ರಾಜ್ಯಸಭೆಯಲ್ಲಿ ಕ್ರಿಕೆಟ್ ದೇವರ ಕಂಡು ನಕ್ಕರು

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವಾಡುತ್ತಿರುವ ಮಾಸ್ಟ ಬ್ಲಾಸ್ಟರ್ ಸಚಿನ್ ಅವರಿಗೆ ಸಂಸತ್ತಿನ ಬಜೆಟ್ ಅಧಿವೇಶನ 2013 ರಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಅಧಿವೇಶನಕ್ಕೆ ಗೈರು ಹಾಜರಾಗುವ ಬಗ್ಗೆ ಮಾಹಿತಿ ನೀಡಿದ್ದ ಸಚಿನ್ ಅವರಿಗೆ ಫೆ 21 ರಿಂದ ಮಾ.7 ರ ತನಕ ರಜೆ ಮಂಜೂರಾಗಿತ್ತು.
ಆದರೆ, ರಾಜ್ಯಸಭೆಗೆ ನಾಮಾಂಕಿತ ಸದಸ್ಯರಾಗಿರುವ ಸಚಿನ್ ಅವರು ನಾಮಕಾವಸ್ತೆ ಸದಸ್ಯರಾಗಿದ್ದಾರೆ ಎಂದು ಆಡಿಕೊಂಡು ಇತರೆ ಸದಸ್ಯರು ನಗಾಡಿದ್ದಾರೆ. ಉಪ ಸಭಾಪತಿ ಪಿಜೆ ಕುರಿಯನ್ ಅವರು ಶುಕ್ರವಾರ(ಮಾ.15) ಸದನದ ಮುಂದೆ ಸಚಿನ್ ಅವರ ಗೈರು ಹಾಜರಿಯ ಬಗ್ಗೆ ಪ್ರಸ್ತಾಪಿಸುತ್ತಾ ರಜೆ ವಿಸ್ತರಣೆಗೆ ತಿಳಿಸಿದರು.
ಇದಕ್ಕೆ ಪ್ರತಿಯಾಗಿ ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರವಾಲ್ ಅವರು ಮಾತನಾಡಿ' ಅವರಿಬ್ಬರು ಸಂಸತ್ತಿನಲ್ಲೇ ಕಾಣಿಸಿಕೊಳ್ಳುವುದೇ ಅಪರೂಪ, ಏಕೆ ನೀವು ಅವರಿಬ್ಬರಿಗೆ ಶಾಶ್ವತವಾಗಿ ರಜೆ ನೀಡಬಾರದು' ಎಂದರು. ಸದನದಲ್ಲಿ ಎಲ್ಲೆಡೆ ನಗೆ ಅಲೆ ತೇಲಿ ಬಂದಿತು. ಹಿಂದಿ ಚಿತ್ರರಂಗದ ಹಿರಿಯ ನಟಿ ರೇಖಾ ಅವರ ಮೇಲೆ ಈ ರೀತಿ ಸಂಸದರು ಜೋಕ್ ಕಟ್ ಮಾಡಿದ್ದಾರೆ.
ರಾಜ್ಯಸಭೆಗೆ ತೆಂಡೂಲ್ಕರ್ ಹಾಗೂ ರೇಖಾ ಅವರು ನಾಮಾಂಕಿತ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೂ ಕಿರಿಕಿರಿ ಅನುಭವಿಸುತ್ತಲೇ ಬಂದಿದ್ದಾರೆ. ಸಚಿನ್ ಹಾಗೂ ರೇಖಾ ಅವರು ಕಾರಣಾಂತರದಿಂದ ಸರಿಯಾಗಿ ರಾಜ್ಯಸಭೆ ಅಧಿವೇಶನಕ್ಕೆ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
ಕಳೆದ ಏಪ್ರಿಲ್ 26 ರಂದು ಸಚಿನ್ ತೆಂಡೂಲ್ಕರ್ ಹಾಗೂ ರೇಖಾ ಅವರನ್ನು ರಾಜ್ಯಸಭೆಗೆ ನಾಮಾಂಕಿತಗೊಳಿಸಲಾಯಿತು. 39 ವರ್ಷದ ಕ್ರಿಕೆಟರ್ ಅವರು ಜೂನ್.4 ರಂದು ರಾಜ್ಯಸಭೆ ಸಭಾಪತಿ ಹಮೀದ್ ಅನ್ಸಾರಿ ಅವರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆಗ ಸಂಸತ್ತಿನ ಅಧಿವೇಶನ ಜಾರಿಯಲ್ಲಿರಲಿಲ್ಲ.
ಸಚಿನ್ ವಿರುದ್ಧ ಪ್ರಕರಣ: ಮಾ. 2010ರಲ್ಲಿ ಜಮೈಕಾದಲ್ಲಿ ನಡೆದ ಔತಣಕೂಟದಲ್ಲಿ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿ ಮೇಲೂರಿನ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ನಲ್ಲಿ ಈ ಮೊದಲೆ ತೆಂಡೂಲ್ಕರ್ ವಿರುದ್ಧ ಕೇಸು ದಾಖಲಾಗಿತ್ತು, ಪ್ರಕರಣದ ತೀರ್ಪು ಇನ್ನೂ ಬಂದಿಲ್ಲ ಹೀಗಾಗಿ ರಾಜ್ಯಸಭೆ ಸದಸ್ಯರಾಗಲು ಅರ್ಹರಲ್ಲ ಎಂದು ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಕರಣ ನಡೆದಿತ್ತು.
ಇದೇ ರೀತಿ ಸಚಿನ್ ರಾಜ್ಯಸಭೆ ನಾಮಾಂಕಣವನ್ನು ರದ್ದುಗೊಳಿಸಬೇಕು ಎಂದು ಲಕ್ನೋದ ವಕೀಲ ಅಶೋಕ್ ಪಾಂಡೆ ಪ್ರಶ್ನಿಸಿದ್ದರು. ಸಚಿನ್ ರಾಜ್ಯಸಭೆಗೆ ಆಯ್ಕೆ ಮಾಡಲು ಕಾನೂನಿನ ತೊಡಕು ಎದುರಾಗಲಿದೆ. ಸಂವಿಧಾನದ ಪರಿಚ್ಛೇದ 80(3)ದ ಉಲ್ಲಂಘನೆ ಮಾಡಬೇಕಾಗುತ್ತದೆ ಎಂದು ವಾದಿಸಿದ್ದರು. ಆದರೆ, ಎಲ್ಲಾ ಕಾನೂನು ತೊಡಕುಗಳು ನಿವಾರಣೆಯಾಗಿ ಸಚಿನ್ ರಾಜ್ಯಸಭೆ ಪ್ರವೇಶಿಸಿದ್ದರು.
ಸಂವಿಧಾನದ ಪರಿಚ್ಛೇದ 80(3) ಸಾಹಿತ್ಯ, ಕಲೆ, ವಿಜ್ಞಾನ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಬೇಕಾಗುತ್ತದೆ. ರಾಷ್ಟ್ರಪತಿಗಳು ಸುಮಾರು 12 ಜನರನ್ನು ಈ ರೀತಿ ಆರಿಸಿ ಮೇಲ್ಮನೆಗೆ ಕಳಿಸಬಹುದಾಗಿದೆ. ಆದರೆ, ಕ್ರಿಕೆಟ್ ಆಟಗಾರ ಸಚಿನ್ ಗಾಗಿ ಸಂವಿಧಾನದ ನಿಯಮಗಳು ತಿದ್ದುಪಡಿ ಮಾಡಲಾಗಿದೆ. [ಸಚಿನ್ ಪ್ರವ್ರೇಶಕ್ಕೆ ಬಂದ ಪ್ರತಿಕ್ರಿಯೆಗಳನ್ನು ಓದಿ]
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications