ರಜೆ ಸಜೆ: ಸಬ್ ಇನ್ಸ್ ಪೆಕ್ಟರಿಗೆ ಬಿತ್ತು ಚಪ್ಪಲಿ ಏಟು

ರಾಜಾನುಕುಂಟೆ ಯುವ ಸಬ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಪೇದೆ ಆನಂದನಿಗೆ ರಜೆ ನೀಡದೆ ಅವನಿಂದಲೇ ಹತನಾದ ಘಟನೆ ನಡೆದ ನಂತರವೂ ಈ ಅಧಿಕಾರಿಗಳು ಎಚ್ಚೆತ್ತಿಲ್ಲ. ಮತ್ತೆ ತಮ್ಮ ಕೈಕೆಳಗಿನ ಪೇದೆಗಳನ್ನು ಗೋಳು ಹೊಯ್ದುಕೊಳ್ಳುವುದನ್ನು ಮುಂದುವರಿಸಿದ್ದಾರೆ.
ಚಿಕ್ಕಮಗಳೂರಿನ ರಾಮನಹಳ್ಳಿ ಬಡಾವಣೆಯಲ್ಲಿನ ಡಿಎಆರ್ ಕಚೇರಿಯಲ್ಲಿ ಮತ್ತದೇ ರಜೆ ಗೋಳು ಕಾಣಿಸಿಕೊಂಡಿದೆ. ಪೇದೆಯೊಬ್ಬರು ತನ್ನ ಮೇಲಧಿಕಾರಿ ಎಸ್ಸೈ ರಜೆ ನೀಡಲಿಲ್ಲವೆಂದು ರಪ್ಪಾ ರಪ್ಪಾ ಅಂತ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಎಆರ್ ಎಸ್ಐ ವಾಸುದೇವ್ ಹಲ್ಲೆಗೊಳಗಾದ ಅಧಿಕಾರಿ. ಮೀಸಲು ಪಡೆಯ ಕಾನ್ಸ್ಟೇಬಲ್ ಆನಂದ್ ಎಂಬವರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ವಾಸುದೇವ್ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೇದೆ ಆನಂದ್ ಎರಡು ದಿನಗಳ ಹಿಂದೆ ರಜೆ ಕೇಳಿ ಎಸ್ ಐ ವಾಸುದೇವ್ಗೆ ಮನವಿ ಸಲ್ಲಿಸಿದ್ದರು. ಆದರೆ, ವಾಸುದೇವ್ ರಜೆ ನೀಡಲು ಸತಾಯಿಸಿದರು ಎನ್ನಲಾಗಿದೆ. ಇದರಿಂದ ಕುಪಿತರಾದ ಆನಂದ್ ನಿನ್ನೆ ರಾತ್ರಿ ಕುಡಿದು ಕಚೇರಿಗೆ ಬಂದು, ಸದರಿ ಎಸ್ ಐ ಜೊತೆ ವಾಗ್ವಾದ ನಡೆಸಿದ್ದಾರೆ.
ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಕ್ರೋಧಗೊಂಡ ಪೇದೆ ಚಪ್ಪಲಿಯಿಂದ ವಾಸುದೇವ್ ಮುಖಕ್ಕೆ ಬಲವಾಗಿ ಹೊಡೆದಿದ್ದಾರೆ. ಚಪ್ಪಲಿ ಹೊಡೆತದಿಂದ ವಾಸುದೇವ್ ಮೂಗು ಛಿದ್ರಗೊಂಡು ರಕ್ತ ಸುರಿದಿದೆ. ತಕ್ಷಣ ವಾಸುದೇವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆನಂದನನ್ನು ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿದ್ದಾರೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಗಳನ್ನು ಹೀಗೆ ಗೋಳುಹೊಯ್ದುಕೊಳ್ಳುವುದು ಮಾಮೂಲು ಎಂದು ನಿವೃತ್ತರಾದ ಮೇಲೆ ಹಿರಿಯ ಅಧಿಕಾರಿಗಳೇ ಟಿವಿ ಚಾನೆಲುಗಳಲ್ಲಿ ಕುಳಿತು ಹೇಳುತ್ತಿರುತ್ತಾರೆ.
ಈ ಅವಿವೇಕಿ ಪೊಲೀಸ್ ಅಧಿಕಾರಿಗಳಿಗೆ ಯಾವಾಗ ಬುದ್ಧಿಬರುತ್ತದೋ...?
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications