ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಪ್ಪನ್ ಸಹಚರರಿಗೆ ತಾತ್ಕಾಲಿಕ ರಿಲೀಫ್

|
Google Oneindia Kannada News

Supreme Court of India
ನವದೆಹಲಿ, ಫೆ.18 : ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವೀರಪ್ಪನ್ ನಾಲ್ವರು ಸಹಚರರ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ಫೆ.20ರವರೆಗೆ ತಡೆಯಾಜ್ಞೆ ನೀಡಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕೆಂದು ನಾಲ್ವರು ಸಹಚರರು, ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸೋಮವಾರ ಈ ಆದೇಶ ನೀಡಿದೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಅವರಿದ್ದ ಪೀಠ ಗಲ್ಲುಶಿಕ್ಷೆಗೆ ಎರಡು ದಿನಗಳ ಕಾಲ ತಡೆಯಾಜ್ಞೆ ನೀಡಿತು ಮತ್ತು ವಿಚಾರಣೆಯನ್ನು ಬುಧವಾರ ಫೆ.20ಕ್ಕೆ ಮುಂದೂಡಿತು.

ಇದರಿಂದಾಗಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ವೀರಪ್ಪನ್ ನಾಲ್ವರು ಸಹಚರರಾದ ಜ್ಞಾನಪ್ರಕಾಶನ್, ಸೈಮನ್, 'ಮೀಸೆಕಾರ್' ಮಾದಯ್ಯ ಮತ್ತು ಬಿಲವೇಂದ್ರನ್ ಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ಪಾಲಾರ್ ಬಳಿ 1993ರಲ್ಲಿ ನೆಲಬಾಂಬ್ ಸ್ಫೋಟಿಸಿ 15 ಪೊಲೀಸ್ ಸಿಬ್ಬಂದಿ ಸೇರಿ 22 ಜನರ ಸಾವಿಗೆ ಕಾರಣರಾಗಿದ್ದ ಈ ನಾಲ್ವರಿಗೆ ಸುಪ್ರೀಂಕೋರ್ಟ್‌ 2004ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಕ್ಷಮಾದಾನ ನೀಡುವಂತೆ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಫೆ.13ರಂದು ತಿರಸ್ಕರಿಸಿದ್ದರು. ಆದ್ದರಿಂದ ಇವರಿಗೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿತ್ತು.

ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ ಸಹ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಬಾರದೆಂದು ಮನವಿ ಮಾಡಿದ್ದರು. ನಾಲ್ವರು ಆರೋಪಿಗಳು ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

English summary
Supreme Court of India has stayed death sentence of four associates of forest brigand Veerappan for 2 days. Mercy petition of the accused has been rejected by the President of India and they are lodged in Hindalaga jail in Belgaum. They have been convicted in 1993 landmine blast case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X