ಯಾರೂ ಬಿಜೆಪಿ ಬಿಡಲ್ಲ, ಸರ್ಕಾರ ಭದ್ರವಾಗಿದೆ :ಶೆಟ್ಟರ್

ಸ್ಪೀಕರ್ ಹಾಗೂ ನಾಮಕರಣ ಸದಸ್ಯರನ್ನು ಹೊರತುಪಡಿಸಿದರೆ ವಿಧಾನಸಭೆಯಲ್ಲಿ ಬಿಜೆಪಿಯ ಬಲ 105. ಪಕ್ಷೇತರ ಸದಸ್ಯ ವರ್ತೂರು ಪ್ರಕಾಶ್ ಸಚಿವರಾಗಿದ್ದಾರೆ. ಅವರ ಬೆಂಬಲ ಸಹಜವಾಗಿಯೇ ಸರ್ಕಾರಕ್ಕೆ ಇದೆ. ಇವರೆಲ್ಲರೂ ಸೇರಿ ಬಿಜೆಪಿಯ ಬಲ 108. ಇವರಲ್ಲಿ ಇಬ್ಬರು (ನಾಗಠಾಣ ಕ್ಷೇತ್ರದ ವಿಠಲ ಕಟಕದೋಂಡ ಮತ್ತು ತರೀಕೆರೆಯ ಡಿ.ಎಸ್.ಸುರೇಶ್) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅದು ಇನ್ನೂ ಅಂಗೀಕಾರ ಆಗಿಲ್ಲ.
ಬಿಜೆಪಿ ತಂತ್ರ: ಹೀಗಾಗಿ ಸರ್ಕಾರ ಉರುಳುವ ಸಂಭವ ಕಮ್ಮಿ. ಪಕ್ಷೇತರರಾದ ಪಿ.ಎಂ.ನರೇಂದ್ರ ಸ್ವಾಮಿ, ಡಿ.ಸುಧಾಕರ್, ವೆಂಕಟರಮಣಪ್ಪ, ಶಿವರಾಜ ತಂಗಡಗಿ ಬೆಂಬಲ ನೀಡಿದರೂ ಒಟ್ಟು ಸಂಖ್ಯೆ 100 ದಾಟುವುದಿಲ್ಲ. ಹೀಗಾಗಿ ಸದ್ಯಕ್ಕೆ ಸರ್ಕಾರಕ್ಕೆ ಬಹುಮತದ ಕೊರತೆ ಬೀಳುವುದಿಲ್ಲ. ಸಂಖ್ಯಾ ಬಲ ವಿವರ ಇಲ್ಲಿ ಲಭ್ಯ. ಸಚಿವರಾದ ಸಿ.ಪಿ.ಯೋಗೇಶ್ವರ್, ರಾಜು ಗೌಡ ಶಾಸಕರಾದ ಶಂಕರಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ, ಪ್ರತಾಪ ಗೌಡ ಸರಣಿ ರಾಜೀನಾಮೆ ಕೊಡಲು ಮುಂದಾಗಿರುವ ಸುದ್ದಿ ಹರಿದಾಡುತ್ತಿದೆ.
ಸಿ.ಪಿ ಯೋಗೇಶ್ವರ್ ಹಾಗೂ ರಾಜೂ ಗೌಡ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರಿಗೆ ಭಯ ಹುಟ್ಟಿಸಿದ್ದಾರೆ ನಿಜ. ಆದರೆ, ಬಂಡಾಯ ಏಳುವ ವಲಸೆ ಹಕ್ಕಿಗಳ ರೆಕ್ಕೆ ಕತ್ತರಿಸುವ ಕಲೆ ಬಿಜೆಪಿಗೆ ಈಗ ಕರಗತವಾಗಿದೆ. ಮಡಿಕೇರಿಯಲ್ಲಿರುವ ಸ್ಪೀಕರ್ ಬೋಪಯ್ಯ ಅವರ ಮನೆಗೆ ತೆರಳಿ ರಾಜೀನಾಮೆ ಸಲ್ಲಿಸಲು ಯೋಗೇಶ್ವರ್ ಸಿದ್ಧರಾಗಿದ್ದಾರೆ.
ಆದರೆ, ಎಷ್ಟು ಮಂದಿ ರಾಜೀನಾಮೆ ಪತ್ರ ಹಿಡಿದುಕೊಂಡು ಬಂದರೂ ಬೋಪಯ್ಯ ಅವರು ಮತ್ತೊಮ್ಮೆ ವಿಳಂಬ ನೀತಿ ಅನುಸರಿಸುತ್ತಾ ಸತಾಯಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರಾಜೀನಾಮೆ ಅಂಗೀಕಾರವಾಗದೆ ಒಂದಷ್ಟು ಕಾಲ ಶಾಸಕರು, ಸಚಿವರು ಸ್ಪೀಕರ್ ಕಚೇರಿಯಲ್ಲೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕನಿಷ್ಠ ಪಕ್ಷ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಸದಾನಂದ ಗೌಡ ಅವರಿಗೆ ಹೈಕಮಾಂಡ್ ನಿಂದ ಸೂಚನೆ ಸಿಗುವ ತನಕವಾದರು ಸಚಿವರ ರಾಜೀನಾಮೆ ಅಂಗೀಕಾರ ಸಾಧ್ಯತೆ ಕಮ್ಮಿ. ಯಡಿಯೂರಪ್ಪ ಅವರ ಹಾರೈಕೆಯಂತೆ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿ ಸರ್ಕಾರವನ್ನು ತಾವೇ ವಿಸರ್ಜಿಸಿ ಚುನಾವಣೆಗೆ ಮುಂದಾಗುತ್ತಾರೆ ಎಂದು ಕನಸಿನಲ್ಲೂ ಊಹಿಸಲು ಸಾಧ್ಯವಿಲ್ಲ. ಮೇ ತಿಂಗಳಿನಲ್ಲಿ ಬರುವ ಚುನಾವಣೆ ಒಂದು ತಿಂಗಳು ಮುಂಚಿತವಾಗಿ ಬರುವುದು ಬಿಜೆಪಿ ಬೇಕಿಲ್ಲ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications