ಈಶ್ವರಪ್ಪಗೆ ಚುನಾವಣೆ ಭವಿಷ್ಯ ನುಡಿದ ಹರತಾಳು ಹಾಲಪ್ಪ

ಹಾಗಾದರೆ ಗೆಲುವು ಯಾರಿಗಪ್ಪಾ ಅಂತ ಕೇಳಿದರೆ 'ಕಳೆದ ನಾಲ್ಕೂವರೆ ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಪಟ್ಟಣದಲ್ಲಿ ನಡೆದ ಅಭಿವೃದ್ಧಿ ಯೋಜನೆಗಳೇ ನಮಗೆ ಶ್ರೀರಕ್ಷೆ. ತತ್ಫಲವಾಗಿ ಕೆಜೆಪಿ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲಲಿದ್ದಾರೆ' ಎಂದು ಮಾಜಿ ಬಿಜೆಪಿ ಪ್ರತಿನಿಧಿ ಹಾಲಪ್ಪ ಹೇಳಿದ್ದಾರೆ.
ನಿನ್ನೆ ಸೊರಬ ಪಟ್ಟಣದ ಕೆಜೆಪಿ ಕಚೇರಿ ಆವರಣದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. 'ಕೆಜೆಪಿಯಿಂದಲೇ ಸೊರಬದಲ್ಲಿ ಕಣಕ್ಕಿಳಿಯುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈ ಕ್ಷೇತ್ರದಿಂದ ನಾನು ಪುನರಾಯ್ಕೆಯಾಗುವುದೂ ನಿಶ್ಚಿತ' ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರ ಮೂಲಕ 16 ಕೋಟಿ ರೂ. ಅನುದಾನವನ್ನು ತಂದು ಪಟ್ಟಣದ ಅಭಿವೃದ್ಧಿಗಾಗಿ ಅಭಿವೃದ್ಧಿಪಡಿಸಿದ್ದೇನೆ. ಕಳೆದ 40 ವರ್ಷಗಳಿಂದ ಯಾರೂ ಮಾಡದ ಅಭಿವೃದ್ಧಿಯನ್ನು ನಾಲ್ಕೇ ವರ್ಷದಲ್ಲಿ ಮಾಡಿ ತೋರಿಸಿದ್ದೇನೆ. ಇದಕ್ಕೆ ಕಾರಣ ಬಿಎಸ್ ಯಡಿಯೂರಪ್ಪ ಅವರು. ತಾಲೂಕಿನ ಬಗ್ಗೆ ಪರಿಚಯವೇ ಇಲ್ಲದನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಿದ ಜನತೆಗೆ ತಾವೆಂದೂ ದ್ರೋಹ ಬಗೆಯುವಿದಿಲ್ಲ' ಎಂದೂ ಅವರು ವಾಗ್ದಾನ ನೀಡಿದರು.
ಯಡಿಯೂರಪ್ಪನ್ನ ಮುಖ್ಯಮಂತ್ರಿ ಮಾಡುವುದೇ ಹಾಲಪ್ಪ ಗುರಿ:
ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ನಂತರ ಯಾವುದೇ ಅನುದಾನದ ಹಣವನ್ನು ಬಿಡುಗಡೆ ಮಾಡದೇ ತಾಲೂಕನ್ನು ನಿರ್ಲಕ್ಷಿಸುತ್ತಿದ್ದಾರೆ. ತಾವು ಯಡಿಯೂರಪ್ಪನವರ ಬೆಂಬಲಿಗ ಎನ್ನುವ ಏಕೈಕ ಕಾರಣಕ್ಕಾಗಿ ಜನೋಪಯೋಗಿ ಕಾರ್ಯಕ್ರಮಗಳನ್ನು ನಿಲ್ಲಿಸಿದ್ದಾರೆ. ಕೆಎಸ್ ಈಶ್ವರಪ್ಪ ತಾವು ಸರ್ಕಾರ ಒಬ್ಬ ಪ್ರತಿನಿಧಿ ಎಂಬುದನ್ನೇ ಮರೆತು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅನುದಾನ ಬಿಡುಗಡೆಯಾಗದೇ ಇದ್ದ ಮೇಲೆ ಶಾಸಕನಾಗಿ ಮುಂದುವರೆಯಲು ಅರ್ಥವಿಲ್ಲ ಎಂದೇ ಭಾವಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕೋಮಾಸ್ಥಿತಿಯಲ್ಲಿರುವ ಬಿಜೆಪಿ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ. ಈಶ್ವರಪ್ಪ ಮುಂದಿನ ಚುನಾವಣೆಯಲ್ಲಿ ಸೋಲುವುದು ನಿಶ್ಚಿತ. ಬಿಜೆಪಿಯನ್ನು ನಿರ್ನಾಮ ಮಾಡಿ, ಕೆಜೆಪಿಯನ್ನು ಅಧಿಕಾರಕ್ಕೆ ತಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ತಮ್ಮ ಮುಂದಿನ ಗುರಿ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications