ಆಸೆ ತೋರಿಸಿ ಮೋಸ ಮಾಡಿದ ಚಿಂಚನಸೂರ್ : ಆರೋಪ

ಯಾದಗಿರಿ ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರದಲ್ಲಿ ಎಂಎಲ್ಸಿ ಮಾಡುತ್ತೇನೆಂದು ಆಸೆ ತೋರಿಸಿ ಬಾಬುರಾವ್ ಚಿಂಚನಸೂರ್ ಅವರು ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಬಾಬುರಾವ್ ಅವರು 2.5 ಕೋಟಿ ರು. ಕೇಳಿದ್ದರು. 1.5 ಕೋಟಿ ರು. ಕೊಡುವುದಾಗಿ ಕೊನೆಗೆ ಒಪ್ಪಂದವಾಗಿತ್ತು. ಅದರಲ್ಲಿ 85 ಲಕ್ಷ ರು. ಹಣವನ್ನು ಮುಂಗಡವಾಗಿ ನೀಡಲಾಗಿದೆ. ಆದರೆ, ತಮ್ಮನ್ನು ಎಲ್ಸಿಯನ್ನಾಗಿಯೂ ಮಾಡಿಲ್ಲ, ಹಣವನ್ನೂ ಹಿಂದಿರುಗಿಸಿಲ್ಲ ಎಂದು ಅವರು ದೂರಿದರು. ಹಣ ಹಿಂದಿರುಗಿಸದಿದ್ದರೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.
ಶಾಸಕ ಬಾಬುರಾವ್ ಚಿಂಚನಸೂರ್ ಅವರಿಗೆ ಹಣ ನೀಡುವ ಸಂದರ್ಭದಲ್ಲಿ ಡಾ.ಅಜೇಯ್ ಜಾಧವ್ ಹಾಗೂ ಅಣ್ಣಾರಾವ್ ಮುತ್ತುಟ್ಟಿ ಜೊತೆ ಇದ್ದರು. ಹಣ ಪಡೆದಿರುವ ಚಿಂಚನಸೂರ್ ವಾಪಸ್ಸು ನೀಡುವುದಾಗಿ ಕಳೆದ ಎರಡು ವರ್ಷದಿಂದ ಸುಳ್ಳು ಹೇಳುತ್ತಾ ತಮ್ಮನ್ನು ಸಂಕಷ್ಟದಲ್ಲಿ ದೂಡಿದ್ದಾರೆ ಎಂದು 40 ವರ್ಷಗಳಿಂದ ನಲಗುಂಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಿರುವ ಅವರು ಆಕ್ರೋಶ ವ್ಯಕ್ತಪಡಿಸಿದರು.
ಚಿಂಚನಸೂರ್ ಹಣ ವಾಪಸ್ಸು ನೀಡದಿದ್ದರೆ ಇದೇ ಮಾ.12ರಂದು ಗುರುಮಠಕಲ್ ನ ತಹಸೀಲ್ದಾರ್ ಕಚೇರಿ ಮುಂದೆ ತಮ್ಮ ಕುಟುಂಬದ ಸದಸ್ಯರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಇಲ್ಲಿ ನ್ಯಾಯ ಸಿಗದಿದ್ದರೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಿವಾಸದ ಮುಂದೆ ಧರಣಿ ಕುಳಿತುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಒಂದು ಮನವಿ ಪತ್ರವನ್ನು ಯಾದಗಿರಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಕೊಡುವುದಾಗಿ ಮನವಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಒನ್ಇಂಡಿಯಾ ಕನ್ನಡ ಪ್ರತಿನಿಧಿಯೊಂದಿಗೆ ಮಾತನಾಡಿದ ವಿಜಯಪಾಲ ರೆಡ್ಡಿ ಅವರು, ಗುರುಮಠಕಲ್ ಕ್ಷೇತ್ರದ 25 ಸಾವಿರ ಜನರು ನನ್ನ ಜೊತೆಗಿದ್ದಾರೆ, ಅವರಿಗೆಲ್ಲ ಬಾಬು ಚಿಂಚನಸೂರ್ ಅವರು ಎಂಥವರೆಂದು ಚೆನ್ನಾಗಿ ಗೊತ್ತಿದೆ. ಬಾಬುರಾವ್ ಅವರಿಗೆ ಶಿಕ್ಷೆಯಾಗಲೇಬೇಕು. ನನ್ನ ಹೋರಾಟವನ್ನು ಗಾಂಧಿಗಿರಿಯ ಮುಖಾಂತರವೇ ಧರಣಿ ಕೂಡುವ ಮೂಲಕ ಮುಂದುವರಿಸುವುದಾಗಿ ಅವರು ತಿಳಿಸಿದರು.
ಇತ್ತೀಚೆಗೆ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತರ ಬಲೆಗೆ ಬಿದ್ದು ಆರೋಪ ಮುಕ್ತನಾಗಿದ್ದ ಶಾಸಕ ಬಾಬುರಾವ್ ಚಿಂಚನಸೂರ್ ಅವರಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಇದೀಗ ಮತ್ತೊಂದ್ದು ಕಂಟಕ ಎದುರಾಗಿದೆ. ಬಾಬುರಾವ್ ಚಿಂಚನಸೂರ್ ಅವರು ಮೊಬೈಲ್ ಕರೆಗೆ ಸಿಗುತ್ತಿಲ್ಲ. ಕರೆ ಮಾಡಿದರೆ ನಾಟ್ ರೀಚೆಬಲ್ ಸಂದೇಶ ಬರುತ್ತಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications