ನಿತ್ಯಾನಂದನ ಕಣ್ಣು ಮಹಾಲಿಂಗೇಶ್ವರ ಮಠದ ಮ್ಯಾಲ

ಹೀಗೆಂದು ಹೇಳಿದವರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಮಹಾಲಿಂಗಪುರ ಗ್ರಾಮದಲ್ಲಿ 11ನೇ ಶತಮಾನದಲ್ಲಿ ಸ್ಥಾಪಿತವಾಗಿರುವ ಮಹಾಲಿಂಗೇಶ್ವರ ಮಠದ ಪೀಠಾಧಿಪತಿಗಳಾಗಿರುವ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು. ನಿತ್ಯಾನಂದ ನೀಡಿರುವ ಹೇಳಿಕೆ ವಿರುದ್ಧ ಶಿವಯೋಗಿ ಸ್ವಾಮೀಜಿಗಳು ತೀವ್ರ ಆಕ್ಷೇಪ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ.
ಇಂಥ ಮತ್ತೊಂದು ವಿವಾದಕ್ಕೆ ಮತ್ತೆ ನಾಂದಿ ಹಾಡಿದವರು ರಾಮನಗರ ಜಿಲ್ಲೆಯಲ್ಲಿರುವ ಬಿಡದಿಯಲ್ಲಿ ಧ್ಯಾನಪೀಠಂ ಆಶ್ರಮ ನಡೆಸುತ್ತಿರುವ ವಿವಾದಾತ್ಮಕ ಸನ್ಯಾಸಿ ನಿತ್ಯಾನಂದ ಸ್ವಾಮಿ. ಮಹಾಲಿಂಗಪುರದಲ್ಲಿರುವ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿಗಬೇಕೆಂದು ತಮ್ಮನ್ನು ಶಿವಯೋಗಿ ರಾಜೇಂಜ್ರ ಸ್ವಾಮೀಜಿಗಳು ಕೇಳಿಕೊಂಡಿದ್ದಾರೆ ಎಂದು ನಿತ್ಯಾನಂದ ಹೇಳಿಕೆ ನೀಡಿರುವುದೇ ಈ ಗೊಂದಲ್ಲೆ ಕಾರಣವಾಗಿದೆ.
"ಆದಿಚುಂಚನಗಿರಿ ಶ್ರೀಗಳಾದ ಶ್ರೀ ಬಾಲಗಂಗಾಧರ ಮಹಾಸ್ವಾಮೀಜಿಯವರು ಕಾಲವಾದಾಗ ಬೆಂಗಳೂರಿಗೆ ಬಂದಿದ್ದೆ. ನನ್ನ ಸ್ನೇಹಿತರೊಬ್ಬರು ನಿತ್ಯಾನಂದನ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದು ನಿಜ. ಅಲ್ಲಿ ಆತನಿಂದ ಸನ್ಮಾನ ಸ್ವೀಕರಿಸಿದ್ದೂ ನಿಜ. ಆದರೆ ನಿತ್ಯಾನಂದ ಮತ್ತು ನನ್ನ ನಡುವೆ ಮಠಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯಾಗಲಿ ಒಪ್ಪಂದವಾಗಲಿ ನಡೆದಿಲ್ಲ. ನಿತ್ಯಾನಂದನ ಹೇಳಿಕೆ ನನಗೆ ತೀವ್ರ ಆಘಾತ ತಂದಿದೆ" ಎಂದು ಅವರು ಹೇಳಿದ್ದಾರೆ.
"ನಿಜ ಹೇಳಬೇಕೆಂದರೆ, ಆತ ಯಾರು ಎಂದೇ ನನಗೆ ಗೊತ್ತಿಲ್ಲ. ಚನ್ನಪಟ್ಟಣದ ನಾಟಿಕಾರ್ ಧರ್ಮಪ್ಪ ಎಂಬುವವರು ನನ್ನನ್ನು ಬಿಡದಿ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪೂಜೆಗೆಂದು ಕರೆದಿದ್ದರು. ಅಲ್ಲಿ 11ನೇ ಶತಮಾನದಲ್ಲಿ ಸ್ಥಾಪಿತವಾಗಿರುವ ಮಹಾಲಿಂಗೇಶ್ವರ ಮಠದ ಉತ್ತರಾಧಿಕಾರಿಯನ್ನಾಗಿ ನಿತ್ಯಾನಂದನನ್ನು ಮಾಡ್ತೀನೆಂದು ನಾನು ಖಂಡಿತ ಮಾತು ಕೊಟ್ಟಿಲ್ಲ. ಯಾವ ದಾಖಲೆಯನ್ನೂ ಆತನಿಗೆ ನೀಡಿಲ್ಲ. ಧರ್ಮ ಬಿಟ್ಟು ನಾನು ಏನನ್ನೂ ಮಾಡಿಲ್ಲ" ಎಂದು ಅವರು ಸಮಜಾಯಿಷಿ ನೀಡಲು ಯತ್ನಿಸಿದ್ದಾರೆ.
ಆದರೆ, ನಿತ್ಯಾನಂದ ತನ್ನ ಶಿಷ್ಯನೊಬ್ಬನಿಗೆ, ಮಹಾಲಿಂಗಪುರಕ್ಕೆ ಹೋಗಿ ಮಠದ ಉಸ್ತುವಾರಿ ನೋಡಿಕೊಳ್ಳಬೇಕು. ಮಹಾಲಿಂಗೇಶ್ವರ ಮಠದ ಸ್ವಾಮೀಜಿಗಳು ತನ್ನನ್ನು ಉತ್ತರಾಧಿಕಾರಿಯನ್ನಾಗಿ ಮಾಡಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಪುರಾವೆಯಾಗಿ ಲಿಖಿತ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದು, ಖಾಸಗಿ ವಾಹಿನಿ ಬಿತ್ತರ ಮಾಡಿರುವ ದೂರವಾಣಿ ಸಂದೇಶದಲ್ಲಿ ಬಹಿರಂಗವಾಗಿದೆ. ಈ ಹೇಳಿಕೆಯನ್ನು ಮಹಾಲಿಂಗೇಶ್ವರ ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಈ ಸುದ್ದಿ ಹಬ್ಬುತ್ತಿದ್ದಂತೆ ಮುಧೋಳ ಮತ್ತು ಸುತ್ತಮುತ್ತಲಿನ ಲಿಂಗಾಯತ ಸಮುದಾಯದವರು ಸಿಡಿದು ನಿಂತಿದ್ದಾರೆ. ಯಾವುದೇ ಕಾರಣಕ್ಕೂ ವಿವಾದಾತ್ಮಕ ನಿತ್ಯಾನಂದ ಸ್ವಾಮಿಗೆ ಲಿಂಗಾಯತರ ಮಠವನ್ನು ಪರಭಾರೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಡದೆ ಮಾತ್ರ ಸೀಮಿತವಾಗಿದ್ದ ನಿತ್ಯಾನಂದ ಉತ್ತರ ಕರ್ನಾಟಕದ ಮೇಲೂ ಕಣ್ಣು ಹಾಕಿರುವುದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಮುಧೋಳದ ಭಕ್ತಾದಿಗಳು ಮಠದ ಸ್ವಾಮೀಜಿ ಮೇಲೆ ಕೂಡ ಕ್ರೋಧಿತರಾಗಿದ್ದಾರೆ. ಅವರು ಸರಿಯಾಗಿದ್ದರೆ ಈ ಗೊಂದಲ ಏಕೆ ಸೃಷ್ಟಿಯಾಗುತ್ತಿತ್ತು ಎಂದು ಪ್ರಶ್ನಿಸುತ್ತಿದ್ದಾರೆ. ತಾವು ಮಾಡಿದ ತಪ್ಪಿಗೆ ಶಿವಯೋಗಿ ಸ್ವಾಮೀಜಿ ಜನರ ಕ್ಷಮೆ ಯಾಚಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications