ಶಿಂಧೆ ಕ್ಷಮೆ, 'ಕೇಸರಿ' ಪಕ್ಷದಿಂದ ಸ್ವಾಗತ

ಸಂಸತ್ತಿನ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನಾ ದಿನವಾದ ಬುಧವಾರ ಸಚಿವರು ಈ ವಿಷಾದ ವ್ಯಕ್ತಪಡಿಸಿದ್ದಾರೆ. ಹಿಂದೂ ಭಯೋತ್ಪಾದನೆ ಹೇಳಿಎಕ್ ಬಜೆಟ್ ಅಧಿವೇಶನ ಹಾಳು ಮಾಡದಂತೆ ತಡೆಯಲು ಶಿಂಧೆ ಕ್ಷಮೆಯಾಚನೆ ಮಾಡಿದ್ದಾರೆ ಎನ್ನಬಹುದು.
'ಜೈಪುರದಲ್ಲಿ ನಡೆದ ಪಕ್ಷದ ಚಿಂತನಾ ಶಿಬಿರದ ವೇಳೆ ನಾನು ನೀಡಿದ ಹೇಳಿಕೆಯು ತಪ್ಪು ಅರ್ಥಗಳನ್ನು ಉಂಟು ಮಾಡಿದೆ. ನನ್ನ ಪುಟ್ಟ ಭಾಷಣದಲ್ಲಿ ಹೇಳಿದಂತೆ, ಭಯೋತ್ಪಾದನೆಗೆ ಕೆಲವು ಧಾರ್ಮಿಕ ಸಂಘಟನೆಗಳೊಂದಿಗೆ ಸಂಬಂಧ ಬೆಸೆಯಬಹುದು ಎಂದು ಸೂಚಿಸುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ತಮ್ಮ ಹೇಳಿಕೆಗಾಗಿ ಪ್ರತಿಪಕ್ಷವಾದ ಬಿಜೆಪಿಯಿಂದ ತೀವ್ರ ಟೀಕೆಗೆ ಹಾಗೂ ಬಜೆಟ್ ಅಧಿವೇಶನದ ವೇಳೆ ಬಹಿಷ್ಕಾರದ ಬೆದರಿಕೆಗೆ ಗುರಿಯಾಗಿದ್ದ ಲೋಕಸಭಾ ನಾಯಕರೂ ಆದ ಶಿಂಧೆ ಯಾವುದೇ ಧರ್ಮ ಅಥವಾ ರಾಜಕೀಯ ಸಂಘಟನೆಯೊಂದಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸುವ ಉದ್ದೇಶ ನನಗೆ ಇರಲಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಗ್ರವಾದಕ್ಕೆ ನಿರ್ದಿಷ್ಟ ಧರ್ಮದೊಂದಿಗೆ ತಳುಕು ಹಾಕುತ್ತಿದ್ದೇನೆ ಎಂದು ಹಾಗೂ ಉಗ್ರರ ಶಿಬಿರಗಳನ್ನು ನಡೆಸುವಲ್ಲಿ ನಿರತವಾಗಿರುವ ಕೆಲವು ರಾಜಕೀಯ ಸಂಘಟನೆಗಳ ವಿರುದ್ಧ ಆಪಾದನೆ ಮಾಡುತ್ತಿದ್ದೇನೆ ಎಂದು ಅರ್ಥೈಸಿಕೊಳ್ಳಲಾಗಿದೆ. ಆದರೆ, ಭಯೋತ್ಪಾದನೆಗೆ ಯಾವುದೇ ಧರ್ಮದೊಂದಿಗೆ ನಂಟು ಬೆಸೆಯುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾರೆ.
ನನ್ನ ಹೇಳಿಕೆ ವಿವಾದದ ಹೊಗೆ ಎಬ್ಬಿಸಿರುವುದರಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಹೇಳಿಕೆಯಿಂದ ಕೆಲವರಿಗೆ ನೋವಾಗಿದ್ದು, ಅದಕ್ಕಾಗಿ ವಿಷಾದಿಸುತ್ತೇನೆ. ರಾಷ್ಟ್ರದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ನನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಕರ್ತವ್ಯ ನಿರ್ವಹಣೆ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಪ್ರತಿಭಟನೆ: ಇದಕ್ಕೆ ಮುನ್ನ ಬುಧವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಶಿಂಧೆ ಅವರ ಹೇಳಿಕೆ ಖಂಡಿಸಿ, ಜಂತರ್ಮಂಥರ್ನಿಂದ ಶಿಂಧೆ ಅವರ ನಿವಾಸಕ್ಕೆ ಪಕ್ಷದ ಉನ್ನತ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಪ್ರತಿಭಟನಾ ರ್ಯಾಲಿ ನಡೆಸಿ ಬಂಧನಕ್ಕೆ ಒಳಗಾಗಿದ್ದರು.
ಶಿಂಧೆ ಅವರು ಜೈಪುರದಲ್ಲಿ ತಾವು ನೀಡಿದ ಹೇಳಿಕೆಗಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಮುಖಂಡರು ರ್ಯಾಲಿಯಲ್ಲಿ ಒತ್ತಾಯಿಸಿದ್ದರು.
ಆರ್ಎಸ್ಎಸ್ ಇರಬಹುದು ಅಥವಾ ಬಿಜೆಪಿ ಇರಬಹುದು, ಅವು ನಡೆಸುವ ತರಬೇತಿ ಶಿಬಿರಗಳಲ್ಲಿ ಹಿಂದೂ ಭಯೋತ್ಪಾದನೆಯನ್ನು ಪ್ರಾಯೋಜಿಸಲಾಗುತ್ತಿದೆ ಎಂಬುದಕ್ಕೆ ಪೂರಕವಾಗಿ ನಮ್ಮ ಬಳಿ ತನಿಖಾ ವರದಿ ಇದೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದರು.
ಇದು ತೀವ್ರ ಟೀಕೆಗೆ ಒಳಗಾದ ನಂತರ, ತಾವು ಪ್ರಸ್ತಾಪಿಸಿದ್ದು 'ಕೇಸರಿ ಭಯೋತ್ಪಾದನೆ ಬಗ್ಗೆಯೇ ಹೊರತು ಹಿಂದೂ ಭಯೋತ್ಪಾದನೆ ಕುರಿತು ಅಲ್ಲ ಎಂದೂ ಸಮಜಾಯಿಷಿ ನೀಡಿದ್ದರು. ಆದರೆ ಅದರಿಂದ ಬಿಜೆಪಿ ಇನ್ನಷ್ಟು ಕೆರಳಿತ್ತೇ ಹೊರತು, ತಣ್ಣಗಾಗಿರಲಿಲ್ಲ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications