Get Updates
Get notified of breaking news, exclusive insights, and must-see stories!

ಬಿಎಸ್ವೈ ಇನ್ನು ವಿಧಾನಸೌಧಕ್ಕೆ ಬರೋಲ್ಲ ಬಿಡಿ: ಈಶ್ವರಪ್ಪ

Yeddyurappa wont come back to Vidhan Soudha as Chief Minister- KS Eshwarappa
ಶಿವಮೊಗ್ಗ, ಮಾ. 14: ಬಿಜೆಪಿಯನ್ನು ಸ್ಥಳೀಯವಾಗಿ ಸೋಲಿಸಿ ಯುದ್ಧ ಗೆದ್ದ ಉತ್ಸಾಹದಲ್ಲಿ ಮಾತನಾಡುತ್ತಿರುವ ಕೆಜೆಪಿ ನಾಯಕ ಯಡಿಯೂರಪ್ಪಗೆ ತವರಿನ ಮಾಜಿ ಗೆಳೆಯ, ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನಗರ ಸಂಸ್ಥೆ ಚುನಾವಣೆಯಲ್ಲಿ ಕೆಜೆಪಿ ಎಲ್ಲೆಡೆ ಖಾತೆ ತೆರೆಯದಿದ್ದರೂ ಆ ಪಕ್ಷದ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ಹೆಸರು ಹೇಳದೆಯೇ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಕೆಜೆಪಿಯ ಶಕ್ತಿ ಏನೆಂಬುದು ಆ ಪಕ್ಷದ ನಾಯಕರ ಅರಿವಿಗೆ ಬಂದಿದೆ. ನನ್ನಿಂದಲೇ ಬಿಜೆಪಿ ಎನ್ನುವವರು ತಮ್ಮ ಕೆಜೆಪಿ ಸ್ಥಿತಿ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಕೆಜೆಪಿ ನಾಯಕರು ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ವಿಧಾನಸೌಧದ ಮೂರನೇ ಮಹಡಿಗೆ ಹೋಗುವುದು ನಿಶ್ಚಿತ ಎಂಬ ಹೇಳಿಕೆಯನ್ನು ನೀಡುತ್ತಿದ್ದರು. ಆದರೆ ಇದೀಗ ಆ ಪಕ್ಷದ ಶಕ್ತಿ ಏನೆಂಬುದು ಗೊತ್ತಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ವಿಧಾನಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತೇವೆ. ನಮ್ಮಲ್ಲಿ ಸಂಘಟನೆ ಇರುವುದರಿಂದ ಗೆಲ್ಲಲು ಕಾರ್ಯತಂತ್ರ ರೂಪಿಸುತ್ತೇವೆ. ಮಾ. 15, 16 ರಂದು ಬಿಜೆಪಿ ಸಂಸದರು, ಶಾಸಕರ ಹಾಗೂ ಜಿಲ್ಲಾ ಪ್ರಮುಖರ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ಅಲ್ಲಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯ ಹಾಗೂ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಕಳೆದ 2007ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ 1140 ಸ್ಥಾನ ಪಡೆದಿದ್ದರೆ, ಜೆಡಿಎಸ್‌1500 ಹಾಗೂ ಕಾಂಗ್ರೆಸ್‌ 1600 ಸ್ಥಾನ ಗಳಿಸಿತ್ತು. ಆದರೆ 2008ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಪಡೆದಿದೆ. ಅದೇ ರೀತಿ ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೂ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ವಿಶ್ಲೇಷಿಸಿದ್ದಾರೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+