ಬೆಂಗಳೂರು ಐಟಿ ಕಂಪನಿಗಳಿಗೆ ಹೆಚ್ಚಿನ ಭದ್ರತೆ

ಐಟಿ ಕಂಪನಿಗಳು, ಧಾರ್ಮಿಕ ಕೇಂದ್ರಗಳು, ಪ್ರಮುಖ ವಿಹಾರ ತಾಣಗಳು, ಮಾಲ್ ಗಳಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ ಎಂದು ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿದರು. 2 ದಿನಗಳ ಹಿಂದೆಯೇ ಗುಪ್ತಚರ ದಳದಿಂದ ಮಾಹಿತಿ ಬಂದಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ 2 ದಿನಗಳಿಂದಲೇ ನಗರದಲ್ಲಿ ಅಗತ್ಯ ಭದ್ರತೆ ಒದಗಿಸಲಾಗಿದೆ. ರಾತ್ರಿ ಪೂರ್ತಿ ಪೊಲೀಸರು ಗಸ್ತಿನಲ್ಲಿದ್ದು, ಎಚ್ಚರ ವಹಿಸಿದ್ದಾರೆ ಎಂದರು.
ರಾತ್ರಿ ವೇಳೆ ಮೆಜೆಸ್ಟಿಕ್, ಏರ್ಪೋರ್ಟ್, ರೇಲ್ವೆ ನಿಲ್ದಾಣ ಸೇರಿದಂತೆ ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಅಲ್ಲದೆ, ನಗರದಿಂದ ಹೊರ ಹೋಗುವ ಹಾಗೂ ನಗರಕ್ಕೆ ಒಳಬರುವ ಎಲ್ಲ ವಾಹನಗಳ ತಪಾಸಣೆ ಮತ್ತು ವಾಹನ ಪರವಾನಗಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ರಾತ್ರಿ ಗಸ್ತಿನಲ್ಲಿದ್ದಾರೆ.
ಇದೇ ರೀತಿಯ ಭದ್ರತೆ ನಗರದಲ್ಲಿ ಇನ್ನೂ 2 ದಿನಗಳ ಕಾಲ ಮುಂದುವರಿಯಲಿದೆ. ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದಲ್ಲಿ ಭದ್ರತೆಯನ್ನು ಮುಂದುವರಿಸಲಾಗುವುದು. ಜನರು ಯಾವುದೇ ರೀತಿ ಆತಂಕ ಪಡಬೇಕಾಗಿಲ್ಲ. ಯಾವ ತೊಂದರೆಯಾಗದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ ಎಂದು ಭರವಸೆ ನೀಡಿದರು.
ಅನುಮಾಸ್ಪದ ವ್ಯಕ್ತಿಗಳ ಬಗ್ಗೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದವರ ಹೆಸರುಗಳನ್ನು ಗೌಪ್ಯವಾಗಿಡಲಾಗುತ್ತದೆ. ಮಾಹಿತಿ ನೀಡಿದವರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಹೇಳಿದರು. ಅಲ್ಲದೆ ತಪಾಸಣೆ ವೇಳೆ ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಶೆಟ್ಟರ್ ಹೇಳಿಕೆ: ಹೈದರಾಬಾದಿನಲ್ಲಿ ಗುಪ್ತಚರ ಇಲಾಖೆ ಮುನ್ನಚರಿಕೆ ವಹಿಸಿದ್ದರೆ ಬಾಂಬ್ ಸ್ಪೋಟ ಘಟನೆಯನ್ನು ತಡೆಯಬಹುದಿತ್ತು. ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಆದರೂ ರಾಜ್ಯದಲ್ಲಿ ತೀವ್ರ ನಿಗಾವಹಿಸಲು ಸೂಚಿಸಲಾಗಿದೆ. ಇಂಥ ಪ್ರಕರಣಗಳು ಮತ್ತೆ ಮರುಕಳಿಸದಂತೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು ಎಂದರು,
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications