ಸಿಇಟಿ ಇಲ್ಲದೆ ಬಿಎಸ್ಸಿಯಿಂದ ಇಂಜಿನಿಯರಿಂಗ್ ಸೇರಿ

ಎಐಸಿಟಿಇ ನಿರ್ದೇಶನದಂತೆ ರಾಜ್ಯ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಬಿಎಸ್ ಸಿ ಲ್ಯಾಟರಲ್ ಪ್ರವೇಶಕ್ಕೆ ಸಂಪುಟದ ಒಪ್ಪಿಗೆ ಸಿಕ್ಕಿದೆ. ಲ್ಯಾಟರಲ್ ಪ್ರವೇಶಕ್ಕೆ ಒಪ್ಪಿಗೆ ಸಿಕ್ಕಿರುವುದರಿಂದ ರಾಜ್ಯದ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 5 ಸಾವಿರಕ್ಕೂ ಅಧಿಕ ಹೆಚ್ಚುವರಿ ಸೀಟುಗಳು ಲಭ್ಯವಾಗಲಿದೆ. ಲ್ಯಾಟರಲ್ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಅಗತ್ಯ ಇರುವುದಿಲ್ಲ.
ಸೀಟು ಹಂಚಿಕೆ ಹಾಗೂ ಪ್ರವೇಶ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರ ಮಾರ್ಚ್ ತಿಂಗಳಿನ ಅಂತ್ಯದೊಳಗೆ ಅಧಿಸೂಚನೆ ಹೊರಡಿಸಲಿದೆ. ಹೊಸ ನಿಯಮಗಳು ಜಾರಿಗೊಂಡ ನಂತರ ಬಿಎಸ್ಸಿ ವಿದ್ಯಾರ್ಥಿಗಳು ಲ್ಯಾಟರಲ್ ಪ್ರವೇಶಕ್ಕೆ ಸಿದ್ದರಾಗಬಹುದು ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.
ಯಾರು ಅರ್ಹರು?: ಡಿಪ್ಲೋಮಾ ವಿದ್ಯಾರ್ಥಿಗಳ ಲ್ಯಾಟರಲ್ ಪ್ರವೇಶ(ನೇರವಾಗಿ ಬಿಇ ಮೂರನೇ ಸೆಮಿಸ್ಟರ್) ಪ್ರಕ್ರಿಯೆ ಮುಗಿದ ಮೇಲೆ ಉಳಿದ ಸೀಟುಗಳನ್ನು ಬಿಎಸ್ಸಿ ಪದವೀಧ ಅಭ್ಯರ್ಥಿಗಳಿಗೆ ಹಂಚಲಾಗುತ್ತೆ.
* 2013-14ನೇ ಶೈಕ್ಷಣಿಕ ವರ್ಷದಿಂದಲೇ ಬಿಎಸ್ಸಿ ಲ್ಯಾಟರಲ್ ಪ್ರವೇಶ ಜಾರಿಗೆ ಬರಲಿದೆ.
* ವಿಜ್ಞಾನ ಪದವಿ ಓದುತ್ತಿರುವ ವಿದ್ಯಾರ್ಥಿ ಪಿಯು ಅಥವಾ ಕ್ಲಾಸ್ 12ನಲ್ಲಿ ಗಣಿತ ಪಠ್ಯ ವಿಷಯ ಓದಿರಲೇಬೇಕು
* ಬಿಎಸ್ಸಿಯಿಂದ ಲ್ಯಾಟರಲ್ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಸಿಇಟಿ ಬರೆಯುವ ಅಗತ್ಯ ಇಲ್ಲ.
* ಬಿಎಸ್ಸಿಯಿಂದ ಸೇರಿದವರು ಲಿ ಇಂಜಿನಿಯರಿಂಗ್ ಗ್ರಾಫಿಕ್ಸ್ ಅಥವಾ ಇಂಜಿನಿಯರಿಂಗ್ ಡ್ರಾಯಿಂಗ್ ಹಾಗೂ ಇಂಜಿನಿಯರಿಂಗ್ ಮೆಕ್ಯಾನಿಕ್ಸ್ ವಿಷಯದಲ್ಲಿ ಪಾಸಾಗಲೇಬೇಕು.
* ವಿಜ್ಞಾನ ಪದವಿ ವಿದ್ಯಾರ್ಥಿ ಶೇ 45 ಅಂಕ ಗಳಿಸಿದ್ದರೆ ಲ್ಯಾಟರಲ್ ಪ್ರವೇಶ ಪಡೆಯಲು ಸಾಧ್ಯ.
* 2011ರಲ್ಲಿ All India Council for Technical Education (AICTE) ಜಾರಿಗೆ ತಂದ ಈ ನಿಯಮ ಕರ್ನಾಟಕದಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗಿತ್ತು. ಈಗ ಬಿಎಸ್ಸಿಗೂ ಅನ್ವಯವಾಗಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications