ಶಿಂಧೆ ಕ್ಷಮೆ, 'ಕೇಸರಿ' ಪಕ್ಷದಿಂದ ಸ್ವಾಗತ

ಸಂಸತ್ತಿನ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನಾ ದಿನವಾದ ಬುಧವಾರ ಸಚಿವರು ಈ ವಿಷಾದ ವ್ಯಕ್ತಪಡಿಸಿದ್ದಾರೆ. ಹಿಂದೂ ಭಯೋತ್ಪಾದನೆ ಹೇಳಿಎಕ್ ಬಜೆಟ್ ಅಧಿವೇಶನ ಹಾಳು ಮಾಡದಂತೆ ತಡೆಯಲು ಶಿಂಧೆ ಕ್ಷಮೆಯಾಚನೆ ಮಾಡಿದ್ದಾರೆ ಎನ್ನಬಹುದು.
'ಜೈಪುರದಲ್ಲಿ ನಡೆದ ಪಕ್ಷದ ಚಿಂತನಾ ಶಿಬಿರದ ವೇಳೆ ನಾನು ನೀಡಿದ ಹೇಳಿಕೆಯು ತಪ್ಪು ಅರ್ಥಗಳನ್ನು ಉಂಟು ಮಾಡಿದೆ. ನನ್ನ ಪುಟ್ಟ ಭಾಷಣದಲ್ಲಿ ಹೇಳಿದಂತೆ, ಭಯೋತ್ಪಾದನೆಗೆ ಕೆಲವು ಧಾರ್ಮಿಕ ಸಂಘಟನೆಗಳೊಂದಿಗೆ ಸಂಬಂಧ ಬೆಸೆಯಬಹುದು ಎಂದು ಸೂಚಿಸುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ತಮ್ಮ ಹೇಳಿಕೆಗಾಗಿ ಪ್ರತಿಪಕ್ಷವಾದ ಬಿಜೆಪಿಯಿಂದ ತೀವ್ರ ಟೀಕೆಗೆ ಹಾಗೂ ಬಜೆಟ್ ಅಧಿವೇಶನದ ವೇಳೆ ಬಹಿಷ್ಕಾರದ ಬೆದರಿಕೆಗೆ ಗುರಿಯಾಗಿದ್ದ ಲೋಕಸಭಾ ನಾಯಕರೂ ಆದ ಶಿಂಧೆ ಯಾವುದೇ ಧರ್ಮ ಅಥವಾ ರಾಜಕೀಯ ಸಂಘಟನೆಯೊಂದಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸುವ ಉದ್ದೇಶ ನನಗೆ ಇರಲಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಗ್ರವಾದಕ್ಕೆ ನಿರ್ದಿಷ್ಟ ಧರ್ಮದೊಂದಿಗೆ ತಳುಕು ಹಾಕುತ್ತಿದ್ದೇನೆ ಎಂದು ಹಾಗೂ ಉಗ್ರರ ಶಿಬಿರಗಳನ್ನು ನಡೆಸುವಲ್ಲಿ ನಿರತವಾಗಿರುವ ಕೆಲವು ರಾಜಕೀಯ ಸಂಘಟನೆಗಳ ವಿರುದ್ಧ ಆಪಾದನೆ ಮಾಡುತ್ತಿದ್ದೇನೆ ಎಂದು ಅರ್ಥೈಸಿಕೊಳ್ಳಲಾಗಿದೆ. ಆದರೆ, ಭಯೋತ್ಪಾದನೆಗೆ ಯಾವುದೇ ಧರ್ಮದೊಂದಿಗೆ ನಂಟು ಬೆಸೆಯುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾರೆ.
ನನ್ನ ಹೇಳಿಕೆ ವಿವಾದದ ಹೊಗೆ ಎಬ್ಬಿಸಿರುವುದರಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಹೇಳಿಕೆಯಿಂದ ಕೆಲವರಿಗೆ ನೋವಾಗಿದ್ದು, ಅದಕ್ಕಾಗಿ ವಿಷಾದಿಸುತ್ತೇನೆ. ರಾಷ್ಟ್ರದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ನನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಕರ್ತವ್ಯ ನಿರ್ವಹಣೆ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಪ್ರತಿಭಟನೆ: ಇದಕ್ಕೆ ಮುನ್ನ ಬುಧವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಶಿಂಧೆ ಅವರ ಹೇಳಿಕೆ ಖಂಡಿಸಿ, ಜಂತರ್ಮಂಥರ್ನಿಂದ ಶಿಂಧೆ ಅವರ ನಿವಾಸಕ್ಕೆ ಪಕ್ಷದ ಉನ್ನತ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಪ್ರತಿಭಟನಾ ರ್ಯಾಲಿ ನಡೆಸಿ ಬಂಧನಕ್ಕೆ ಒಳಗಾಗಿದ್ದರು.
ಶಿಂಧೆ ಅವರು ಜೈಪುರದಲ್ಲಿ ತಾವು ನೀಡಿದ ಹೇಳಿಕೆಗಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಮುಖಂಡರು ರ್ಯಾಲಿಯಲ್ಲಿ ಒತ್ತಾಯಿಸಿದ್ದರು.
ಆರ್ಎಸ್ಎಸ್ ಇರಬಹುದು ಅಥವಾ ಬಿಜೆಪಿ ಇರಬಹುದು, ಅವು ನಡೆಸುವ ತರಬೇತಿ ಶಿಬಿರಗಳಲ್ಲಿ ಹಿಂದೂ ಭಯೋತ್ಪಾದನೆಯನ್ನು ಪ್ರಾಯೋಜಿಸಲಾಗುತ್ತಿದೆ ಎಂಬುದಕ್ಕೆ ಪೂರಕವಾಗಿ ನಮ್ಮ ಬಳಿ ತನಿಖಾ ವರದಿ ಇದೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದರು.
ಇದು ತೀವ್ರ ಟೀಕೆಗೆ ಒಳಗಾದ ನಂತರ, ತಾವು ಪ್ರಸ್ತಾಪಿಸಿದ್ದು 'ಕೇಸರಿ ಭಯೋತ್ಪಾದನೆ ಬಗ್ಗೆಯೇ ಹೊರತು ಹಿಂದೂ ಭಯೋತ್ಪಾದನೆ ಕುರಿತು ಅಲ್ಲ ಎಂದೂ ಸಮಜಾಯಿಷಿ ನೀಡಿದ್ದರು. ಆದರೆ ಅದರಿಂದ ಬಿಜೆಪಿ ಇನ್ನಷ್ಟು ಕೆರಳಿತ್ತೇ ಹೊರತು, ತಣ್ಣಗಾಗಿರಲಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications