ಹೈಸ್ಫೋಟ: NIA ತಂಡ ಸದ್ಯದಲ್ಲೇ ಪರಪ್ಪನ ಜೈಲಿಗೆ

ಹಾಗಾದರೆ ಹೈದರಾಬಾದ್ ಅವಳಿ ಸ್ಫೋಟಕ್ಕೂ ಅಬ್ದುಲ್ ನಾಸೀರ್ ಮದನಿಗೂ ಲಿಂಕ್ ಇದೆಯಾ? ಎಂದು ತಲೆಕೆಡಿಸಿಕೊಳ್ಳಲು ಆರಂಭಿಸಿದ್ದಾರೆ. ಜತೆಗೆ, ಸದ್ಯಕ್ಕೆ ಹೈದರಾಬಾದ್ ಅವಳಿ ಸ್ಫೋಟದ ಪ್ರಮುಖ ರೂವಾರಿ ಎಂದು ಗುರುತಿಸಲಾಗಿರುವ ಅಬು ಉಸ್ತಾದ್ ಮತ್ತು ಅಬ್ದುಲ್ ನಾಸೀರ್ ಮದನಿ ಮಧ್ಯೆ ನಿಕಟ ಸಂಪರ್ಕವಿದೆ. ಇದು ಪೊಲೀಸರ ಅನುಮಾನವನ್ನು ಮತ್ತಷ್ಟು ಗಾಢವಾಗಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ತಂಡ ಸದ್ಯದಲ್ಲೇ ಬೆಂಗಳೂರಿಗೆ ಬಂದು ಪರಪ್ಪನ ಅಗ್ರಹಾರ ಜೈಲುವಾಸಿಗಳನ್ನು ವಿಚಾರಿಸಿಕೊಳ್ಳಲಿದ್ದಾರೆ. ಈ ಸಂಭಂದ ಅದಾಗಲೇ ಉನ್ನತಾಧಿಕಾರಿಗಳ ಮಧ್ಯೆ ಮಾತುಕತೆ ನಡೆದಿದೆ ಎಂದು ಖಚಿತ ಮೂಲಗಳು ತಿಳಿಸಿವೆ.
ಈ ಅಬು ಉಸ್ತಾದ್ ಹೈದರಾಬಾದಿನಲ್ಲಿ 'ನೂರಿಷಾ ತರೀಖತ್' ಎಂಬ ಮದರಸಾ ಶಾಲೆಯ ಮುಖ್ಯಸ್ಥನೂ ಹೌದು. ಈ ಮದರಸಾ ಮೂಲಕವೇ ಜಿಹಾದ್ ಗಾಗಿ ಅಬು ಉಸ್ತಾದ್ ಯುವಕರನ್ನು ನೇಮಕಾತಿ ಮಾಡಿಕೊಳ್ಳುವುದು ಎಂಬ ಮಾಹಿತಿಯೂ ಇದೆ. ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿರುವ ಬಹುತೇಕ ಆರೋಪಿಗಳು ಇದೇ ಮದರಸಾ ಶಾಲೆಯ ಕೂಸುಗಳು!
ಹೈದರಾಬಾದ್ ಅವಳಿ ಸ್ಫೋಟದ ಆರೋಪಿಗಳಾದ ಸೈನುದ್ದೀನ್ ಮತ್ತು ಅವನ ಪುತ್ರ ಷಫಾರುದ್ದೀನ್ ಅಬು ಉಸ್ತಾದನ ಮಾವನ ಮನೆಯವರು. ಅಬು ಉಸ್ತಾದನ ಮಗಳಾದ ಸಾಫಿಯಾ ಮದ್ವೆಯಾಗಿರುವುದು ನಿಜಾಮುದ್ದೀನನನ್ನು. ಈ ನಿಜಾಮುದ್ದೀನ್ ಷಫಾರುದ್ದೀನನ ಸೋದರ.
ಮೇಲ್ನೋಟಕ್ಕೆ ಗೋಚರಿಸುವಂತೆ ಉಸ್ತಾದ್ ಮತ್ತು ಮದನಿ ಕ್ಲೋಸ್ ಫ್ರೆಂಡ್ಸ್. ಹೇಗೆಂದರೆ, ತನ್ನ ಹೈದರಾಬಾದಿನ ಮದರಸಾಗಳಲ್ಲಿ ಮದನಿಗೆ ಭಾಷಣ ಮಾಡಲು ಅನುವು ಮಾಡಿಕೊಡುತ್ತಿದ್ದ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications