ಸಮೀಕ್ಷೆ ಫಲಿತಾಂಶ ಅವಾಸ್ತವ: ಕುಮಾರಸ್ವಾಮಿ ಕಿಡಿಕಿಡಿ
ಬೆಂಗಳೂರು, ಮಾರ್ಚ್ 6: ಖಾಸಗಿ ಚಾನೆಲ್ ಒಂದು ಪ್ರಸಾರ ಮಾಡಿರುವ ವಿಧಾನಸಭೆ ಚುನಾವಣಾ ಸಮೀಕ್ಷೆ ಫಲಿತಾಂಶ ಅವಾಸ್ತವದಿಂದ ಕೂಡಿದೆ. ಜೆಡಿಎಸ್ ಅದನ್ನು ತಿರುವುಮರುವು ಗೊಳಿಸುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪಣತೊಟ್ಟಿದ್ದಾರೆ.
ಸದಾಶಿವ ನಗರದಲ್ಲಿ ಮೇಖ್ರಿ ಸರ್ಕಲ್ ಸಮೀಪ ಜಾತ್ಯಾತೀತ ಜನತಾದಳ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಇಂದು ಚಾಲನೆ ನೀಡಿದ ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಕಡಿಮೆ ಸ್ಥಾನ ಗಳಿಸುತ್ತದೆ ಎಂದು ಬಿತ್ತರಿಸಿದ ಖಾಸಗಿ ಸುದ್ದಿವಾಹಿನಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಇದರಿಂದ ಜನರನ್ನು ತಪ್ಪು ದಾರಿಗೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಆದರೆ ಇಂತಹ ಅವಾಸ್ತವ, ತರ್ಕರಹಿತ ಸಮೀಕ್ಷೆಗಳು ತಪ್ಪು ಎಂಬುದನ್ನು ತಮ್ಮ ಜೆಡಿಎಸ್ ಪಕ್ಷ ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದರು.
ಜೆಡಿಎಸ್ ರಾಜ್ಯದ ಕೆಲ ಭಾಗಗಳಿಗಷ್ಟೇ ಸೀಮಿತವಾಗಿದೆ ಎಂಬ ನಂಬಿಕೆಯನ್ನು ದೂರ ಮಾಡುತ್ತೇವೆ. ಯಾವ ಭಾಗಗಳಲ್ಲಿ ಜೆಡಿಎಸ್ ತನ್ನ ಇರುವನ್ನು ಹೊಂದಿಲ್ಲವೋ ಆ ಭಾಗಗಳಲ್ಲಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳಲಿದೆ ಎಂದು ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ
ಬೆಂಗಳೂರಿನಲ್ಲಿ ಬುಧವಾರ ಜೆಡಿಎಸ್ ಪಕ್ಷದ ಮಾಧ್ಯಮ ಕೇಂದ್ರಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ