ಮಲ್ಲೇಶ್ವರಂ ಮಾರುಕಟ್ಟೆ ತೆರವು- ವ್ಯಾಪಾರಿಗಳ ವಿರೋಧ

ಪಾಲಿಕೆ ಅಧಿಕಾರಿಗಳು ಮಾರುಕಟ್ಟೆ ಬಳಿ ಬಂದಾಗ ವ್ಯಾಪಾರಸ್ಥರು ಪಾಲಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ ತೆರವುಗೊಳಿಸುವ ಕುರಿತು ಶುಕ್ರವಾರ ನೋಟಿಸ್ ನೀಡಿ ಶನಿವಾರ ತೆರವುಗೊಳಿಸಿದರೆ ಹೇಗೆ? ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡಿ. ಸಮಯವಕಾಶ ನೀಡಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಲ್ಲೇಶ್ವರಂ ಮಾರುಕಟ್ಟೆ ತೆರವುಗೊಳಿಸಿ ಆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಿಸುವುದು ಪಾಲಿಕೆಯ ಆಲೋಚನೆ. ಆದರೆ, ಇಲ್ಲಿನ ವ್ಯಾಪಾರಿಗಳಿಗೆ ತಾತ್ಕಾಲಿಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ. ತಾತ್ಕಾಲಿಕ ಮಾರುಕಟ್ಟೆಗಾಗಿ ನಿರ್ಮಿಸಿರುವ ಜಾಗದಲ್ಲಿ ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಟ್ಟಿಲ್ಲ. ಆದ್ದರಿಂದ ವ್ಯಾಪಾರಿಗಳು ಅಂಗಡಿಗಳ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿದ್ದಾರೆ.
ವ್ಯಾಪಾರಸ್ಥರ ವಿರೋಧದ ನಡುವೆಯೂ ಪಾಲಿಕೆ ಅಧಿಕಾರಿಗಳು 2 ಅಂಗಡಿಗಳನ್ನು ತೆರವುಗೊಳಿಸಿದರು. ಪಾಲಿಕೆ ಕ್ರಮ ಪ್ರಶ್ನಿಸಿ ವ್ಯಾಪಾರಿಗಳು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈಗಾಗಲೇ ಮಾರುಕಟ್ಟೆಯ ಕೆಲವು ಭಾಗಗಳನ್ನು ತೆರವುಗೊಳಿಸಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ. ಉಳಿದ ಭಾಗವನ್ನು ತೆರವುಗೊಳಿಸಲು ಇಂದು ಅಧಿಕಾರಿಗಳು ಆಗಮಿಸಿದ್ದರು.
ವಿರೋಧವೇಕೆ : ಮಾರುಕಟ್ಟೆಯಲ್ಲಿ ಸದ್ಯ 250ಕ್ಕೂ ಹೆಚ್ಚು ಅಂಗಡಿಗಳಿವೆ. ಆದರೆ, ನೂತನವಾಗಿ ನಿರ್ಮಿಸುತ್ತಿರುವ ಕಾಂಪ್ಲೆಕ್ಸ್ ನಲ್ಲಿ ಎಲ್ಲಾ ಅಂಗಡಿಗಳ ಮಾಲೀಕರಿಗೂ ಸ್ಥಳ ಒದಸಿಸುವ ಭರವಸೆ ನೀಡಿಲ್ಲ. ತಾತ್ಕಾಲಿಕ ಮಾರುಕಟ್ಟೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಿಲ್ಲ.
ಅಧಿಕಾರಿಗಳು ಅಂಗಡಿ ತೆರವಿಗೆ ನೋಟಿಸ್ ನೀಡಿ ಮರುದಿನ ಬಂದು ಎತ್ತಂಗಡಿ ಮಾಡಿಸುತ್ತಿದ್ದಾರೆ, ಸೂಕ್ತ ಸಮಯಾವಕಾಶ ನೀಡಿಲ್ಲ. ಆದ್ದರಿಂದ ಅಂಗಡಿ ಮಾಲೀಕರು ಪಾಲಿಕೆ ವಿರುದ್ಧ ತಿರುಗಿ ಬಿದ್ದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications