ಬಸವನಗುಡಿ ಕ್ಷೇತ್ರದಲ್ಲಿ ಶಾಂತಲಾ ಭರ್ಜರಿ ಪ್ರಚಾರ
ಬೆಂಗಳೂರು, ಮಾ. 9 : ಮಾರ್ಚ್ 9ರಂದು ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಅಂಗವಾಗಿ ಬಸವನಗುಡಿ ಹಾಗೂ ಬೆಂಗಳೂರಿನ ಮತ್ತಿತರ ಕಡೆಗಿನ ಮಹಿಳೆಯರು ಸೇರಿ ಲೋಕಸತ್ತಾ ಪಕ್ಷದ ಬಸವನಗುಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಶಾಂತಲಾ ದಾಮ್ಲೆ ಜೊತೆ ಮಹಿಳಾ ಪಾದಯಾತ್ರೆಯನ್ನು ಕೈಗೊಂಡರು.
ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಪಾತ್ರದ ಮಹತ್ವದ ಬಗ್ಗೆ ಮಾತನಾಡುತ್ತಾ, ಮಹಿಳೆಯರ ರಕ್ಷಣೆಗೆ ಶಾಸನ ಮಾಡಲು ಮಹಿಳೆಯರೇ ಮುಂದೆ ಬಂದು ರಾಜಕೀಯವನ್ನು ಪ್ರವೇಶಿಸಬೇಕು. ನೈತಿಕ ರಾಜಕೀಯಕ್ಕಾಗಿ ಮಹಿಳೆಯರ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರೆಲ್ಲ ಬೆಂಬಲಿಸಬೇಕು ಎಂದು ಶಾಂತಲಾ ದಾಮ್ಲೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಪುರುಷರು ಕೂಡ ಬೆಂಬಲವನ್ನು ಸೂಚಿಸಲು 'ವಿ ಮೆನ್ ಫಾರ್ ವುಮೆನ್' (We-Men For Women) ಎಂಬ ಘೋಷಣೆಗಳನ್ನು ಕೂಗಿ ಗಮನ ಸೆಳೆದರು. ನೈತಿಕ ರಾಜಕಾರಣದ ಮಹತ್ವವನ್ನು ಸಾರುತ್ತಾ 50 ಮಹಿಳೆಯರು ಎನ್.ಆರ್.ಕಾಲೋನಿ ಬಸ್ ನಿಲ್ದಾಣದಿಂದ, ಬಿ.ಎಂ.ಎಸ್. ಮಹಿಳಾ ವಿದ್ಯಾಲಯದವರೆಗೆ ಪಾದಯಾತ್ರೆಯನ್ನು ನಡೆಸಿದರು.

ನಾಗರಿಕ ಹಕ್ಕು ಕಾರ್ಯಕರ್ತೆ ಮೀರಾ ಮುಕುಂದ್ ಮತ್ತು ಚುನಾವಣೆ ಪ್ರಚಾರ ನೇತೃತ್ವ ವಹಿಸಿರುವ ರೇಖಾ ಮಲ್ಲಂಪಲ್ಲಿ ಅವರು ಡಿವಿ ಗುಂಡಪ್ಪ ರಸ್ತೆಯಲ್ಲಿ ಪ್ರತಿ ಅಂಗಡಿಗೂ ಭೇಟಿ ನೀಡಿ ಭ್ರಷ್ಟಾಚಾರ ವಿರೋಧಿಸುವ ಅಭ್ಯರ್ಥಿಗೆ ಮುಂದಿನ ಚುನಾವಣೆಯಲ್ಲಿ ಮತಹಾಕಿ ಬೆಂಬಲ ನೀಡಬೇಕೆಂದು ಕೋರಿದರು.
ಲೋಕ ಸತ್ತಾ ಪಕ್ಷದ ನಡಿಗೆ ನೈತಿಕ ರಾಜಕೀಯದ ಕಡೆಗೆ, ಸಾಕು ಸಾಕು ಭ್ರಷ್ಟಾಚಾರ ಸಾಕು ಬೇಕು ಬೇಕು ಶಾಂತಲಾ ಬೇಕು, ಸಬಲ ನಾರಿ ಸಂಮೃದ್ಧ ನಾಡು ಎಂಬಿತ್ಯಾದಿ ಘೋಷಣೆಗಳು ಪಾದಯಾತ್ರೆಯುದ್ದಕ್ಕೂ ಮೊಳಗುತ್ತಿದ್ದವು. ಮಹಿಳೆಯರೇ ಮಹಿಳೆಯರಿಗೆ ಬೆಂಬಲ ಸೂಚಿಸುವ ಮುಖಾಂತರ ವಿಶ್ವ ಮಹಿಳಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications