ರಜೆ ಸಜೆ: ಸಬ್ ಇನ್ಸ್ ಪೆಕ್ಟರಿಗೆ ಬಿತ್ತು ಚಪ್ಪಲಿ ಏಟು

ರಾಜಾನುಕುಂಟೆ ಯುವ ಸಬ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಪೇದೆ ಆನಂದನಿಗೆ ರಜೆ ನೀಡದೆ ಅವನಿಂದಲೇ ಹತನಾದ ಘಟನೆ ನಡೆದ ನಂತರವೂ ಈ ಅಧಿಕಾರಿಗಳು ಎಚ್ಚೆತ್ತಿಲ್ಲ. ಮತ್ತೆ ತಮ್ಮ ಕೈಕೆಳಗಿನ ಪೇದೆಗಳನ್ನು ಗೋಳು ಹೊಯ್ದುಕೊಳ್ಳುವುದನ್ನು ಮುಂದುವರಿಸಿದ್ದಾರೆ.
ಚಿಕ್ಕಮಗಳೂರಿನ ರಾಮನಹಳ್ಳಿ ಬಡಾವಣೆಯಲ್ಲಿನ ಡಿಎಆರ್ ಕಚೇರಿಯಲ್ಲಿ ಮತ್ತದೇ ರಜೆ ಗೋಳು ಕಾಣಿಸಿಕೊಂಡಿದೆ. ಪೇದೆಯೊಬ್ಬರು ತನ್ನ ಮೇಲಧಿಕಾರಿ ಎಸ್ಸೈ ರಜೆ ನೀಡಲಿಲ್ಲವೆಂದು ರಪ್ಪಾ ರಪ್ಪಾ ಅಂತ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಎಆರ್ ಎಸ್ಐ ವಾಸುದೇವ್ ಹಲ್ಲೆಗೊಳಗಾದ ಅಧಿಕಾರಿ. ಮೀಸಲು ಪಡೆಯ ಕಾನ್ಸ್ಟೇಬಲ್ ಆನಂದ್ ಎಂಬವರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ವಾಸುದೇವ್ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೇದೆ ಆನಂದ್ ಎರಡು ದಿನಗಳ ಹಿಂದೆ ರಜೆ ಕೇಳಿ ಎಸ್ ಐ ವಾಸುದೇವ್ಗೆ ಮನವಿ ಸಲ್ಲಿಸಿದ್ದರು. ಆದರೆ, ವಾಸುದೇವ್ ರಜೆ ನೀಡಲು ಸತಾಯಿಸಿದರು ಎನ್ನಲಾಗಿದೆ. ಇದರಿಂದ ಕುಪಿತರಾದ ಆನಂದ್ ನಿನ್ನೆ ರಾತ್ರಿ ಕುಡಿದು ಕಚೇರಿಗೆ ಬಂದು, ಸದರಿ ಎಸ್ ಐ ಜೊತೆ ವಾಗ್ವಾದ ನಡೆಸಿದ್ದಾರೆ.
ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಕ್ರೋಧಗೊಂಡ ಪೇದೆ ಚಪ್ಪಲಿಯಿಂದ ವಾಸುದೇವ್ ಮುಖಕ್ಕೆ ಬಲವಾಗಿ ಹೊಡೆದಿದ್ದಾರೆ. ಚಪ್ಪಲಿ ಹೊಡೆತದಿಂದ ವಾಸುದೇವ್ ಮೂಗು ಛಿದ್ರಗೊಂಡು ರಕ್ತ ಸುರಿದಿದೆ. ತಕ್ಷಣ ವಾಸುದೇವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆನಂದನನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿದ್ದಾರೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಗಳನ್ನು ಹೀಗೆ ಗೋಳುಹೊಯ್ದುಕೊಳ್ಳುವುದು ಮಾಮೂಲು ಎಂದು ನಿವೃತ್ತರಾದ ಮೇಲೆ ಹಿರಿಯ ಅಧಿಕಾರಿಗಳೇ ಟಿವಿ ಚಾನೆಲುಗಳಲ್ಲಿ ಕುಳಿತು ಹೇಳುತ್ತಿರುತ್ತಾರೆ.
ಈ ಅವಿವೇಕಿ ಪೊಲೀಸ್ ಅಧಿಕಾರಿಗಳಿಗೆ ಯಾವಾಗ ಬುದ್ಧಿಬರುತ್ತದೋ...?
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications