ಮಾ.2 : ಕರ್ನಾಟಕದ ಸೂಪರ್ ಫಾಸ್ಟ್ ಜಿಲ್ಲಾಸುದ್ದಿ

ಇವು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ವಿವಿಧ ಸುದ್ದಿಗಳ ತುಣುಕುಗಳು. ದುರಾದೃಷ್ಟದ ಸಂಗತಿಯೆಂದರೆ, ಎಲ್ಲ ಘಟನೆಗಳು ದುರಂತದಲ್ಲಿ ಕೊನೆಗೊಂಡಿವೆ. ಒಂದು ಘಟನೆಯಲ್ಲಿ ನಾಲ್ವರು ಅಪಘಾತದಲ್ಲಿ ಸಾವಿಗೀಡಾಗಿದ್ದರೆ, ಮತ್ತೊಂದು ಘಟನೆಯಲ್ಲಿ ಓರ್ವ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಚಾಮರಾಜನಗರದಲ್ಲಿ ಭೀಕರ ಅಪಘಾತ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾಡರಹಳ್ಳಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಇಂಡಿಕಾ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರನ್ನು ಚಲಾಯಿಸುತ್ತಿದ್ದ ಅಶೋಕ್ (40), ಅವರ ತಾಯಿ ಬೋರಮ್ಮ (60) ಮತ್ತು ಮಗಳಾದ ಸೋನು (6), ಸಹೋದರನ ಮಕ್ಕಳಾದ ಯಶವಂತ (3) ಮತ್ತು ವೈಭವ್ (ಒಂದೂವರೆ ವರ್ಷ) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಶೋಕ್ ಅವರ ಪತ್ನಿ ನಳಿನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಅಗ್ನಿ ಆಕಸ್ಮಿಕ : ಬಾಣಸವಾಡಿ ಪೊಲೀಸ್ ಠಾಣೆ ಬಳಿಯಿರುವ ಹರ್ಯಾಣ ಹ್ಯಾಂಡ್ ಲೂಮ್ ಬಟ್ಟೆ ಅಂಗಡಿ ಮತ್ತು ಗೋಡೌನಿನಲ್ಲಿ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದೆ. ಈ ಘಟನೆ ಶನಿವಾರ ಮಧ್ಯಾಹ್ನ 2.15ರ ಸುಮಾರಿಗೆ ಸಂಭವಿಸಿದ್ದು, 12ರಿಂದ 13 ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ. ಈ ಘಟನೆ ಹೇಗೆ ಸಂಭವಿಸಿತು ಎಂದು ತಿಳಿದುಬಂದಿಲ್ಲ.
ರಾಮನಗರ ರೈತನಿಂದ ಆತ್ಮಹತ್ಯೆಗೆ ಯತ್ನ : ಜಮೀನಿಗೆ ಸಂಬಂಧಿಸಿದ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದ ಸರ್ವೇ ಮತ್ತು ಕಂದಾಯ ಅಧಿಕಾರಿಗಳ ಧೋರಣೆಯಿಂದ ಬೇಸತ್ತು ವಾಸು ಎಂಬ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜಾಲಮಂಗಲದ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶುಕ್ರವಾರ ವಾಸು ಅವರ ಸಂಬಂಧಿ ಗಂಗಯ್ಯ ಅವರು ಮಿನಿ ವಿಧಾನಸೌಧದಿಂದ ಹಾರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ನೂರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಬಿದ್ದ ಶ್ರೀರಂಗಪಟ್ಟಣ ಗುಡಿ ಮೇಲಿನ ಕಳಶ : ಒಂದೂವರೆ ಸಾವಿರ ವರ್ಷ ಹಳೆಯ ಶ್ರೀರಂಗಪಟ್ಟಣ ರಂಗನಾಥ ದೇಗುಲದ ರಾಜಗೋಪುರದ ಮೇಲಿದ್ದ ಪಂಚಲೋಹದ ಎರಡು ಕಳಶಗಳು ಶುಕ್ರವಾರ ಬಿದ್ದಿದ್ದು, ಮುಜರಾಯಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 60 ಅಡಿ ಎತ್ತರವಿರುವ ಗೋಪುರದ ಮೇಲಿದ್ದ 50 ಕೆಜಿ ತೂಕವಿರುವ ಕಳಶಗಳು ಬಿದ್ದಿರುವುದು ಅಪಶಕುನದ ಸಂಕೇತ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಐತಿಹಾಸಿಕ ದೇವಸ್ಥಾನದ ಕಟ್ಟಡ ಶಿಥಿಲಾವಸ್ಥೆಯಲ್ಲಿ ಇದ್ದರೂ ಮುಜರಾಯಿ ಇಲಾಖೆ ಅದರ ಜೀರ್ಣೋದ್ಧಾರಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ. ಗುಡಿಯ ಗೋಪುರ ಅನೇಕ ಕಡೆಗಳಲ್ಲಿ ಬಿರುಕುಬಿದ್ದಿದೆ. ಈಗಲೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತಷ್ಟು ಅನಾಹುತವಾಗುವ ಸಂಭವನೀಯತೆಯಿದೆ. ತುಕ್ಕು ಹಿಡಿದಿದ್ದ ಕಳಶ ಬಿದ್ದಿರುವುದು ಮುಂದೆ ಜರುಗುವ ಭಾರೀ ಅನಾಹುತದ ಸಂಕೇತ ಎಂದೂ ಹಳ್ಳಿ ಜನರು ಆಡಿಕೊಳ್ಳುತ್ತಿದ್ದಾರೆ.
ಓದುಗರಲ್ಲಿ ವಿನಂತಿ : ನಿಮ್ಮ ಜಿಲ್ಲೆಯಲ್ಲಿ ಸಂಭವಿಸುವ ಸಣ್ಣಸಣ್ಣ ಸುದ್ದಿಗಳನ್ನು ನಮಗೆ ಕಳಿಸಿ. ಫೋಟೋ ಇದ್ದರೆ ಲಗತ್ತಿಸಿ. ಧನ್ಯವಾದಗಳು. - ಸಂಪಾದಕ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications