ಕೆಜೆಪಿ ಸೇರಲು ಸಿದ್ದ ಆದರೆ ಶೋಭಾಗೆ ಬ್ರೇಕ್ ಹಾಕಿ

ಏನಪ್ಪಾ ಅಂಥಾ ಕಂಡೀಷನ್ಸು, ಏನು ಮುಂದಿನ ಚುನಾವಣೆಗೆ ಟಿಕೆಟ್ ಕೇಳಿದ್ದಾರಾ? ಅಥವಾ ದುಡ್ಡು ಕಾಸು ಏನಾದರೂ ಕೇಳಿದ್ದಾರಾ ಅಂತಂದರೆ... ಅಂಥಾದ್ದೇನೂ ಇಲ್ಲ. ನಮ್ದು ಒಂದೇ ಕಂಡೀಷನ್ನು. ಆಯಮ್ಮ ಶೋಭಾರ ಆರ್ಭಟ/ಸರ್ವಾಧಿಕಾರವನ್ನು ವಸಿ ತಡೆಗಟ್ಟಿ ಎಂದು ಪಿಸುಗುಟ್ಟಿದ್ದಾರೆ ಆ ಶಾಸಕ ಮಿತ್ರರು.
ಹೌದು, ಮುಖ್ಯಮಂತ್ರಿ ಯಡಿಯೂರಪ್ಪ ಪರಮಾಪ್ತೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಈ ಗುಲ್ಲು ಎದ್ದಿರುವುದು ಇದೇ ಮೊದಲಲ್ಲ. ಅನೇಕಾನೇಕ ಯಡಿಯೂರಪ್ಪ ನಿಷ್ಠಾವಂತ ಹಿರಿಯರೇ ಶೋಭಾ ಬಗ್ಗೆ ವರಾತ ತೆಗೆದು, ಮುಂದೆ ಶೋಭಾರನ್ನು ಸಿಎಂ ಮಾಡಿಬಿಡ್ತಾರೆ ಎಂದು ಅಕ್ಷರಶಃ ಭಯಪಟ್ಟು ಕೆಜೆಪಿ ಸಹವಾಸ ಬೇಡ ಎಂದಿದ್ದರು.
ಮುಂದೆ ಚಾಮರಾಜನಗರ, ಮೈಸೂರು, ಮಂಡ್ಯ ಭಾಗಗಳಲ್ಲೂ ಶೋಭಾ ತಮ್ಮ 'ಶಕ್ತಿ' ಪ್ರದರ್ಶನಕ್ಕೆ ಇಟ್ಟಾಗ ಸಿದ್ಲಿಂಗು ಸೇರಿದಂತೆ ಅನೇಕ ಹಿರಿಯರು ಸಿಡಿದೆದ್ದಿದ್ದರು. ತಕ್ಷಣ ಓಡೋಡಿ ಹೋದ ಯಡಿಯೂರಪ್ಪ ಅವರನ್ನೆಲ್ಲ ಸಮಧಾನಪಡಿಸಿದ್ದರು.
ಆದರೂ ಶೋಭಾ ಆರ್ಭಟ ಮುಂದುವರಿದಿದೆ ಎಂದು ಈಗ ಮತ್ತೊಂದಷ್ಟು ಮಂದಿ ಕೆಜೆಪಿಯ ಹಿರಿಯಣ್ಣ ಸಿಎಂ ಉದಾಸಿ ಮುಂದೆ ಅಲವತ್ತುಕೊಂಡಿದ್ದಾರೆ.
ತಮ್ಮ ಪಟ್ಟ ಶಿಷ್ಯರೇ ಪಕ್ಷ ಸೇರಲು ಮುಂದಾಗುತ್ತಿಲ್ಲ ಎಂದು ಯಡಿಯೂರಪ್ಪ ಕೈಚೆಲ್ಲಿ ಕುಳಿತಿದ್ದಾಗ ಆ ಪೈಕಿ ಕೆಲವರು ಕೊನೆಯ ಹಂತದಲ್ಲಿ ಮತ್ತೆ ಯಡಿಯೂರಪ್ಪ ಅವರತ್ತ ಒಲವು ತೋರಿ, ಉದಾಸಿ ಮಧ್ಯಸ್ಥಿಕೆಯಲ್ಲಿ ಮಾತುಕತೆಯಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರದೆಲ್ಲಾ ಅದೊಂದೇ ಕಂಡೀಷನ್ನು, ಶೋಭಾರನ್ನು ನಿಯಂತ್ರಿಸಿ ಎಂಬುದು.
ಕಳೆದೈದು ವರ್ಷಗಳಿಂದ ಯಡಿಯೂರಪ್ಪ ಜತೆಗೇ ಬಲವಾಗಿ ಗುರುತಿಸಿಕೊಂಡಿದ್ದು, ಕೆಜೆಪಿ ಸ್ಥಾಪನೆಯ ಹಂತದಲ್ಲಿ ಹಿಂದೆ ಸರಿದಿದ್ದ ಆ ಸಚಿವ-ಶಾಸಕರು ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದು, ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ನಂತರ ತಮ್ಮ ಪಕ್ಷ ನಿಷ್ಠೆಯನ್ನು ಬದಲಾಯಿಸುವ ಸಂಭವ ದಟ್ಟವಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ಉಮೇಶ್ ಕತ್ತಿ ಅವರು ಗುರುವಾರ ತಡರಾತ್ರಿವರೆಗೂ ಕೆಜೆಪಿಯ ಹಿರಿಯಣ್ಣ ಉದಾಸಿ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಇದೆಲ್ಲದರ ಜತೆಗೆ ಯಡಿಯೂರಪ್ಪ ಇಲ್ಲದ ಬಿಜೆಪಿಯಲ್ಲಿ ಮುಂದುವರಿಯುವುದು ಅವರಿಗೂ ಸುಲಭವಾಗಿ ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಸಂಘ ಪರಿವಾರದ ಮೂಲದಿಂದ ಬಂದಿರದ ಮುಖಂಡರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನಮಾನ ಸಿಗುವುದೂ ಕಷ್ಟವಾಗಲಿದೆ. ಅದಕ್ಕಿಂತ ಹೆಚ್ಚಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವೂ ಮಾಯವಾಗಿದೆ. ಇಂಥ ಸಂದರ್ಭದಲ್ಲಿ ಬಿಜೆಪಿಯಲ್ಲೇ ಮುಂದುವರೆಯುವುದರಿಂದ ಆಗುವ ರಾಜಕೀಯ ಲಾಭವಾದರೂ ಏನು ಎಂಬ ಪ್ರಶ್ನೆ ಈ ಸಚಿವ-ಶಾಸಕರನ್ನು ಕಾಡುತ್ತಿದೆ ಎನ್ನಲಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications