ಉಡುಪಿಗೆ ಕಂಟಕ : ಶ್ರೀಕೃಷ್ಣ ಮಠದ ಸ್ಪಷ್ಟನೆ
ಉಡುಪಿ, ಫೆ 27: ಅಷ್ಟಮಂಗಲ ಪ್ರಶ್ನೆ ಮತ್ತು ಉಡುಪಿಗೆ ಆಗಬಹುದಾದ ಕಂಟಕದ ಬಗ್ಗೆ ಶ್ರೀಕೃಷ್ಣ ಮಠ ಸ್ಪಷ್ಟನೆ ನೀಡಿದೆ. ಮೇ 13 ರಂದು ಕ್ಷೇತ್ರಕ್ಕೆ ಯಾವುದೇ ಕಂಟಕವಿಲ್ಲ, ಭಕ್ತಾದಿಗಳು ಭಯ ಪಡುವ ಅಗತ್ಯವಿಲ್ಲ ಎಂದು ಮದನಂತೇಶ್ವರ ದೇವಾಲಯದ ಆಡಳಿತ ಅಧಿಕಾರಿ ವಿಷ್ಣು ಒನ್ಇಂಡಿಯಾಗೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ದೇವಾಲಯದ ಆವರಣದಲ್ಲಿ ಅಷ್ಟಮಂಗಲ ಪ್ರಶ್ನೆ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು ಹೌದು. ಆದರೆ ಮೇ 13ರಂದು ಶುಕ್ರನು ತನ್ನ ಸಂಚಾರವನ್ನು ಬದಲಿಸುವ ದಿನವಾಗಿರುವುದರಿಂದ ಅಂದು ದೇವಾಲಯದ ಹಿರಿಯರೊಬ್ಬರಿಗೆ ತೊಂದರೆಯಾಗಬಹುದು ಎಂದು ಪ್ರಶ್ನೆಯ ವೇಳೆ ತೋರಿಬಂದಿದೆ ಎಂದು ವಿಷ್ಣು ಹೇಳಿದರು.

ಅಷ್ಟಮಂಗಲ ಪ್ರಶ್ನೆಯ ವೇಳೆ ದೇವಾಲಯದಲ್ಲಿ ಶುಚಿತ್ವದ ಬಗ್ಗೆ ಪ್ರಸ್ತಾಪ ಬಂದಿದ್ದು ನಿಜ, ಬರುವ ಭಕ್ತಾದಿಗಳು ಕ್ಷೇತ್ರದ ನೈರ್ಮಲ್ಯತೆ ಬಗ್ಗೆ ಉದಾಸೀನತೆ ತೋರುತ್ತಿರುವುದರಿಂದ ಹೀಗಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ನುಡಿದರು.
ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ತಾವು ತರುವ ವಿಗ್ರಹಗಳನ್ನು ಅಲ್ಲಲ್ಲಿ ತಂದಿಡುತ್ತಾರೆ. ಇರುವ ವಿಗ್ರಹಗಳಿಗೆಲ್ಲಾ ಪೂಜೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಭಕ್ತಾದಿಗಳು ತಂದಿಟ್ಟ ವಿಗ್ರಹಗಳನ್ನು ವಾಪಸ್ ತೆಗೆದುಕೊಂಡು ಹೋಗಿ ತಮ್ಮ ತಮ್ಮ ಇಚ್ಛಾನುಸಾರ ಪೂಜೆ ಮಾಡಬೇಕೆಂದು ವಿಷ್ಣು ವಿನಂತಿಸಿಕೊಂಡರು.
ದೇವಾಲಯ ಮತ್ತು ಮಠಕ್ಕೆ ಸಂಬಂಧಪಟ್ಟ ವಿಗ್ರಹಗಳಿಗೆ ಶಾಸ್ತ್ರೋಕ್ತವಾಗಿ ಪೂಜೆಗಳು ನಡೆಯುತ್ತಿವೆ. ಮೇ 13ಕ್ಕೆ ಕ್ಷೇತ್ರಕ್ಕೆ ಯಾವುದೇ ಕಂಟಕವಿಲ್ಲ. ಇದೊಂದು ಅಪಪ್ರಚಾರದ ತಂತ್ರ ಎಂದು ಸಮಸ್ತ ಭಕ್ತಾದಿಗಳಲ್ಲಿ ಈ ಮೂಲಕ ವಿನಂತಿಸಿ ಕೊಳ್ಳುತ್ತಿದ್ದೇವೆ ಎಂದು ದೇವಾಲಯದ ಆಡಳಿತ ಅಧಿಕಾರಿ ವಿಷ್ಣು ಸ್ಪಷ್ಟನೆ ನೀಡಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications