ಬೆಂಗಳೂರು ಕಾರ್ ಪೂಲಿಂಗ್ ಬಗ್ಗೆ ನೀವೇನಂತೀರಿ?
ಬೆಂಗಳೂರು, ಫೆ. 25: ಕಾರು ಹಂಚಿಕೆ ಅಂದರೆ car-pooling ಅಥವಾ car-sharing ಎಂಬ ಸೌಹಾರ್ಧ ವ್ಯವಸ್ಥೆಗೆ ಬೆಂಗಳೂರು ಪೊಲೀಸರು ಮತ್ತೆ ಮೊರೆಹೋಗಿದ್ದಾರೆ. ಬೆಂಗಳೂರು ಟ್ರಾಫಿಕ್ ಮಧ್ಯೆ ನಿಂತು ಕಾರ್ ಪೂಲಿಂಗ್ ವ್ಯವಸ್ಥೆ ಬಗ್ಗೆ ನೀವು ಏನಂತೀರಿ, ಹೇಳಿ.
ಏಕೆಂದರೆ ಕಾರ್ ಪೂಲಿಂಗ್ ವ್ಯವಸ್ಥೆಯಿಂದ ಸುಗಮ ಸಂಚಾರದ ಜತೆಗೆ ಹಣ ಮತ್ತು ಪೆಟ್ರೋಲ್ ಉಳಿತಾಯ ಸಾಧ್ಯವಾಗುತ್ತದೆ.ಅದಕ್ಕಿಂತ ಮುಖ್ಯವಾಗಿ ಟ್ರಾಫಿಕ್ ಒತ್ತಡ ನಿವಾರಣೆಯಾಗಿ ನಿಮ್ಮ ಆರೋಗ್ಯವೂ ಉತ್ತಮಗೊಳ್ಳುತ್ತದೆ ಎಂಬ ವಾಸ್ತವವನ್ನು ತೆರೆದಿಡುತ್ತಾರೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ.

ಶನಿವಾರ ಆಯೋಜಿಸಲಾಗಿದ್ದ 'ಕಾರ್ ಪೂಲಿಂಗ್ ಆಂದೋಲನ' ಕಾರ್ಯಕ್ರಮದಲ್ಲಿ ಮಾತನಾಡಿದ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಅವರು ಇತ್ತೀಚಿನ ದಿನಗಳಲ್ಲಿ ಉಳ್ಳವರು ಕೇವಲ ಪ್ರತಿಷ್ಠೆಗಾಗಿ ಐಷಾರಾಮಿ ಕಾರುಗಳನ್ನು ಖರೀದಿಸುತ್ತಿದ್ದಾರೆ. ಇದರಿಂದಾಗಿಯೇ ನಗರದಲ್ಲಿ ಸಂಚಾರ ದಟ್ಟಣೆ ಅಧಿಕವಾಗುತ್ತಿದೆ. ಟ್ರಾಫಿಕ್ ಕಡಿಮೆ ಮಾಡಿ, ಸುಗಮ ಸಂಚಾರ ವ್ಯಸವ್ಥೆ ಕಲ್ಪಿಸಲು ಪೊಲೀಸರ ಜತೆಗೆ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಅವರು ಆಶಿಸಿದರು.
ಇದನ್ನು ಆದ್ಯವಾಗಿ ಗಮನಿಸಿ: ಬೆಂಗಳೂರಿನಲ್ಲಿ 10 ದಶಲಕ್ಷ ಜನರಿದ್ದಾರೆ. ಹಾಗೆಯೇ, 44 ಲಕ್ಷ ಕಾರಿಗಳಿವೆ. ಪೀಕ್ ಅವರ್ ನಲ್ಲಿ ಟ್ರಾಫಿಕ್ ವೇಗ ಸರಾಸರಿ ಗಂಟೆಗೆ 15 ಕಿಮೀ ವೇಗ(?)ದಲ್ಲಿರುತ್ತದೆ.
ವಾಯು ಮಾಲಿನ್ಯ ಬೆಂಗಳೂರಿನಲ್ಲಿ ಕಳೆದೊಂದು ದಶಕದಲ್ಲಿ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗಿದೆ. ಗರಿಷ್ಠ ಶಬ್ದಮಾಲಿನ್ಯ 62.7 ಡೆಸಿಬಲ್ಸ್ ಇರಬೇಕು. ಆದರೆ ಅದು 100ರ ಗಡಿ ದಾಟಿದೆ.
ಮಿರ್ಜಿ ಇನ್ನೂ ಏನು ಹೇಳಿದರೆಂದರೆ: ದಿನ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಗಳಲ್ಲಿ ತೆವಳಿಕೊಳ್ಳುತ್ತಾ ಹೋದರೆ ಇನ್ನೂ ಏನಾಗುತ್ತದೆಂದರೆ ಸ್ಮರಣೆ ಶಕ್ತಿ ಕುಂದುತ್ತದೆ. ದೈಹಿಕ ಬಳಲಿಕೆ. ಆಯಾಸ, ರಕ್ತದೊತ್ತಡ, ಮಾಂಸಖಂಡಗಳ ಮೇಲೆ ಒತ್ತಡ, ಹೃದಯ ಬಡಿತ ಏರಿಕೆ, ಇದರಿಂದ ಕೆಲಸಕ್ಕೆ ಚಕ್ಕರ್ ಹೊಡೆಯುವ ಪರಿಪಾಠ ಹೆಚ್ಚಾಗುತ್ತಿದೆ. ಬೇಕಾ ಇದೆಲ್ಲ!?
ಒಂದೇ ಕಚೇರಿಯಲ್ಲಿ ಕೆಲಸ ಮಾಡುವ ಒಂದೇ ಮಾರ್ಗವಾಗಿ ಪ್ರಯಾಣಿಸುವ ನಾಲ್ವರು ಉದ್ಯೋಗಿಗಳು, ಪ್ರತ್ಯೇಕವಾಗಿ ನಾಲ್ಕು ಕಾರುಗಳಲ್ಲಿ ಹೋಗುವ ಬದಲು ಒಂದೇ ವಾಹನದಲ್ಲಿ ಸಂಚರಿಸಬೇಕು. ಇದರಿಂದ ಸಂಚಾರ ದಟ್ಟಣೆ ನಿಯಂತ್ರಣವಾಗುತ್ತದೆ. ಜತೆಗೆ, ಹಣ ಮತ್ತು ಇಂಧನ ಉಳಿತಾಯವೂ ಆಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.
ತಮ್ಮ ಕೈಲಾದ ಮಟ್ಟಿಗೆ ಸಮಾಜಕ್ಕೆ ಉಪಯೋಗವಾಗುವಂತೆ ಜನ ಯೋಚಿಸಬೇಕು. ಶರವೇಗದಲ್ಲಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿಯಲ್ಲಿ ವಾಹನ ದಟ್ಟಣೆ ದಟ್ಟವಾಗಿದೆ. ಇದರ ನಿಯಂತ್ರಣದ ಜವಾಬ್ದಾರಿ ಪ್ರತಿಯೊಬ್ಬ ಕರ್ತವ್ಯ. ಆದ್ದರಿಂದ ಕಡ್ಡಾಯವಾಗಿ ಕಾರ್ ಪೂಲಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದಾಗಿ/ಪಾಲಿಸುವುದಾಗಿ ದೃಢ ಸಂಕಲ್ಪ ಮಾಡಬೇಕು ಎಂದು ಆಯುಕ್ತ ಜ್ಯೋತಿಪ್ರಕಾಶ್ ಮಿರ್ಜಿ ಹೇಳಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications