ಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಬಿಗಿದಪ್ಪಿದ ಬಿಜೆಪಿ ಶಾಸಕ

ಇದರಿಂದ, ಆಡಳಿತದ ಕೊನೆಯ ದಿನಗಳನ್ನು ಇದೆಲ್ಲ ಮಾಮೂಲು. ಹಾಗಾಗಿ ಆಡಳಿತಾರೂಢ ಬಿಜೆಪಿಯ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಿಲ್ಲವಾದರೂ ಅದರ ಪ್ರತಿಷ್ಠೆಗೆ ಸ್ವಲ್ಪ ಪೆಟ್ಟು ಬಿದ್ದಿದೆ ಎನ್ನಲಾಗಿದೆ.
'ಸ್ಪೀಕರ್ ಕೆಜಿ ಬೋಪಯ್ಯ ಅವರು ಊರಲ್ಲಿಲ್ಲ. ಹಾಗಾಗಿ ಅವರು ಊರಿಗೆ ಬರುತ್ತಿದ್ದಂತೆ ನನ್ನ ರಾಜೀನಾಮೆ ಪತ್ರವನ್ನು ಅವರ ಕೈಗೆ ಹಸ್ತಾಂತರಿಸುವುದಾಗಿ' ಗೌಡರು ಸ್ಪಷ್ಟಪಡಿಸಿದರು.
'ಅಲ್ಲಿಯವರೆಗೂ ಜೆಡಿಎಸ್ ಸಭೆಯಗಳಲ್ಲಿ ಕಾಯಾ-ವಾಚಾ-ಮನಸಾ ಭಾಗವಹಿಸುವುದಾಗಿಯೂ' ಅವರು ಹೇಳಿದರು. ರಾಜ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಜೆಡಿಎಸ್ ಸರಕಾರವನ್ನು ಆಡಳಿತಕ್ಕೆ ತರುವುದಾಗಿ ಅವರು ಇದೇ ಸಂದರ್ಭದಲ್ಲಿ ಕಂಕಣತೊಟ್ಟರು.
ಒಂದು ವರ್ಷದ ಹಿಂದೆಯೇ ಬಿಜೆಪಿ ಬಿಡಲು ನಿರ್ಧರಿಸಿದೆ. ಮೊನ್ನೆ ಬಜೆಟ್ ಅಧಿವೇಶನ ಮುಗಿಯೋಗಂಟ ಸುಮ್ನಿರು ಅಂತ ಬಿಜೆಪಿ ಮಂದಿ ಹೇಳುತ್ತಿದ್ದರು. ಹಾಗಾಗಿ ಜೆಡಿಎಸ್ ಕಡೆ ಬರಲಿಲ್ಲ. ಆದರೆ ಈಗ ಎಲ್ಲ ಮುಗೀತು. ಅದಕ್ಕೆ ಜೆಡಿಎಸ್ ಜತೆ ಗುರುತಿಸಿಕೊಳ್ಳುತ್ತಿದ್ದೇನೆ ಎಂದು ಮೈಸೂರು ಚಾಮರಾಜ ಕ್ಷೇತ್ರವನ್ನು ಪ್ರತಿನಿಧಿಸುವ ಗೌಡರು ತಿಳಿಸಿದರು.
ನಾನು ಜೆಡಿಎಸ್ ಪಕ್ಷದಿಂದ ಬಂದವನು. ಜೆಡಿಎಸ್ ನನಗೆ ಮಾತೃಪಕ್ಷ. ಹಾಗಾಗಿ ಮಾತೆಯ ಮಡಿಲಿಗೆ ಮರಳಿದ್ದೇನೆ ಎಂದು ಎದುರಿಗಿದ್ದ ಚಾಮರಾಜ ಪೇಟೆ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಅವರನ್ನು ಬಿಗಿದಪ್ಪಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಂಕರಲಿಂಗೇಗೌಡ ಅವರು ತಾವು ಎಂದೆಂದಿಗೂ ಜನಪರ ಕೆಲಸಗಳಲ್ಲಿ ತೊಡಗಿಸಿಕೊಂಡವರು ಎಂದರು.
ಅಖಂಡವಾಗಿ ನನ್ನ ಕ್ಷೇತ್ರದ ಜನತೆಯ ಸೇವೆ ಮಾಡುತ್ತಾ ಬಂದಿದ್ದೇನೆ ಎಂದು ಸೇವಾ ವಿವರ ನೀಡಿದ ಶಂಕರಲಿಂಗೇ ಗೌಡರು ಇನ್ನೆಂದಿಗೂ ಬಿಜೆಪಿಗೆ ಮರಳುವುದಿಲ್ಲ ಎಂದೂ ಪ್ರತಿಜ್ಞೆ ಮಾಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications