ಮಲ್ಲೇಶ್ವರಂ ಮಾರುಕಟ್ಟೆ ಸ್ಥಳಾಂತರಕ್ಕೆ ತಡೆಯಾಜ್ಞೆ

ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಮಾರುಕಟ್ಟೆಯ ವ್ಯಾಪಾರಿಗಳಾದ ಶಿವಣ್ಣ ಮತ್ತಿತರರು, ಮಾರುಕಟ್ಟೆಯಲ್ಲಿ ಒಟ್ಟು 247 ಅಂಗಡಿಗಳಿವೆ. 32 ಅಂಗಡಿಗಳಿಗೆ ಮಾತ್ರ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ ಎರಡು ದಿನದಲ್ಲಿ ಮಳಿಗೆ ತೆರವುಗೊಳಿಸುವಂತೆ ಬಿಬಿಎಂಪಿ ನೋಟಿಸ್ ನೀಡಿದೆ.
ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮಾಲ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಬೇಕು ಎಂದು ಬಿಬಿಎಂಪಿ ಆತುರದ ನಿರ್ಧಾರ ಕೈಗೊಳ್ಳುತ್ತಿದೆ. ಸಂಪಿಗೆ ರಸ್ತೆಯಲ್ಲಿ ಈಗಾಗಲೇ ಅಧಿಕ ವಾಹನ ದಟ್ಟಣೆ ಇದ್ದು, ಇಲ್ಲಿ ಮಾಲ್ ನಿರ್ಮಿಸಿದರೆ ವಾಹನ ಸವಾರರಿಗೆ ತೊಂದರೆ ಆಗಲಿದೆ. ಮಾರುಕಟ್ಟೆ ಸ್ಥಳಾಂತರಕ್ಕೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೋಪಣ್ಣ ಅವರ ಏಕಸದಸ್ಯ ಪೀಠ, ಮಾರುಕಟ್ಟೆ ತೆರೆವುಗೊಳಿಸುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದಿಂದ ಬಿಬಿಎಂಪಿಗೆ ತೀವ್ರ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೆ ಅಂಗಡಿಗಳನ್ನು ತೆರವುಗೊಳಿಸಲು ತೆರಳಿದ್ದ ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಆಕ್ರೋಶಕ್ಕೆ ತುತ್ತಾಗಿ ವಾಪಾಸ್ಸಾಗಿದ್ದರು.
ಸಂಪಿಗೆ ರಸ್ತೆಯಲ್ಲಿ ಮಾಲ್ ನಿರ್ಮಾಣ ಸಾಧ್ಯವಿಲ್ಲ ಎಂಬ ವ್ಯಾಪಾರಸ್ಥರ ಮನವಿಗೆ ಸ್ಪಂದಿಸಿರುವ ನ್ಯಾಯಾಲಯ, ಮಾಲ್ ನಿರ್ಮಾಣ ಯೋಜನೆ ಕುರಿತು ವಿವರಣೆ ನೀಡುವಂತೆ ಸೂಚಿಸಿ ಪ್ರತಿವಾದಿಗಳಾದ ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ, ಬಿಬಿಎಂಪಿ, ಬಿಡಿಎಗೆ ನೋಟಿಸ್ ಜಾರಿಗೊಳಿಸಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications