ಬಳ್ಳಾರಿ ಮಹಾನಗರಪಾಲಿಕೆ ಕೈವಶ

ಜಿಲ್ಲೆಯಲ್ಲಿ ಶೇ 65 ರಿಂದ 70 ರಷ್ಟು ಮತದಾನವಾಗಿತ್ತು. ಬಿಜೆಪಿ ತೊರೆದು ನೂತನ ಪಕ್ಷ ಸ್ಥಾಪಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಇದು ಮೊದಲ ಚುನಾವಣೆಯಾಗಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ಬಿಎಸ್ಆರ್ ಪಕ್ಷದ ಅಭ್ಯರ್ಥಿಗಳಿಗೆ ಏಕರೂಪವಾದ ಚಿಹ್ನೆ ದೊರೆಯದೆ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಬಿಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿ ಬಳ್ಳಾರಿ ಮಹಾನಗರ ಪಾಲಿಕೆಯನ್ನು ಬಿಂಬಿಸಲಾಗಿತ್ತು. ಆದರೆ, ಲೆಕ್ಕಾಚಾರಗಳು ಸುಳ್ಳಾಗಿದ್ದು, ಬಿಜೆಪಿ ತನ್ನ ಖಾತೆಯನ್ನೆ ತೆರೆಯಲಿಲ್ಲ. ಬಿಎಸ್ಆರ್ ಕಾಂಗ್ರೆಸ್ ಗೆ ಭಾರೀ ಮುಖಭಂಗ ಉಂಟುಮಾಡಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಮೊದಲನೆ ಸುತ್ತಿನ ಮತ ಎಣಿಕೆಯಿಂದ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. ಕೊನೆಯದಾಗಿ ಕಾಂಗ್ರೆಸ್ 26 ಸ್ಥಾನಗಳನ್ನು ಗೆಲ್ಲುವ ಮೂಲಕ ಮಹಾನಗರ ಪಾಲಿಕೆ ಅಧಿಕಾರ ಪಡೆದಿದೆ. ಬಳ್ಳಾರಿಯಲ್ಲಿ ಕೇವಲ 1 ಸ್ಥಾನದಲ್ಲೂ ಬಿಜೆಪಿ ಜಯಗಳಿಸಿಲ್ಲ ಇದರಿಂದ, ಬಿಜೆಪಿ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿರುವ ಆನಂದ್ ಸಿಂಗ್ ಅವರಿಗೆ ತೀವ್ರ ಹಿನ್ನೆಡೆ ಉಂಟಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ಲೆಕ್ಕಾಚಾರ ಸುಳ್ಳಾಗಿ ಬಿ.ಶ್ರೀರಾಮುಲು ಅವರಿಗೆ ತವರಿನಲ್ಲೇ ಭಾರೀ ಮುಖಭಂಗ ಉಂಟಾಗಿದೆ.
ಘೋಷಣೆಯಾದ ಒಟ್ಟಾರೆ ಫಲಿತಾಂಶ
ಕಾಂಗ್ರೆಸ್ - 26
ಬಿಜೆಪಿ-0
ಬಿಎಸ್ಆರ್ ಕಾಂಗ್ರೆಸ್- 6
ಜೆಡಿಎಸ್-1
ಪಕ್ಷೇತರ-2
ಮಂಗಳಮುಖಿ ಆಯ್ಕೆ : ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಂಗಳಮುಖಿಯೊಬ್ಬಳು ಸ್ಪರ್ಧಿಸಿ ಜಯಗಳಿಸಿದ್ದಾಳೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪರ್ ವಿನ್ ಬಾನು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾಳೆ. ಕಾಂಗ್ರೆಸ್ ಪಾಲಿಕೆಯಲ್ಲೂ ಜಯಭೇರಿ ಬಾರಿಸಿದ್ದು, ಬಿಎಸ್ಆರ್ ಕಾಂಗ್ರೆಸ್ ಗೆ ಭಾರಿ ಹಿನ್ನೆಡೆಯಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications