ಮಾ.2 : ಕರ್ನಾಟಕದ ಸೂಪರ್ ಫಾಸ್ಟ್ ಜಿಲ್ಲಾಸುದ್ದಿ

ಇವು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ವಿವಿಧ ಸುದ್ದಿಗಳ ತುಣುಕುಗಳು. ದುರಾದೃಷ್ಟದ ಸಂಗತಿಯೆಂದರೆ, ಎಲ್ಲ ಘಟನೆಗಳು ದುರಂತದಲ್ಲಿ ಕೊನೆಗೊಂಡಿವೆ. ಒಂದು ಘಟನೆಯಲ್ಲಿ ನಾಲ್ವರು ಅಪಘಾತದಲ್ಲಿ ಸಾವಿಗೀಡಾಗಿದ್ದರೆ, ಮತ್ತೊಂದು ಘಟನೆಯಲ್ಲಿ ಓರ್ವ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಚಾಮರಾಜನಗರದಲ್ಲಿ ಭೀಕರ ಅಪಘಾತ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾಡರಹಳ್ಳಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಇಂಡಿಕಾ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರನ್ನು ಚಲಾಯಿಸುತ್ತಿದ್ದ ಅಶೋಕ್ (40), ಅವರ ತಾಯಿ ಬೋರಮ್ಮ (60) ಮತ್ತು ಮಗಳಾದ ಸೋನು (6), ಸಹೋದರನ ಮಕ್ಕಳಾದ ಯಶವಂತ (3) ಮತ್ತು ವೈಭವ್ (ಒಂದೂವರೆ ವರ್ಷ) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಶೋಕ್ ಅವರ ಪತ್ನಿ ನಳಿನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಅಗ್ನಿ ಆಕಸ್ಮಿಕ : ಬಾಣಸವಾಡಿ ಪೊಲೀಸ್ ಠಾಣೆ ಬಳಿಯಿರುವ ಹರ್ಯಾಣ ಹ್ಯಾಂಡ್ ಲೂಮ್ ಬಟ್ಟೆ ಅಂಗಡಿ ಮತ್ತು ಗೋಡೌನಿನಲ್ಲಿ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದೆ. ಈ ಘಟನೆ ಶನಿವಾರ ಮಧ್ಯಾಹ್ನ 2.15ರ ಸುಮಾರಿಗೆ ಸಂಭವಿಸಿದ್ದು, 12ರಿಂದ 13 ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ. ಈ ಘಟನೆ ಹೇಗೆ ಸಂಭವಿಸಿತು ಎಂದು ತಿಳಿದುಬಂದಿಲ್ಲ.
ರಾಮನಗರ ರೈತನಿಂದ ಆತ್ಮಹತ್ಯೆಗೆ ಯತ್ನ : ಜಮೀನಿಗೆ ಸಂಬಂಧಿಸಿದ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದ ಸರ್ವೇ ಮತ್ತು ಕಂದಾಯ ಅಧಿಕಾರಿಗಳ ಧೋರಣೆಯಿಂದ ಬೇಸತ್ತು ವಾಸು ಎಂಬ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜಾಲಮಂಗಲದ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶುಕ್ರವಾರ ವಾಸು ಅವರ ಸಂಬಂಧಿ ಗಂಗಯ್ಯ ಅವರು ಮಿನಿ ವಿಧಾನಸೌಧದಿಂದ ಹಾರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ನೂರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಬಿದ್ದ ಶ್ರೀರಂಗಪಟ್ಟಣ ಗುಡಿ ಮೇಲಿನ ಕಳಶ : ಒಂದೂವರೆ ಸಾವಿರ ವರ್ಷ ಹಳೆಯ ಶ್ರೀರಂಗಪಟ್ಟಣ ರಂಗನಾಥ ದೇಗುಲದ ರಾಜಗೋಪುರದ ಮೇಲಿದ್ದ ಪಂಚಲೋಹದ ಎರಡು ಕಳಶಗಳು ಶುಕ್ರವಾರ ಬಿದ್ದಿದ್ದು, ಮುಜರಾಯಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 60 ಅಡಿ ಎತ್ತರವಿರುವ ಗೋಪುರದ ಮೇಲಿದ್ದ 50 ಕೆಜಿ ತೂಕವಿರುವ ಕಳಶಗಳು ಬಿದ್ದಿರುವುದು ಅಪಶಕುನದ ಸಂಕೇತ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಐತಿಹಾಸಿಕ ದೇವಸ್ಥಾನದ ಕಟ್ಟಡ ಶಿಥಿಲಾವಸ್ಥೆಯಲ್ಲಿ ಇದ್ದರೂ ಮುಜರಾಯಿ ಇಲಾಖೆ ಅದರ ಜೀರ್ಣೋದ್ಧಾರಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ. ಗುಡಿಯ ಗೋಪುರ ಅನೇಕ ಕಡೆಗಳಲ್ಲಿ ಬಿರುಕುಬಿದ್ದಿದೆ. ಈಗಲೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತಷ್ಟು ಅನಾಹುತವಾಗುವ ಸಂಭವನೀಯತೆಯಿದೆ. ತುಕ್ಕು ಹಿಡಿದಿದ್ದ ಕಳಶ ಬಿದ್ದಿರುವುದು ಮುಂದೆ ಜರುಗುವ ಭಾರೀ ಅನಾಹುತದ ಸಂಕೇತ ಎಂದೂ ಹಳ್ಳಿ ಜನರು ಆಡಿಕೊಳ್ಳುತ್ತಿದ್ದಾರೆ.
ಓದುಗರಲ್ಲಿ ವಿನಂತಿ : ನಿಮ್ಮ ಜಿಲ್ಲೆಯಲ್ಲಿ ಸಂಭವಿಸುವ ಸಣ್ಣಸಣ್ಣ ಸುದ್ದಿಗಳನ್ನು ನಮಗೆ ಕಳಿಸಿ. ಫೋಟೋ ಇದ್ದರೆ ಲಗತ್ತಿಸಿ. ಧನ್ಯವಾದಗಳು. - ಸಂಪಾದಕ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications