇಗುಲದ ಗರ್ಭಗುಡಿಗೆ ಕರೆಸಿಕೊಂಡಿದ್ದಾನೆ. ಆಕೆಗೆ ಮಂಕುಬೂದಿ ಎರೆಚಿ ಮೈಕೈ ಸವರಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇಷ್ಟೇ ಅಲ್ಲದೆ, ಅನೇಕ ಮಹಿಳೆಯರಿಗೆ ಕಾಟ ಕೊಟ್ಟಿರುವ ದ್ವಿವೇದಿ, ಪೂಜೆ ನೆಪದಲ್ಲಿ ಹಣ ಕೀಳುತ್ತಿದ್ದ ಎಂಬ ಆರೊಪವೂ ಇದೆ.
ಸ್ಥಳೀಯ ಮೇಯರ್ ಹಾಗೂ ಬಿಜೆಪಿ ಕಾರ್ಪೊರೇಟರ್ ಮಯಾತಾಯಿ ಇವ್ನಾರೆ ಅವರು ಪೊಲೀಸರು ತಕ್ಷಣದ ಕ್ರಮ ಜರುಗಿಸಬೇಕು. ರೇಪ್ ಕೇಸ್ ಹಾಕಿ ಆತನನ್ನು ಹೊರ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಆದರೆ, ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅತ್ಯಾಚಾರ ನಡೆಸಿದ ಕುರುಹುಗಳು ಕಂಡು ಬಂದಿಲ್ಲ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಸಿಎಂ ಬಹಾದೂರ್ ಹೇಳಿದ್ದಾರೆ. ಸದ್ಯಕ್ಕೆ ದ್ವಿವೇದಿ ಜೈಲಿನಲ್ಲಿದ್ದಾನೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications