ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕೀಯ ನಿವೃತ್ತಿ ಪಡೆಯುತ್ತೇನೆ : ರೇಣುಕಾಚಾರ್ಯ

|
Google Oneindia Kannada News

M.P.Renukacharya
ಬೆಂಗಳೂರು, ಮಾ.8 : ಕೆಜೆಪಿ ಮುಖಂಡ ಧನಂಜಯ್ ಕುಮಾರ್ ತಮ್ಮ ಮೇಲೆ ಮಾಡುತ್ತಿರುವ ಆರೋಪಗಳನ್ನು ದಾಖಲೆ ಸಮೇತ ಸಾಬೀತು ಪಡಿಸಿದರೆ ಹತ್ತು ನಿಮಿಷದಲ್ಲಿ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದ ಕೆಜೆಪಿ ಮುಖಂಡ ಧನಂಜಯ್ ಕುಮಾರ್ ಬಿಜೆಪಿ ಸರ್ಕಾರ ಭಷ್ಟಾಚಾರದಲ್ಲಿ ಮುಳುಗಿದೆ. ಅಬಕಾರಿ ಸಚಿವ ರೇಣುಕಾಚಾರ್ಯ ವೈನ್ ಸ್ಟೋರ್ ಗಳನ್ನು ಸ್ನಾಕ್ ಬಾರ್ ಗಳಾಗಿ ಪರಿವರ್ತಿಸಲು ಅನುಮತಿ ನೀಡಲು 250 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ಧನಂಜಯ್ ಕುಮಾರ್ ಈ ಆರೋಪಕ್ಕೆ ತಿರುಗೇಟು ನೀಡಿರುವ ರೇಣುಕಾಚಾರ್ಯ, ಸಿಎಲ್-2 ವೈನ್ ಶಾಪ್ ಗಳನ್ನು ಸ್ನಾಕ್ ಬಾರ್ ಆಗಿ ಪರಿವರ್ತನೆ ಮಾಡುವಂತೆ ಮದ್ಯ ಮಾರಾಟಗಾರರ ಸಂಘ ಇಲಾಖೆಗೆ ಮನವಿ ಸಲ್ಲಿಸಿದೆ.

ಈ ಬಗ್ಗೆ ಅಧಿಕಾರಗಳ ಹಂತದಲ್ಲಿ ಸಮಲೋಚನೆ ನಡೆಯುತ್ತಿದೆ, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಆದ್ದರಿಂದ ಅವ್ಯವಹಾರ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಾರಾಯಿ ನಿಷೇಧದ ನಂತರ 7 ಸಾವಿರ ಅಂಗಡಿಗಳನ್ನು ಮುಚ್ಚಿದ್ದೇವೆ.

ಯಾವುದೇ ಹೊಸ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿಲ್ಲ. ಮಾತನಾಡುವ ಚಟವಿರುವ ಧನಂಜಯ್ ಕುಮಾರ್ ತಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ದಾಖಲೆ ಸಮೇತ ಸಾಬೀತು ಮಾಡಿದಲ್ಲಿ ಹತ್ತು ನಿಮಿಷದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ.

ಆರೋಪ ಸಾಬೀತಾಗದಿದ್ದರೆ ಧನಂಜಯ್ ಕುಮಾರ್ ನಿವೃತ್ತಿ ಪಡೆಯಬೇಕು ಎಂದು ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ಕೆಜೆಪಿ ಮತ್ತು ಬಿಜೆಪಿ ನಾಯಕರ ಕೆಸರೆರಚಾಟ ಬಹಿರಂಗವಾಗಿ ನಡೆಯುತ್ತಿದ್ದು, ವಿಧಾನಸಭೆ ಚುನಾವಣೆ ಹತ್ತಿರವಾದಂತೆ ಪರಸ್ಪರ ಆರೋಪಗಳು ಹೆಚ್ಚಾಗಲಿವೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Minister for Excise M.P.Renukacharya challenged to KJP leader Danjay kumar to prove his allegations with document. Danjay kumar alleged that Renukacharya get 250 core Vail for bar bar license renewal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X