ಬಿಜೆಪಿ 'ಕೈ'ಜೋಡಿಸಿದ್ದಕ್ಕೇ ಯಡಿಯೂರಪ್ಪಗೆ ಸಿಬಿಐ ಉರುಳು
ಬೆಂಗಳೂರು, ಮಾ.4: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಕೆಜೆಪಿ ಮತ್ತು ಕಾಂಗ್ರೆಸ್ ನಡುವಣ ಸಮಝೋತಾ ಬಗ್ಗೆ ಬಹುತೇಕ ಎಲ್ಲ ನಾಯಕರು ತಮ್ಮ ಶಕ್ತ್ಯಾನುಸಾರ ಮಾತನಾಡುತ್ತಿದ್ದಾರೆ. ಕೆಜೆಪಿ + ಕಾಂಗ್ರೆಸ್ ಎಷ್ಟರಮಟ್ಟಿಗೆ ನಿಜವೂ ಖುದ್ದು ಸೋನಿಯಾ ಗಾಂಧಿ ಅವರೇ ಸ್ಪಷ್ಟಪಡಿಸಬೇಕು. ಆದರೂ...

ಕೆಜೆಪಿ ಜತೆ ಯಾರೆಲ್ಲ 'ಕೈ' ಜೋಡಿಸ್ತಾರೆ
ಕಳೆದ ವಾರ ಪ್ರಚಾರ ಸಭೆಯೊಂದರ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಯುದ್ಧ ಗೆದ್ದ ಉತ್ಸಾಹದಲ್ಲಿ ಮಾತನಾಡುತ್ತಾ, ನೋಡ್ತಿರಿ ಕೆಜೆಪಿ ಜತೆ ಯಾರೆಲ್ಲ 'ಕೈ' ಜೋಡಿಸ್ತಾರೆ ಎಂಬ ನಿಗೂಢ ಮಾತನ್ನಾಡಿದರು. ಇದರಿಂದ ಗೊಂದಲ ಮತ್ತಷ್ಟು ಹೆಚ್ಚಾಯಿತು. ಕೆಜೆಪಿ ಮತ್ತು ಕಾಂಗ್ರೆಸ್ ಒಂದಾಗುವುದು ಮತದಾರನಿಗೆ ಅರ್ಥವಾಗದಿದ್ದರೂ ಚುನಾವಣೆ ಹೊಸ್ತಿಲಲ್ಲಿರುವ ರಾಜಕೀಯ ಪಕ್ಷಗಳಿಗೆ ಈ ವಿಷಯ ರಾಜಕೀಯ ದಾಳವಾಗಿ ಬಳಸುತ್ತಿವೆ.

ಬಿಜೆಪಿ ಕಾಂಗೈ ಒಂದಾಗಿ ಸಿಬಿಐ ಭೂತ ಸೃಷ್ಟಿ
ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿರುವುದು ಇಂಟರೆಸ್ಟಿಂಗ್ ಆಗಿದೆ. ಬಿಜೆಪಿ ಕಾಂಗ್ರೆಸ್ನೊಂದಿಗೆ ಸೇರಿಕೊಂಡು ಯಡಿಯೂರಪ್ಪನವರನ್ನು ಸಿಬಿಐ ಜಾಲಕ್ಕೆ ಸಿಲುಕಿಸುವ ಕುತಂತ್ರ ನಡೆಸಿದೆ ಎಂದು ಆರೋಪಿಸಿದರೆ ಅದನ್ನು ಜಗದೀಶ್ ಶೆಟ್ಟರ್ ಒಪ್ಪುತ್ತಾರೆಯೇ? ಎಂಬುದು ಶೋಭಾ ಅವರ ವಾದ. ಅಷ್ಟಕ್ಕೂ ಯಡಿಯೂರಪ್ಪನವರಿಗೇನೂ ಸಿಬಿಐ ಭಯವಿಲ್ಲ ಎಂದೂ ಮೇಡಂ ಶೋಭಾ ಹೇಳಿದ್ದಾರೆ.

ಆಗದ ಮಾತು ಬಿಡಿ: ಪರಮೇಶ್ವರ್
ಇನ್ನು ಜನಶ್ರೀ ನ್ಯೂಸ್ ಚಾನೆಲ್ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ ಅವರು ಕೆಜೆಪಿ ಜತೆ ಕಾಂಗ್ರೆಸ್ ಕೈಜೋಡಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ. ಅದೆಲ್ಲ ಸುಮ್ಮನೆ ಗಾಳಿಸುದ್ದಿ. ಕೆಪಿಸಿಸಿ ಅಧ್ಯಕ್ಷನಾಗಿ ಅಂತಹ ಸಾಧ್ಯತೆ ಬಗ್ಗೆ ನನ್ನ ಬಳಿ ಯಾರೂ ಚರ್ಚಿಸಿಯೂ ಇಲ್ಲ. ಅದೆಲ್ಲ ಆಗದ ಮಾತು ಬಿಡಿ.

ಶೆಟ್ರನ್ನ ಸಿಎಂ ಮಾಡಿದ್ದು ಯಾರು ಗೊತ್ತಾ?
ಸಿಬಿಐ ಭಯದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೈಹಿಡಿದಿದ್ದಾರೆ ಎಂದಿರುವ ಜಗದೀಶ್ ಶೆಟ್ಟರ ಬಗ್ಗೆ ಮಾಜಿ ಬಿಜೆಪಿ ಶೋಭಾ ಕರಂದ್ಲಾಜೆ ಕೆಂಡಕಾರಿದ್ದಾರೆ. ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎನ್ನುವುದನ್ನು ಶೆಟ್ಟರ್ ಮರೆಯಬಾರದು. ಯಡಿಯೂರಪ್ಪ ಇಲ್ಲದಿದ್ದರೆ ಸಿಎಂ ಆಗುತ್ತಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications