ಹವಾಲಾ ಆರೋಪಿ ಮಧು ಕೋಡಾಗೆ ಜಾಮೀನು

42 ವರ್ಷ ವಯಸ್ಸಿನ ಮಧು ಕೋಡಾ ಅವರು ಜೈಲಿನಿಂದ ಹೊರ ಬರಲು ಸದ್ಯಕ್ಕೆ ಸಾಧ್ಯವಾಗುವುದಿಲ್ಲ. ಇನ್ನೂ ಎರಡು ಪ್ರಕರಣಗಳಲ್ಲಿ ಅವರಿಗೆ ಜಾಮೀನು ಸಿಗಬೇಕಿದೆ ಎಂದು ಅವರ ಪರ ವಕೀಲ ಹೇಳಿದ್ದಾರೆ.
2009ರಲ್ಲಿ ಸಿಂಗಬೂಮ್ ಕ್ಷೇತ್ರದ ಸಂಸದರಾಗಿರುವ ಮಧು ಕೋಡಾ ಅವರು ಸ್ವಗ್ರಾಮ ಚೈಬಾಸಾದಲ್ಲಿರುವ ನಿವಾಸಕ್ಕೆ ತೆರಳಿ ಎಸ್ಪಿ ಅಖಿಲೇಶ್ ಕುಮಾರ್ ಅವರ ನೇತೃತ್ವದ ತಂಡ ಬಂಧಿಸಿದ್ದರು.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧು ಕೋಡಾ ಹಾಗೂ ಅವರ ಸಂಪುಟದಲ್ಲಿದ್ದ 6 ಮಾಜಿ ಸಚಿವರು ಮತ್ತು ಇಬ್ಬರು ಆಪ್ತರಾದ ಮನೋಜ್ ಪುನಾಮಿಯಾ ಮತ್ತು ಅರವಿಂದ್ ವ್ಯಾಸ್ ಅವರ ಮೇಲೆ ಸಿಬಿಐ ಪ್ರತ್ಯೇಕ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಂಡಿತ್ತು. ಜಾರಿ ನಿರ್ದೇಶನಾಲಯ ಕೂಡಾ ನ್ಯಾಯಾಲಯಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು.
ಜಾರಿ ನಿರ್ದೇಶನಾಲಯದ ಪ್ರಕಾರ ಸುಮಾರು 2500 ಕೋಟಿ ರು ಅವ್ಯವಹಾರ ಆರೋಪ ಹೊರೆಸಲಾಗಿತ್ತು. ನಂತರ 3400 ಕೋಟಿ ಅಕ್ರಮ ಬಯಲಿಗೆಳೆಯಲಾಗಿತ್ತು. ಸಿಬಿಐ ತಂಡ ದೇಶದಾದ್ಯಂತ ಸುಮಾರು 70 ಕಡೆಗಳಲ್ಲಿ ದಾಳಿ ನಡೆಸಿದ್ದರು. ಮಧುಕೋಡಾ ಅವರ ಸ್ಥಿರ ಹಾಗೂ ಚರಾಸ್ಥಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿತ್ತು. ಸುಮಾರು 200 ಕೋಟಿ ವಶಪಡಿಸಿಕೊಂಡು ರಾಂಚಿ ನ್ಯಾಯಾಲಯದಲ್ಲಿ 2012ರಲ್ಲಿ ಮತ್ತೊಮ್ಮೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿ 23 ತಿಂಗಳು ಅಧಿಕಾರದಲ್ಲಿದ್ದ 39 ವರ್ಷದ ಮಧು ಕೋಡಾ, ಈ ಅವಧಿಯಲ್ಲಿ ಸುಮಾರು 5,500 ಕೋಟಿ ರುಪಾಯಿಗಳ ಅವ್ಯವಹಾರ ನಡೆಸಿದ್ದಾರೆ. ಮಧುಕೋಡಾ ಅವರು ಜಾರ್ಖಂಡ್ ನವನಿರ್ಮಾಣ ಮೋರ್ಚಾ ಎಂಬ ನೂತನ ಪಕ್ಷವನ್ನು ಹುಟ್ಟು ಹಾಕಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದ ಮಧು ಕೋಡಾ ಅವರ ಆಪ್ತ ಅನಿಲ್ ಬಸ್ತವಾಡೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಿಂದ ಭಾರತಕ್ಕೆ ಕರೆ ತಂದಿದ್ದರು. ಮಧು ಕೋಡಾ ಅವರು ಅಕ್ರಮವಾಗಿ ಸಂಗ್ರಹಿಸಿದ ಸಂಪತ್ತನ್ನು ವಿದೇಶಕ್ಕೆ ಸಾಗಿಸುವಲ್ಲಿ ಅನಿಲ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications