ಜಾರ್ಗ್ ಮಾರಿಯೊ ಬೆರ್ಗೋಗ್ಲಿಯೋ 266ನೇ ಪೋಪ್

13ನೇ ಶತಮಾನದಲ್ಲಿ ಬಡತನದಲ್ಲಿಯೇ ಬದುಕಿದ ಇಟಲಿಯ ಧರ್ಮಗುರು ಫ್ರಾನ್ಸಿಸ್ ಅವರ ಹೆಸರನ್ನು ಜಾರ್ಗ್ ಅವರು ಇಟ್ಟುಕೊಂಡಿದ್ದಾರೆ. ಪೋಪ್ ಫ್ರಾನ್ಸಿಸ್ ಅವರು ಮೊದಲ ಅಮೆರಿಕನ್ ಧರ್ಮಗುರುವಾಗಿದ್ದು, ಒಂದು ಶತಮಾನದ ಇತಿಹಾಸ ಗಮನಿಸಿದರೆ ಯುರೋಪ್ನಿಂದ ಹೊರಗಿರುವ ಮೊದಲ ಧರ್ಮಗುರುವಾಗಿದ್ದಾರೆ.
ಆಯ್ಕೆಯಾಗುತ್ತಿದ್ದಂತೆ ಸೇಂಟ್ ಪೀಟರ್ಸ್ ವೃತ್ತದಲ್ಲಿ ನೆರೆದಿದ್ದ ಸಹಸ್ರಾರು ಕ್ರೈಸ್ತ ಧರ್ಮೀಯರತ್ತ ಕೈಬೀಸಿ ಅಭಿನಂದನೆಯನ್ನು ಪೋಪ್ ಫ್ರಾನ್ಸಿಸ್ ಸ್ವೀಕರಿಸಿದರು. ಜನರು ಕೂಡ ಕಿವಿಗಡಚಿಕ್ಕುವ ಚಪ್ಪಾಳೆ ಹರ್ಘೋದ್ಗಾರಗಳ ನಡುವೆ ಒಬ್ಬರಿಗೊಬ್ಬರು ಅಪ್ಪಿಕೊಂಡು, ಮುತ್ತು ನೀಡುವ ಮುಖಾಂತರ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪೋಪ್ ಆಯ್ಕೆಯ ದ್ಯೋತಕವಾಗಿ ಸಿಸ್ಟೈನ್ ಚಾಪೆಲ್ನ ಚಿಮಣಿಯ ಮೂಲಗ ಬಿಳಿಬಣ್ಣದ ಹೊಗೆಯನ್ನು ಹೊರಬಿಡಲಾಯಿತು.
ದಶಕಗಳ ಕಾಲ ಧರ್ಮಗುರುವಾಗಿ ಆಡಳಿತ ನಡೆಸುವ ವ್ಯಕ್ತಿಯ ಬದಲು ಹೆಚ್ಚು ಅನುಭವವಿರುವ, ಜನಪ್ರಿಯವಾಗಿರುವ, ವಿನಯ ಸಂಪನ್ನರಾಗಿರುವ, ಜನರನ್ನು ಕ್ರೈಸ್ತ ಧರ್ಮದೆಡೆಗೆ ಸೆಳೆಯುವ ಪೋಪ್ರನ್ನು ಆರಿಸುವ ಉದ್ದೇಶದಿಂದ ತ್ವರಿತಗತಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಪೋಪ್ ಆಗಿ ಆಯ್ಕೆಯಾದ ಮೇಲೆ ತಮ್ಮ ಹರ್ಘವನ್ನು ಹಿಂದಿನ ಪೋಪ್ ಬೆನೆಡಿಕ್ಟ್ ಅವರಿಗೆ ಕರೆ ಮಾಡುವ ಮುಖಾಂತರ ಪೋಪ್ ಫ್ರಾನ್ಸಿಸ್ ಹಂಚಿಕೊಂಡರು. "ಸಹೋದರರೆ ಮತ್ತು ಸಹೋದರಿಯರೆ, ಗುಡ್ ಈವ್ನಿಂಗ್" ಎಂದು ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮಗೆ ಮಾತ್ರವಲ್ಲ ಹಿಂದಿನ ಪೋಪ್ ಬೆನೆಡಿಕ್ಟ್ ಅವರಿಗಾಗಿ ಪ್ರಾರ್ಥಿಸಿ ಎಂದು ಜನರನ್ನು ಕೋರಿದರು.
ಸಲಿಂಗಿಗಳ ಮದುವೆ, ಗರ್ಭಪಾತ ಮತ್ತು ಗರ್ಭನಿರೋಧಕ ಬಳಕೆಯನ್ನು ತಾವು ವಿರೋಧಿಸುವುದಾಗಿ ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ. ಸಲಿಂಗಿಗಳ ಮದುವೆ ದೈವೇಚ್ಛೆಯ ಮೇಲೆ ನಡೆಸುವ ವಿಧ್ವಂಸಕ ಕೃತ್ಯ ಎಂದು ಅವರು ಬಣ್ಣಿಸಿದ್ದಾರೆ. ಅವರು ಪೋಪ್ ಆಗುತ್ತಿದ್ದಂತೆ ದಶಕಗಳ ಹಿಂದೆ ಅವರ ವಿರುದ್ಧ ಮಾಡಲಾಗಿದ್ದ ಕೆಲ ಆರೋಪಗಳು ಜೀವ ಪಡೆದುಕೊಂಡಿವೆ. ಅವರ ಮೇಲೆ ಧರ್ಮಗುರುಗಳನ್ನು ಅಪಹರಿಸಿ, ಅವರ ಹತ್ಯೆಗೆ ಸಂಚು ಹೂಡಿದ ಆರೋಪಗಳನ್ನು ಹೊರಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications